ಸಂಪುಟ ಸೇರುವವರ ಪಟ್ಟಿ ಅಂತಿಮ, ಇಂದು ಪ್ರಮಾಣ ವಚನ
ಬೆಂಗಳೂರು, ಅಕ್ಟೋಬರ್ 29 : ಸಚಿವ ಸಂಪುಟ ವಿಸ್ತರಣೆ ಬಿಕ್ಕಟ್ಟು ಬಗೆಹರಿದಿದೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಸೇರಿದಂತೆ ಮೂವರು ಸಿದ್ದರಾಮಯ್ಯ ಸಂಪುಟ ಸೇರಲಿದ್ದು, ಗುರುವಾರ ಸಂಜೆ ಪ್ರಮಾಣ ವಚನ ಸಮಾರಂಭ ನಡೆಯಲಿದೆ.
ಬುಧವಾರ
ಸಂಜೆ
ಕರ್ನಾಟಕ
ಕಾಂಗ್ರೆಸ್
ಉಸ್ತುವಾರಿ
ದಿಗ್ವಿಜಯ್
ಸಿಂಗ್
ಅವರನ್ನು
ಭೇಟಿ
ಮಾಡಿದ
ಬಳಿಕ
ಮಾತನಾಡಿದ
ಮುಖ್ಯಮಂತ್ರಿ
ಸಿದ್ದರಾಮಯ್ಯ
ಅವರು
'ನಾಲ್ವರು
ಸಚಿವರು
ಸಂಪುಟ
ಸೇರಲಿದ್ದಾರೆ.
ಗುರುವಾರ
ಸಂಜೆ
4.30ಕ್ಕೆ
ರಾಜಭವನದಲ್ಲಿ
ಪ್ರಮಾಣವಚನ
ಸ್ವೀಕಾರ
ಸಮಾರಂಭ
ನಡೆಯಲಿದೆ'
ಎಂದು
ಹೇಳಿದರು.
[ಸಂಪುಟ
ಸೇರುವವರ
ಪಟ್ಟಿ
ಬದಲಾವಣೆ]
ಸಂಪುಟ ಸೇರುವವರು : ಕೆಪಿಸಿಸಿ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಡಾ.ಜಿ.ಪರಮೇಶ್ವರ, ಹಾಸನ ಜಿಲ್ಲೆ ಅರಕಲಗೂಡು ಶಾಸಕ ಎ.ಮಂಜು, ಧಾರವಾಡ ಶಾಸಕ ವಿನಯ್ ಕುಲಕರ್ಣಿ, ಹಾವೇರಿ ಜಿಲ್ಲೆಯ ಹಾನಗಲ್ ಶಾಸಕ ಮನೋಹರ ತಹಶೀಲ್ದಾರ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. [ಕೆಪಿಸಿಸಿ ಅಧ್ಯಕ್ಷ ಪಟ್ಟ ಯಾರಿಗೆ?]
ಪಟ್ಟು ಸಡಿಲಿಸಿದ ಪರಮೇಶ್ವರ : ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ ಅವರು ಸಿದ್ದರಾಮಯ್ಯ ಸಂಪುಟ ಸೇರುವುದಾದದರೆ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಪಟ್ಟು ಹಿಡಿದಿದ್ದರು. ಪಕ್ಷದ ಅಧ್ಯಕ್ಷೆ ಸೋನಿಯಾ ಅವರು ಮನವೊಲಿಸಿದ ನಂತರ ಸಂಪುಟ ಸೇರಲು ಒಪ್ಪಿಕೊಂಡಿದ್ದಾರೆ. ಆದರೆ, ಅವರಿಗೆ ಯಾವ ಖಾತೆ ನೀಡಲಾಗುತ್ತದೆ ಎಂಬುದು ಇನ್ನೂ ನಿಗೂಢವಾಗಿದೆ.
ಸಚಿವರಾಗಿ ಮುಂದುವರೆಯಲಿದ್ದಾರೆ : ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಸಂಪುಟ ಸೇರಲಿದ್ದಾರೆ. ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ಸ್ಪೀಕರ್ ಆಗಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ದೆಹಲಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, 'ಕಾಗೋಡು ತಿಮ್ಮಪ್ಪ ಅವರು ಸ್ಪೀಕರ್ ಆಗಿ, ಜಯಚಂದ್ರ ಅವರು ಕಾನೂನು ಸಚಿವರಾಗಿಯೇ ಮುಂದುವರಿಯುತ್ತಾರೆ' ಎಂದು ಸ್ಪಷ್ಟಪಡಿಸಿದರು.