ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಉಚಿತ ವೈ-ಫೈ
ರಾಜ್ಯದ ಎಲ್ಲಾ ಪದವಿ ಕಾಲೇಜುಳಿಗೆ ಉಚಿತ ವೈಫೈ ಸೌಲಭ್ಯವನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.ಮೊದಲ ಹಂತದಲ್ಲಿ 135 ಕಾಲೇಜುಗಳಲ್ಲಿ ವೈಫೈ ವ್ಯವಸ್ಥೆ ಕಲ್ಪಿಸಲಾಗುತ್ತದೆ.ಈ ಯೋಜನೆ ಯಾವಾಗ ಜಾರಿಗೆ ಬರಲಿದೆ ಎಂಬುವುದು ಪ್ರಕಟಿಸಿಲ್ಲ.
ಬೆಳಗಾವಿ, ನವೆಂಬರ್. 16 : ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ರಾಜ್ಯದ ಎಲ್ಲಾ ಸರ್ಕಾರಿ ಪದವಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.
ಸರ್ಕಾರಿ ಪದವಿ ಕಾಲೇಜುಗಳಲ್ಲಿ ಇನ್ನು ಮುಂದೆ ಉಚಿತ ವೈ-ಫೈ ಸೌಲಭ್ಯ ದೊರೆಯಲಿದೆ. 135 ಕಾಲೇಜುಗಳಲ್ಲಿ ಮೊದಲ ಹಂತದಲ್ಲಿ ವೈ-ಫೈ ಸೌಲಭ್ಯ ಕಲ್ಪಿಸಲು ಸರ್ಕಾರ ನಿರ್ಧರಿಸಿದೆ ಎಂದು ಬೆಳಗಾವಿಯಲ್ಲಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ 412 ಸರ್ಕಾರಿ ಪದವಿ ಕಾಲೇಜುಗಳ ಪೈಕಿ ಮೊದಲ ಹಂತದಲ್ಲಿ 135 ಕಾಲೇಜುಗಳಲ್ಲಿ ವೈ-ಫೈ ವ್ಯವಸ್ಥೆ ಕಲ್ಪಿಸಲಾಗುತ್ತದೆ.
ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಲ್ಯಾಪ್ ಟಾಪ್ ಮತ್ತು ಕಂಪ್ಯೂಟರ್ ಸೌಲಭ್ಯ ಬಳಸಿಕೊಂಡು ಹೆಚ್ಚಿನ ಜ್ಞಾನವನ್ನು ಪಡೆಯುವ ಉದ್ದೇಶದಿಂದ ಉಚಿತ ವೈ-ಫೈ ಸೇವೆ ನೀಡಲಾಗುತ್ತಿದೆ ಎಂದು ಹೇಳಿದರು.
ವೈ-ಫೈ ಸೇವೆಯ ಜೊತೆ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ ಟಾಪ್ ವಿತರಣೆ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ಈ ಯೋಜನೆಯನ್ನು ಯಾವಾಗ ಜಾರಿಗೆ ತರಲಾಗುತ್ತದೆ ಎಂಬ ನಿಖರ ದಿನಾಂಕ ಪ್ರಕಟಿಸಿಲ್ಲ. ಉಚಿತ ವೈಫೈ ನೀಡಲು ಮುಂದಾಗಿರುವ ಈ ಸರ್ಕಾರ ಯೋಜನೆಯನ್ನು ವಿದ್ಯಾರ್ಥಿಗಳು ಸದ್ಭಳಕೆ ಮಾಡಿಕೊಳ್ಳತ್ತಾರೆಯೋ ಎಂಬುವುದು ಮುಂದಿರುವ ಪ್ರಶ್ನೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications