NWKRTC: ನಾಳೆಯಿಂದ ಪಿಯುಸಿ ಪೂರಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ
ಹುಬ್ಬಳ್ಳಿ, ಏಪ್ರಿಲ್ 28: ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ನಾಳೆ ಸೋಮವಾರದಿಂದ (ಏಪ್ರಿಲ್ 29) ನಡೆಯಲಿರುವ ಪೂರಕ ಪರೀಕ್ಷೆಗಳಿಗೆ (ಪರೀಕ್ಷೆ-2) ಹಾಜರಾಗುತ್ತಿದ್ದಾರೆ. ಇದೀಗ ಈ ಎಲ್ಲ ವಿದ್ಯಾರ್ಥಿಗಳಿಗೆ ರಾಜ್ಯ ಸಾರಿಗೆ ಸಂಸ್ಥೆಯು ಸಿಹಿ ಸುದ್ದಿ ನೀಡಿದೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾ ಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆ ಆಗಿರುತ್ತಾರೆ. ಹೀಗಾಗಿ ಅವರಿಗೆ ತಮ್ಮ ನಿವಾಸದಿಂದ ಬೇರೆ ಪ್ರದೇಶದಲ್ಲಿರುವ ಪರೀಕ್ಷಾ ಕೇಂದ್ರಗಳವರೆಗೆ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.

ದ್ವಿತೀಯ ಪಿ.ಯು.ಸಿ ಪರೀಕ್ಷೆ-2 ಏಪ್ರಿಲ್ 29ರಿಂದ ಮುಂದಿನ ತಿಂಗಳು ಮೇ 16ರವರೆಗೆ ನಡೆಯಲಿವೆ. ಈ ಪರೀಕ್ಷೆಗಳಿಗೆ ಹಾಜರಾಗುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣವು ಅನುಕೂಲವಾಗಲಿದೆ.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಬಹುದು. ನಂತರ ಪರೀಕ್ಷೆ ಮುಗಿಸಿ ವಾಸ ಸ್ಥಳಕ್ಕೆ ಹಿಂದಿರುಗಲು ಸಂಸ್ಥೆಯ ನಗರ, ಉಪನಗರ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.
ಪಿಯುಸಿ -2 ಪರೀಕ್ಷೆ: ಹಾಜರಾಗುವ ವಿದ್ಯಾರ್ಥಿಗಳು
ನಾಳೆ ಸೋಮುವಾರದಿಂದ ನಡೆಯಲಿರುವ ದ್ವಿತೀಯ ಪಿಯುಸಿ -2 ಪೂರಕ ಪರೀಕ್ಷೆ ಗೆ ಕರ್ನಾಟಕದಲ್ಲಿ ಬರೋಬ್ಬರಿ 1,49,300 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಈಗಾಗಲೇ ಅವರೆಲ್ಲ ನೋಂದಣಿ ಮಾಡಿಕೊಂಡಿದ್ದಾರೆ. ಒಟ್ಟು 32 ಸಾವಿರ ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ ಪಾಸಾಗಿದ್ದರೂ ಸಹ ಫಲಿತಾಂಶ ಹೆಚ್ಚಳ ಮಾಡಲು ಮರು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದಾರೆ. ಒಂದೊಂದು ವಿಷಯ ಮೇಲೆ ಪರೀಕ್ಷೆಯು ಮಧ್ಯಾಹ್ನ 2-15 ರಿಂದ ಸಂಜೆ 04-30 ಗಂಟೆವರೆಗೆ ನಡೆಯಲಿವೆ.
ಪರೀಕ್ಷೆ-2 ವೇಳಾಪಟ್ಟಿ ಮಾಹಿತಿ
ಸೋಮವಾರ ಏಪ್ರಿಲ್ 29- ಕನ್ನಡ, ಅರೇಬಿಕ್, ಏಪ್ರಿಲ್ 30 -ಇತಿಹಾಸ / ಭೌತಶಾಸ್ತ್ರ, ಮೇ 02- ಇಂಗ್ಲಿಷ್, ಮೇ 03- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಮೇ 04 - ಭೂಗೋಳಶಾಸ್ತ್ರ, ಮನಃಶಾಸ್ತ್ರ, ರಸಾಯನಶಾಸ್ತ್ರ, ಗೃಹವಿಜ್ಞಾನ, ಮೂಲಗಣಿತ
ಮೇ 09- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣಶಾಸ್ತ್ರ.
ಮೇ 11- ಸಮಾಜಶಾಸ್ತ್ರ, ಭೂಗರ್ಭಶಾಸ್ತ್ರ, ಜೀವಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ, ಮೇ 13- ಅರ್ಥಶಾಸ್ತ್ರ, ಮೇ 14- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಮೇ 15- ಹಿಂದಿ, ಮೇ 16- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೆಬಿಕ್, ಫ್ರೆಂಚ್ ಹಾಗೂ ಮೇ 16- ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ಬ್ಯೂಟಿ ಅಂಡ್ವೆಲ್ನೆಸ್, ಆಟೋಮೊಬೈಲ್, ರೀಟೈಲ್ ವಿಷಯದ ಪರೀಕ್ಷೆಗಳು ನಡೆಯಲಿವೆ.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ












Click it and Unblock the Notifications