Free Solar Rooftop Scheme 2024: ಉಚಿತ ಸೌರ ಮೇಲ್ಛಾವಣಿ ಯೋಜನೆ ನೋಂದಣಿ ಪ್ರಾರಂಭಿಸಿದ ಅಂಚೆ ಇಲಾಖೆ
ಬೆಂಗಳೂರು, ಮಾರ್ಚ್ 05: ಸೌರ ಮೇಲ್ಛಾವಣಿ ಯೋಜನೆ 2024 ಯನ್ನು ಪ್ರಧಾನಿ ನರೇಂದ್ರ ಮೋದಿ ಪ್ರಾರಂಭಿಸಿದ್ದಾರೆ. ಈ ಯೋಜನೆಯು ಬಡ ವರ್ಗಕ್ಕೆ ಸೇರಿದ ಅಥವಾ ದುರ್ಬಲ ಆರ್ಥಿಕ ಪರಿಸ್ಥಿತಿ ಹೊಂದಿರುವ ಜನರಿಗೆ ಕರೆಂಟ್ ಬಿಲ್ ಕಡಿಮೆ ಮಾಡುತ್ತದೆ. ಈ ಯೋಜನೆಯಲ್ಲಿ, ಸೋಲಾರ್ ಪ್ಯಾನಲ್ಗಳನ್ನು ಅವರ ಮನೆಯ ಮೇಲ್ಛಾವಣಿಯಲ್ಲಿ ಅಳವಡಿಸಲಾಗುತ್ತದೆ.
ಈ ಯೋಜನೆ ಬಳಿಕ ಬಡ ನಾಗರಿಕರು ಕರೆಂಟ್ ಬಿಲ್ಗಳನ್ನು ಪಾವತಿಸುವ ಅಗತ್ಯವಿಲ್ಲ ಎಂದು ಹೇಳಲಾಗಿದೆ. ದೇಶದ ಹಲವು ಭಾಗಗಳಲ್ಲಿ ಈಗಾಗಲೇ ಈ ಯೋಜನೆಯ ನೋಂದಣಿ ಶುರುವಾಗಿದೆ. ರಾಜ್ಯದಲ್ಲಿಯೂ ಅಂಚೆ ಇಲಾಖೆ ನೌಕರರು ಜನರ ಬಳಿ ಹೋಗಿ ನೋಂದಣಿ ಮಾಡಿಸುತ್ತಿದ್ದಾರೆ. ರಾಜ್ಯದ ಅಂಚೆ ಇಲಾಖೆಯ ನೌಕರರು ಭಾನುವಾರವೂ ಕೆಲಸದಲ್ಲಿ ನಿರತರಾಗಿದ್ದು, ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜಿಲಿ ಯೋಜನೆ ಅಡಿಯಲ್ಲಿ ನೋಂದಾಯಿಸಲು ಆಸಕ್ತಿ ಹೊಂದಿರುವ ಕುಟುಂಬಗಳನ್ನು ನೊಂದಾಯಿಸಿದ್ದಾರೆ.

ಫೆಬ್ರವರಿ 15 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದ ಈ ಯೋಜನೆಯ ಮೂಲಕ ಮನೆಗಳಿಗೆ ತಮ್ಮ ಛಾವಣಿಯ ಮೇಲೆ ಸೌರ ಫಲಕಗಳನ್ನು ಅಳವಡಿಸಲು ಸಹಾಯಧನವನ್ನು ಒದಗಿಸುತ್ತದೆ. ದೇಶಾದ್ಯಂತ 1 ಕೋಟಿ ಮನೆಗಳನ್ನು ನಿರ್ಮಿಸುವ ಗುರಿಯನ್ನು ಈ ಯೋಜನೆ ಹೊಂದಿದೆ.
"ನಾವು ಈ ಯೋಜನೆಯ ನೋಂದಣಿಯನ್ನು ಒಂದೆರಡು ದಿನಗಳ ಹಿಂದೆ ನಮ್ಮ ನೆಟ್ವರ್ಕ್ನಲ್ಲಿ ಪ್ರಾರಂಭಿಸಿದ್ದೇವೆ. ನಾವು 5 ಲಕ್ಷ ಕುಟುಂಬಗಳನ್ನು ಗುರಿಯಾಗಿಸಿಕೊಂಡಿದ್ದೇವೆ ಮತ್ತು ಇದುವರೆಗೆ ಸರಿಸುಮಾರು 20,000 ಮನೆಗಳನ್ನು ನೋಂದಾಯಿಸಿದ್ದೇವೆ" ಎಂದು ಮುಖ್ಯ ಪೋಸ್ಟ್ಮಾಸ್ಟರ್ ಜನರಲ್ (ಸಿಪಿಎಂಜಿ), ಕರ್ನಾಟಕ ಪೋಸ್ಟಲ್ ಸರ್ಕಲ್, ಎಸ್ ರಾಜೇಂದ್ರ ಕುಮಾರ್ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ಗೆ ತಿಳಿಸಿದ್ದಾರೆ.

ಜನರು ಅಂಚೆ ಕಚೇರಿಗಳಲ್ಲಿ, ಗ್ರಾಮ ದಕ್ ಸೇವಕರಲ್ಲಿ ಜನರು ಯೋಜನೆಗೆ ನೋಂದಾಯಿಸಿಕೊಳ್ಳಬಹುದು ಅಥವಾ ಈ ಸಂಬಂಧವಾಗಿ ಮನೆ-ಮನೆಗೆ ಸಮೀಕ್ಷೆ ನಡೆಸುತ್ತಿರುವ ನಮ್ಮ ಅಂಚೆ ನೌಕರರನ್ನು ಸಂಪರ್ಕಿಸಬಹುದು. ಇದಕ್ಕೆ ಕಳೆದ ಆರು ತಿಂಗಳ ವಿದ್ಯುತ್ ಬಿಲ್ ಕಡ್ಡಾಯವಾಗಿದೆ. ರಾಜ್ಯಾದ್ಯಂತ ಅಂಚೆ ಸಿಬ್ಬಂದಿ ವಾರಾಂತ್ಯದಲ್ಲಿ ಸಾಧ್ಯವಾದಷ್ಟು ಮನೆಗಳನ್ನು ನೊಂದಾಯಿಸುವ ಕೆಲಸ ಮಾಡಿದ್ದಾರೆ ಎಂದು ಎಸ್ ರಾಜೇಂದ್ರ ಕುಮಾರ್ ಹೇಳಿದ್ದಾರೆ.
ಇದು ಇಂಡಿಯಾ ಪೋಸ್ಟ್ ನಡೆಸಿದ ಅಖಿಲ ಭಾರತ ಅಭಿಯಾನದ ಭಾಗವಾಗಿದೆ. ಕೇಂದ್ರದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯವು ನಿರ್ವಹಿಸುವ ಈ ಯೋಜನೆಯು ದೇಶಾದ್ಯಂತ ಮನೆಗಳಲ್ಲಿ ಪರಿಸರ ಸ್ನೇಹಿ ವಿದ್ಯುತ್ ಉತ್ಪಾದನೆ ಮಾಡುವುದನ್ನು ಖಚಿತಪಡಿಸುತ್ತದೆ ಎಂದು ಅಂಚೆ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.
ಈ ಯೋಜನೆಯು ಸರ್ಕಾರಕ್ಕೆ ವಾರ್ಷಿಕ 75,000 ಕೋಟಿ ವಿದ್ಯುತ್ ವೆಚ್ಚವನ್ನು ಉಳಿಸುವ ನಿರೀಕ್ಷೆಯಿದೆ ಎಂದು ಸಚಿವಾಲಯದ ಅಧಿಕೃತ ವೆಬ್ಸೈಟ್ ಹೇಳುತ್ತದೆ. ಸೋಲಾರ್ ಪ್ಯಾನಲ್ ಅಳವಡಿಸಲು ಶೇ.40ರಷ್ಟು ಸಬ್ಸಿಡಿ ಹಾಗೂ ತಿಂಗಳಿಗೆ 300 ಯೂನಿಟ್ ಉಚಿತ ವಿದ್ಯುತ್ ಸಿಗಲಿದೆ. ಹೆಚ್ಚುವರಿ ವಿದ್ಯುತ್ ಉತ್ಪಾದಿಸುವವರು ಅವುಗಳನ್ನು ಗ್ರಿಡ್ಗೆ ವಾಪಸ್ ಮಾರಾಟ ಮಾಡುವ ಮೂಲಕ ಹಣಗಳಿಸಬಹುದು ಎಂದು ಸಿಪಿಎಂಜಿ ಹೇಳಿದೆ.
-
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications