ಗುಡ್ ನ್ಯೂಸ್: 'ಶೀಘ್ರದಲ್ಲೇ ಪೌರಕಾರ್ಮಿಕರಿಗೆ ಉಚಿತ ನಿವೇಶನ'
ಮಾಗಡಿ,ಜನವರಿ 04: ರಾಜ್ಯ ಸರ್ಕಾರ ಶೀಘ್ರದಲ್ಲಿಯೇ ಪೌರಕಾರ್ಮಿಕರಿಗೆ ಗುಡ್ ನ್ಯೂಸ್ ನೀಡಲಿದೆ. ಪೌರಕಾರ್ಮಿಕರಿಗೆ ಬೇಡಿಕೆಯಂತೆ ಶೀಘ್ರದಲ್ಲೆ 2 ಎಕರೆ ಜಾಗ ನಿಗದಿ ಮಾಡಿ ಉಚಿತ ನಿವೇಶನ ಹಂಚಿ ಮನೆಗಳ ನಿರ್ಮಾಣಕ್ಕೆ ನೆರವು ನೀಡಲಾಗುವುದು ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಭರವಸೆ ನೀಡಿದರು.
ಈ ಕುರಿತು ಮಾಗಡಿಯ ಅಂಬೇಡ್ಕರ್ ಭವನದಲ್ಲಿ ಪುರಸಭೆ, ತಾಲೂಕು ಪೌರಸೇವಾ ನೌಕರರ ಸಂಘದ ಸಹಯೋಗದಲ್ಲಿ ಆಯೋಜಿಸಿದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,ಪಟ್ಟಣವನ್ನು ಸ್ವಚ್ಛ ಹಾಗೂ ಸುಂದರವಾಗಿ ಕಾಪಾಡುವಲ್ಲಿ ಪೌರಕಾರ್ಮಿಕರಕಾರ್ಯ ಶ್ಲಾಘಿಸಿದ ಅವರು, ಪೌರಕಾರ್ಮಿಕರ ದಿನಾಚರಣೆ ಮೂಲಕ ಅವರನ್ನು ಗೌರವಿಸುವುದರ ಜತೆಗೆ ಅವರ ಬೇಡಿಕೆ ಈಡೇರಿಸಲಾಗುವುದು ಎಂದು ತಿಳಿಸಿದರು.

ಪೌರ ಕಾರ್ಮಿಕರಿಗಾಗಿ ಈಗಾಗಲೇ ತಿರುಮಲೆಯಲ್ಲಿ ಮನೆಗಳನ್ನು ನಿರ್ಮಿಸಿದ್ದು, ಪೌರ ಕಾರ್ಮಿಕರು ನಮಗೆ ಕಟ್ಟಡ ಬೇಡ ಜಾಗ ನೀಡಿದರೆ ಸಾಕು ಎಂದು ಹೇಳಿದ್ದರಿಂದ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಕುಮಾರ್ ಅವರಿಗೆ ಎರಡು ಎಕೆರೆ ಜಾಗ ಗುರುತಿಸಲು ತಿಳಿಸಿದ್ದು, ಆದಷ್ಟು ಬೇಗ ನಿವೇಶನ ನೀಡಲಾಗುವುದು, ಹೊರಗುತ್ತಿಗೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪುರಸಭಾ ನೀರು ಸರಬರಾಜು ನೌಕರರನ್ನು ಹಾಗೂ ಪೌರ ಕಾರ್ಮಿಕರ ಕೆಲಸ ಕಾಯಂಗೊಳಿಸಲು ಸದನದಲ್ಲಿ ಚರ್ಚಿಸಲಾಗುವುದು ಎಂದು ಕಾಂಗ್ರೆಸ್ ಶಾಸಕ ಬಾಲಕೃಷ್ಣ ಭರವಸೆ ನೀಡಿದ್ದಾರೆ.
ಜಿಲ್ಲಾ ಪೌರಸೇವಾ ನೌಕರರ ಸೇವಾ ಸಂಘದ ಅಧ್ಯಕ್ಷ ನಾಗರಾಜು ಮಾತನಾಡಿ, ಪೌರ ಕಾರ್ಮಿಕರಿಗೆ ಸರ್ಕಾರದಿಂದ ಬರಬೇಕಾದ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಶಾಸಕರಿಂದ ಆಗಬೇಕು. ಪ್ರತಿ 2 ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಬೇಕು. ಬೆಳಗಿನ ತಿಂಡಿ ಶುಚಿಯಾಗಿ ನೀಡಬೇಕು. ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ಶಿಕ್ಷಣವನ್ನು ಕೊಡಿಸುವಂತೆ ಹಾಗೂ ತಮ್ಮ ಪ್ರಾಣದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಕಾಯಂ ನೌಕರರನ್ನಾಗಿ ಮಾಡುವಂತೆ ಮನವಿ ಮಾಡಿದರು.
ಪುರಸಭಾಧ್ಯಕ್ಷೆ ರಮ್ಯಾ ಮಾತನಾಡಿ, ನಗರದ ಸ್ವಚ್ಛತೆಗಾಗಿ ಶ್ರಮಿಸುವ ಪೌರಕಾರ್ಮಿಕರ ಕಾರ್ಯ ಶ್ಲಾಘನೀಯ. ರ್ವಜನಿಕರ ಆರೋಗ್ಯ ರಕ್ಷಣೆಗೆ ಬೀದಿಗಳಿದು ತಮ್ಮ ಪಾಲಿನ ಕರ್ತವ್ಯ ಪ್ರಾಮಾಣಿಕವಾಗಿ ಮಾಡುತ್ತಿರುವ ಪೌರಕಾರ್ಮಿಕರಿಗೆ ಜನರ ಪರವಾಗಿ ತುಂಬು ಹೃದಯದ ಅಭಿನಂದನೆ ಸಲ್ಲಿಸುತ್ತೇನೆ. ಹೊರಗುತ್ತಿಗೆದಾರರ ಬದುಕಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸಲು ಹಾಗೂ ಪೌರಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ತಿಳಿಸಿದರು.
ಪುರಸಭಾ ಸದಸ್ಯ ಎಂ.ಎನ್.ಮಂಜುನಾಥ್ ಮಾತನಾಡಿ, ಹಬ್ಬ, ಉತ್ಸವ ಎನ್ನದೆ ಕೆಲಸ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು ದೇವರ ಮಕ್ಕಳು ಎಂದರೆ ತಪ್ಪಾಗಲಾರದು. ಅವರು ಮಾಡುವ ಕೆಲಸಕ್ಕೆ ನ್ಯಾಯ ಒದಗಿಸಲು ಶಾಸಕರು ಪುರಸಭಾ ವ್ಯಾಪ್ತಿಯಲ್ಲಿ ಅರ್ಧ ನಿವೇಶನವನ್ನಾದರೂ ನೀಡಬೇಕು. ಎಲ್ಲಾ ಸದಸ್ಯರನ್ನು ಗಣನೆಗೆ ತೆಗೆದುಕೊಂಡು ಕಾರ್ಯಕ್ರಮಗಳನ್ನು ರೂಪಿಸುವಂತೆ ಸಲಹೆ ನೀಡಿದರು.
ಪುರಸಭೆ, ತಾಲೂಕು ಪೌರಸೇವಾ ನೌಕರರ ಸಂಘದ ಸಹಯೋಗದಲ್ಲಿ ಆಯೋಜಿಸಿದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಪೌರ ಕಾರ್ಮಿಕರನ್ನು ಸನ್ಮಾಸಲಾಯಿತು. ಕಾರ್ಮಿಕರಿಗಾಗಿ ಆಯೋಜಿಸಿದ್ದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪುರಸಭಾ ಮುಖ್ಯಾಧಿಕಾರಿ ಶಿವರುದ್ರಯ್ಯ ಉಪಾಧ್ಯಕ್ಷ ರಿಯಾಜ್ ಅಹಮದ್, ಸ್ಥಾಯಿ ಸಮಿತಿ ಅಧ್ಯಕ್ಷ ಶಿವಕುರ್ಮಾ, ಪುರಸಭಾ ಮಾಜಿ ಅಧ್ಯಕ್ಷ ರಂಗಹನುಮಯ್ಯ, ಪುರಸಭಾ ಸದಸ್ಯರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications