ಮಹಾ ಕುಂಭಮೇಳಕ್ಕೆ ತೆರಳಿದ್ದ ಕರ್ನಾಟಕದ ನಾಲ್ವರು ಅಪಘಾತದಲ್ಲಿ ಸಾವು
ಬೆಂಗಳೂರು, ಫೆಬ್ರವರಿ 25: ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳಕ್ಕೆ ತೆರಳಿದ ಕರ್ನಾಟಕದ ಭಕ್ತರು ಅಪಘಾತದಲ್ಲಿ ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಮತ್ತೆ ನಾಲ್ವರು ಭಕ್ತರು ಭೀಕರ ಅಪಘಾತದಲ್ಲಿ ಅಸುನೀಗಿದ್ದಾರೆ. ವಿಜಯಪುರ ಜಿಲ್ಲೆಯ ಇಬ್ಬರು ಹಾಗೂ ಬೀದರ್ನ ಇಬ್ಬರು ಭಕ್ತರು ಮಹಾ ಕುಂಭ ಮೇಳದಿಂದ ಹಿಂದಿರುವಾಗ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಿಂದ 17 ಜನರ ತಂಡ ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳಕ್ಕೆ ತೆರಳಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮುಗಿಸಿ ಮರಳುವ ವೇಳೆ ಗುಜರಾತ್ನ ಪೋರ್ ಬಂದರ್ ಬಳಿ ಕರ್ನಾಟಕದ ಭಕ್ತಾದಿಗಳಿದ್ದ ವಾಹನಕ್ಕೆ ಎದುರಿಗೆ ಬಂದ ಟಿಪ್ಪರ್ಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಇಬ್ಬರು ಭಕ್ತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚಡಚಣ ಪಟ್ಟಣದ ನಿವಾಸಿಗಳಾದ ಮಲ್ಲಿಕಾರ್ಜುನ ಸದ್ದಲಗಿ (40) ಹಾಗೂ ವಿಶ್ವನಾಥ ಅವಜಿ (55) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಇನ್ನು ಉಳಿದವರಿಗೆ ಗಾಯಗಳಾಗಿದ್ದು, ಪೋರ್ ಬಂದರ್ನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಇನ್ನು ಅಪಘಾತದಲ್ಲಿ ವಾಹನ ಬಹುತೇಕ ಜಖಂ ಆಗಿದೆ ಎಂದು ತಿಳಿದು ಬಂದಿದೆ.
ಪ್ರಯಾಗ್ ರಾಜ್ನಿಂದ ಮರಳುವ ವೇಳೆ ಭೀಕರ ಅಪಘಾತ: ಬೀದರ್ ಮೂಲದ ಇಬ್ಬರು ದಾರುಣ ಸಾವು
ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳಕ್ಕೆ ತೆರಳಿ ಮರಳುವ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೀದರ್ ಮೂಲದ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ವರ್ದಾ ಬಳಿ ನಡೆದಿದೆ. ಕಳೆದ ಐದು ದಿನಗಳ ಹಿಂದೆ ಬೀದರ್ನ ಓಲ್ಡ್ ಸಿಟಿಯ ದರ್ಜಿಗಲ್ಲಿಯ 16 ಜನರು ಟಿಟಿ ವಾಹನದಲ್ಲಿ ಉತ್ತರ ಪ್ರದೇಶದ ಪ್ರಯಾಗ್ರಾಜ್ ಕುಂಭಮೇಳಕ್ಕೆ ತೆರಳಿದ್ದರು.
ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮುಗಿಸಿ ಅಲ್ಲಿಂದ ಕಾಶಿ ಹಾಗೂ ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿ ವಾಪಸ್ ಮರಳುವ ವೇಳೆ ಮಹಾರಾಷ್ಟ್ರದ ವರ್ದಾ ಬಳಿ ಚಾಲಕನ ನಿರ್ಲಕ್ಷ್ಯದಿಂದ ಟಿಟಿ ವಾಹನ ಲಾರಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದವರು ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳಿಗೆ ವರ್ದಾ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಇನ್ನು ಅಪಘಾತದ ಭೀಕರತೆಗೆ ಟಿಟಿ ವಾಹನ ಕೂಡ ಜಖಂಗೊಂಡಿಗೆ ಎನ್ನುವ ಮಾಹಿತಿ ಲಭ್ಯವಾಗಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications