ಕೆಎಸ್ ಆರ್ ಟಿಸಿ ವಿದ್ಯಾರ್ಥಿ ಬಸ್ ಪಾಸ್ ದರ ಏರಿಕೆ ಇಲ್ಲ, ಇದೇ 19ರಿಂದ ವಿತರಣೆ
ಬೆಂಗಳೂರು, ಜೂನ್ 15: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ ಆರ್ ಟಿಸಿ) 2019-20ನೇ ಸಾಲಿಗೆ ಇದೇ ಜೂನ್ 19ರಿಂದ ವಿದ್ಯಾರ್ಥಿ ಬಸ್ ಪಾಸುಗಳನ್ನು ವಿತರಿಸಲಿದೆ. ನಿಗಮದ ಎಲ್ಲಾ ವಿಭಾಗಗಳಲ್ಲಿ ಪಾಸ್ ವಿತರಣೆ ನಡೆಯಲಿದೆ. ಕಳೆದ ವರ್ಷದ ಬಸ್ ಪಾಸ್ ದರಗಳನ್ನೇ ಈ ವರ್ಷವೂ ಮುಂದುವರೆಸಲಾಗಿದ್ದು, ದರದಲ್ಲಿ ಯಾವುದೇ ಏರಿಕೆಯಾಗಿಲ್ಲ.
ಹತ್ತು ತಿಂಗಳ ಅವಧಿಗೆ ವಿದ್ಯಾರ್ಥಿ ಪಾಸ್ ಇರಲಿದ್ದು, ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ 150 ದರವನ್ನು ನಿಗದಿಪಡಿಸಲಾಗಿದೆ. ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ 750 ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ 550 ರೂಪಾಯಿ ಇರಲಿದೆ.
ಪಿ.ಯು.ಸಿ, ಪದವಿ, ಡಿಪ್ಲೊಮಾ ವಿದ್ಯಾರ್ಥಿಗಳಿಗೆ 1050 ರೂಪಾಯಿ, ವೃತ್ತಿಪರ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ 1550 ರೂಪಾಯಿಯನ್ನು ನಿಗದಿಪಡಿಸಲಾಗಿದೆ. ಸಂಜೆ ಕಾಲೇಜು, ಪಿಎಚ್.ಡಿ ವಿದ್ಯಾರ್ಥಿಗಳಿಗೆ 1350 ರೂಪಾಯಿ ದರ ಇರಲಿದೆ. ಈ ಎಲ್ಲಾ ವಿಭಾಗದ ಪಾಸುಗಳಿಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 150 ರೂಪಾಯಿಯನ್ನು ನಿಗದಿಪಡಿಸಲಾಗಿದೆ.

ಐಟಿಐ ವಿದ್ಯಾರ್ಥಿಗಳಿಗೆ 12 ತಿಂಗಳ ಅವಧಿಗೆ ವಿದ್ಯಾರ್ಥಿ ಪಾಸ್ ನೀಡುತ್ತಿದ್ದು, ಸಾಮಾನ್ಯ ವರ್ಗದವರಿಗೆ 1310 ರೂ ಇದ್ದರೆ, ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳಿಗೆ 160 ದರ ಇರಲಿದೆ.
ಇತ್ತೀಚೆಗಷ್ಟೆ ಬಿಎಂಟಿಸಿಯು ವಿದ್ಯಾರ್ಥಿ ಬಸ್ ಪಾಸ್ ದರವನ್ನು ಏರಿಸಿದ್ದು, ಇದರ ಬೆನ್ನಲ್ಲೇ ಕೆಎಸ್ ಆರ್ ಟಿಸಿ ಕೂಡ ವಿದ್ಯಾರ್ಥಿ ಬಸ್ ಪಾಸ್ ದರ ಏರಿಸಲಿದೆ ಎನ್ನಲಾಗಿತ್ತು. ಆದರೆ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.
ಜೊತೆಗೆ ಈ ವರ್ಷದಿಂದ ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಒದಗಿಸಲಾಗಿದೆ. ನಿಗಮದ ವೆಬ್ ಸೈಟ್ www.ksrtc.inನಲ್ಲಿ ವಿವರಗಳನ್ನು ಭರ್ತಿ ಮಾಡಿ ಮುದ್ರಿತ ಅರ್ಜಿಯನ್ನು ಶಾಲಾ/ ಕಾಲೇಜಿನ ಮುಖ್ಯಸ್ಥರ ಬಳಿ ಧೃಡೀಕರಣ ಪಡೆದು ಶುಲ್ಕ ಕಟ್ಟಿ ಪಾಸ್ ಪಡೆಯಬೇಕಾಗುತ್ತದೆ. ಆನ್ ಲೈನ್ ವ್ಯವಸ್ಥೆಯಿಲ್ಲದ ವಿದ್ಯಾರ್ಥಿಗಳು ಪ್ರತಿ ವರ್ಷದಂತೆ ಮ್ಯಾನ್ಯುಯಲ್ ಅರ್ಜಿಗಳನ್ನು ಭರ್ತಿಗೊಳಿಸಿ, ಶಾಲಾ/ ಕಾಲೇಜಿನ ಮುಖ್ಯಸ್ಥರಿಂದ ಸಹಿ ಪಡೆದು, ದೃಢೀಕರಣ ಸಹಿ ಪಡೆದು ಬಸ್ ಪಾಸ್ ಪಡೆಯಬೇಕಾಗುತ್ತದೆ. ಮ್ಯಾನ್ಯುಯಲ್ ಅರ್ಜಿಗಳ ನಮೂನೆ ನಿಗಮದ ವೆಬ್ ಸೈಟ್ ಹಾಗೂ ಬಸ್ ನಿಲ್ದಾಣಗಳಲ್ಲಿ ಲಭ್ಯವಿರುತ್ತದೆ.
ಶಾಲಾ/ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಜೂನ್ 30ರವರೆಗೆ ಉಚಿತವಾಗಿ ಪಯಣಿಸಲು ಅವಕಾಶ ನೀಡಲಾಗಿದ್ದು, ಅದಕ್ಕೂ ಮುನ್ನವೇ ಪಾಸ್ ಪಡೆದುಕೊಳ್ಳುವುದು ಸೂಕ್ತ ಎಂದು ನಿಗಮ ತಿಳಿಸಿದೆ.
-
NWKRTC ನೇಮಕಾತಿ: ಏಪ್ರಿಲ್ನಲ್ಲಿ ವಿವಿಧ ಹುದ್ದೆಗಳ ಪರೀಕ್ಷೆ, ವೇಳಾಪಟ್ಟಿ ಪ್ರಕಟಿಸಿದ ಕೆಇಎ, ಪ್ರವೇಶ ಪತ್ರದ ಅಪ್ಡೇಟ್ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ












Click it and Unblock the Notifications