'ಡಿ.10ರಿಂದ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಉಚಿತ ಸ್ಕ್ಯಾನಿಂಗ್, ಡಯಾಲಿಸಿಸ್'
ಬೆಳಗಾವಿ, ನವೆಂಬರ್ 17: ಕೆಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ವೈದ್ಯರು ನಡೆಸುತ್ತಿರುವ ಧರಣಿ ಎಫೆಕ್ಟ್ ನಿಂದಾಗಿ ರಾಜ್ಯ ಸರಕಾರ ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಡಿಸೆಂಬರ್ 10 ರಿಂದ ಉಚಿತವಾಗಿ ಎಂಆರ್ ಐ ಹಾಗೂ ಸಿಟಿ ಸ್ಕ್ಯಾನ್ ಪರೀಕ್ಷೆಯನ್ನು ನಡೆಸುವುದಾಗಿ ಹೇಳಿದೆ.
ರಮೇಶ್ ಕುಮಾರ್ ಭಾವನಾತ್ಮಕ ಭಾಷಣ ಮತ್ತು ಬೆಳಗಾವಿಯ 10 ಬೆಳವಣಿಗೆಗಳು
ಆರೋಗ್ಯ ಸಚಿವ ರಮೇಶ್ ಕುಮಾರ್ ಅವರು ವಿಧಾನಸಭೆಯಲ್ಲಿ ಗುರುವಾರ ಈ ವಿಷಯ ಪ್ರಕಟಿಸಿದ್ದು, ತಾಲೂಕು ಆಸ್ಪತ್ರೆಗಳಲ್ಲಿ ಉಚಿತವಾಗಿ ಡಯಾಲಿಸಿಸ್, ಜಿಲ್ಲಾಸ್ಪತ್ರೆಗಳಲ್ಲಿ ಎಂಆರ್ ಐ ಹಾಗೂ ಸಿಟಿ ಸ್ಕ್ಯಾನ್ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು.
ಚಿತ್ರಗಳು : ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ
ಬೆಳಗಾವಿಯ ಚಳಿಗಾಲದ ಅಧಿವೇಶನದ ನಾಲ್ಕನೇ ದಿನದಂದು ಖಾಸಗಿ ಆಸ್ಪತ್ರೆ ವೈದ್ಯರ ಜತೆಗೆ ಡಯಾಲಿಸಿಸ್ ಕೇಂದ್ರಗಳೂ ಮುಷ್ಕರಕ್ಕೆ ಮುಂದಾದ ಬಗ್ಗೆ ಪ್ರಶ್ನೆ ಎದುರಾದಾಗ ''ಆರೋಗ್ಯ ಕ್ಷೇತ್ರದಲ್ಲೇ ಅತ್ಯಂತ ಮಹತ್ವದ ನಿರ್ಧಾರವನ್ನು ಸರಕಾರ ತೆಗೆದುಕೊಳ್ಳುವ ಭಾಗವಾಗಿ ಎಂಆರ್ ಐ ಹಾಗೂ ಸಿಟಿ ಸ್ಕ್ಯಾನ್ ಪರೀಕ್ಷೆಯನ್ನು ಉಚಿತವಾಗಿ ನಡೆಸಲಿದೆ.
ಜತೆಗೆ ತಾಲೂಕು ಆಸ್ಪತ್ರೆಯಲ್ಲಿ ಉಚಿತವಾಗಿ ಡಯಾಲಿಸಿಸ್ ನಡೆಸಲಾಗುತ್ತದೆ. ಇದಕ್ಕೆ ವರ್ಗ, ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ದಾರರು ಎಂಬ ತಾರತಮ್ಯವಿಲ್ಲ ಎಂದು ತಿಳಿಸಿದರು.