ಕೆಎಸ್ ಆರ್ ಟಿಸಿ ವಿದ್ಯಾರ್ಥಿ ಬಸ್ ಪಾಸ್ ದರ ಏರಿಕೆ ಇಲ್ಲ, ಇದೇ 19ರಿಂದ ವಿತರಣೆ
ಬೆಂಗಳೂರು, ಜೂನ್ 15: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ ಆರ್ ಟಿಸಿ) 2019-20ನೇ ಸಾಲಿಗೆ ಇದೇ ಜೂನ್ 19ರಿಂದ ವಿದ್ಯಾರ್ಥಿ ಬಸ್ ಪಾಸುಗಳನ್ನು ವಿತರಿಸಲಿದೆ. ನಿಗಮದ ಎಲ್ಲಾ ವಿಭಾಗಗಳಲ್ಲಿ ಪಾಸ್ ವಿತರಣೆ ನಡೆಯಲಿದೆ. ಕಳೆದ ವರ್ಷದ ಬಸ್ ಪಾಸ್ ದರಗಳನ್ನೇ ಈ ವರ್ಷವೂ ಮುಂದುವರೆಸಲಾಗಿದ್ದು, ದರದಲ್ಲಿ ಯಾವುದೇ ಏರಿಕೆಯಾಗಿಲ್ಲ.
ಹತ್ತು ತಿಂಗಳ ಅವಧಿಗೆ ವಿದ್ಯಾರ್ಥಿ ಪಾಸ್ ಇರಲಿದ್ದು, ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ 150 ದರವನ್ನು ನಿಗದಿಪಡಿಸಲಾಗಿದೆ. ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ 750 ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ 550 ರೂಪಾಯಿ ಇರಲಿದೆ.
ಪಿ.ಯು.ಸಿ, ಪದವಿ, ಡಿಪ್ಲೊಮಾ ವಿದ್ಯಾರ್ಥಿಗಳಿಗೆ 1050 ರೂಪಾಯಿ, ವೃತ್ತಿಪರ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ 1550 ರೂಪಾಯಿಯನ್ನು ನಿಗದಿಪಡಿಸಲಾಗಿದೆ. ಸಂಜೆ ಕಾಲೇಜು, ಪಿಎಚ್.ಡಿ ವಿದ್ಯಾರ್ಥಿಗಳಿಗೆ 1350 ರೂಪಾಯಿ ದರ ಇರಲಿದೆ. ಈ ಎಲ್ಲಾ ವಿಭಾಗದ ಪಾಸುಗಳಿಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 150 ರೂಪಾಯಿಯನ್ನು ನಿಗದಿಪಡಿಸಲಾಗಿದೆ.

ಐಟಿಐ ವಿದ್ಯಾರ್ಥಿಗಳಿಗೆ 12 ತಿಂಗಳ ಅವಧಿಗೆ ವಿದ್ಯಾರ್ಥಿ ಪಾಸ್ ನೀಡುತ್ತಿದ್ದು, ಸಾಮಾನ್ಯ ವರ್ಗದವರಿಗೆ 1310 ರೂ ಇದ್ದರೆ, ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳಿಗೆ 160 ದರ ಇರಲಿದೆ.
ಇತ್ತೀಚೆಗಷ್ಟೆ ಬಿಎಂಟಿಸಿಯು ವಿದ್ಯಾರ್ಥಿ ಬಸ್ ಪಾಸ್ ದರವನ್ನು ಏರಿಸಿದ್ದು, ಇದರ ಬೆನ್ನಲ್ಲೇ ಕೆಎಸ್ ಆರ್ ಟಿಸಿ ಕೂಡ ವಿದ್ಯಾರ್ಥಿ ಬಸ್ ಪಾಸ್ ದರ ಏರಿಸಲಿದೆ ಎನ್ನಲಾಗಿತ್ತು. ಆದರೆ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.
ಜೊತೆಗೆ ಈ ವರ್ಷದಿಂದ ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಒದಗಿಸಲಾಗಿದೆ. ನಿಗಮದ ವೆಬ್ ಸೈಟ್ www.ksrtc.inನಲ್ಲಿ ವಿವರಗಳನ್ನು ಭರ್ತಿ ಮಾಡಿ ಮುದ್ರಿತ ಅರ್ಜಿಯನ್ನು ಶಾಲಾ/ ಕಾಲೇಜಿನ ಮುಖ್ಯಸ್ಥರ ಬಳಿ ಧೃಡೀಕರಣ ಪಡೆದು ಶುಲ್ಕ ಕಟ್ಟಿ ಪಾಸ್ ಪಡೆಯಬೇಕಾಗುತ್ತದೆ. ಆನ್ ಲೈನ್ ವ್ಯವಸ್ಥೆಯಿಲ್ಲದ ವಿದ್ಯಾರ್ಥಿಗಳು ಪ್ರತಿ ವರ್ಷದಂತೆ ಮ್ಯಾನ್ಯುಯಲ್ ಅರ್ಜಿಗಳನ್ನು ಭರ್ತಿಗೊಳಿಸಿ, ಶಾಲಾ/ ಕಾಲೇಜಿನ ಮುಖ್ಯಸ್ಥರಿಂದ ಸಹಿ ಪಡೆದು, ದೃಢೀಕರಣ ಸಹಿ ಪಡೆದು ಬಸ್ ಪಾಸ್ ಪಡೆಯಬೇಕಾಗುತ್ತದೆ. ಮ್ಯಾನ್ಯುಯಲ್ ಅರ್ಜಿಗಳ ನಮೂನೆ ನಿಗಮದ ವೆಬ್ ಸೈಟ್ ಹಾಗೂ ಬಸ್ ನಿಲ್ದಾಣಗಳಲ್ಲಿ ಲಭ್ಯವಿರುತ್ತದೆ.
ಶಾಲಾ/ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಜೂನ್ 30ರವರೆಗೆ ಉಚಿತವಾಗಿ ಪಯಣಿಸಲು ಅವಕಾಶ ನೀಡಲಾಗಿದ್ದು, ಅದಕ್ಕೂ ಮುನ್ನವೇ ಪಾಸ್ ಪಡೆದುಕೊಳ್ಳುವುದು ಸೂಕ್ತ ಎಂದು ನಿಗಮ ತಿಳಿಸಿದೆ.
-
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral












Click it and Unblock the Notifications