FSSAI: ಹಣ್ಣುಗಳನ್ನು ಕೃತಕವಾಗಿ ಮಾಗಿಸಲು ರಾಸಾಯನಿಕ ಬಳಕೆ: ಕಟ್ಟುನಿಟ್ಟಿನ ಕ್ರಮಕ್ಕೆ ಎಫ್‌ಎಸ್‌ಎಸ್‌ಎಐ ಸೂಚನೆ

ಮಾರುಕಟ್ಟೆಯಲ್ಲಿ ಮಾವು, ಬಾಳೆಹಣ್ಣು ಮತ್ತು ಪಪ್ಪಾಯಿ ಸೇರಿದಂತೆ ವಿವಿಧ ಹಣ್ಣುಗಳನ್ನು ಕೃತಕವಾಗಿ ಹಣ್ಣು ಮಾಡಲು ಕ್ಯಾಲ್ಸಿಯಂ ಕಾರ್ಬೈಡ್‌ನಂತಹ ಅಪಾಯಕಾರಿ ರಾಸಾಯನಿಕಗಳನ್ನು ಬಳಸುತ್ತಿರುವುದರ ವಿರುದ್ಧ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯವನ್ನು ಕಾಪಾಡಲು ಕಟ್ಟುನಿಟ್ಟಿನ ತಪಾಸಣೆ ನಡೆಸಿ, ಕಾನೂನುಬಾಹಿರವಾಗಿ ಹಣ್ಣು ಮಾಡುವ ಏಜೆಂಟ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಎಲ್ಲ ರಾಜ್ಯಗಳ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಆದೇಶ ನೀಡಿದೆ.

ಕೆಮಿಕಲ್‌ನಿಂದ ಕ್ಯಾನ್ಸರ್‌ ಸಾಧ್ಯತೆ

ಕ್ಯಾಲ್ಸಿಯಂ ಕಾರ್ಬೈಡ್ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಿರುವುದನ್ನು ಎಫ್‌ಎಸ್‌ಎಸ್‌ಎಐ ಮತ್ತೊಮ್ಮೆ ಸ್ಪಷ್ಟಪಡಿಸಿದ್ದು, ಈ ರಾಸಾಯನಿಕವು ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದೆ. ಕ್ಯಾಲ್ಸಿಯಂ ಕಾರ್ಬೈಡ್ ನೀರಿನೊಂದಿಗೆ ಸಂಪರ್ಕಕ್ಕೆ ಬಂದಾಗ ಬಿಡುಗಡೆಯಾಗುವ ಅಸೆಟಿಲೀನ್ ಅನಿಲವು ಆರ್ಸೆನಿಕ್ ಮತ್ತು ಫಾಸ್ಫರಸ್‌ನಂತಹ ವಿಷಕಾರಿ ಅಂಶಗಳನ್ನು ಹೊಂದಿರುತ್ತದೆ. ಇವುಗಳ ಸೇವನೆಯಿಂದ ವಾಂತಿ, ಅತಿಸಾರ, ಎದೆ ಉರಿ ಮತ್ತು ದೀರ್ಘಕಾಲದ ಬಳಕೆಯಿಂದ ಕ್ಯಾನ್ಸರ್‌ನಂತಹ ಅಪಾಯಕಾರಿ ಕಾಯಿಲೆಗಳು ಬರುವ ಸಾಧ್ಯತೆ ಇರುವುದರಿಂದ ಈ ಕ್ರಮ ಅನಿವಾರ್ಯವಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ.

FSSAI

ನೈಸರ್ಗಿಕವಾಗಿ ಹಣ್ಣು ಮಾಡಿ

ಹಣ್ಣಿನ ಮಂಡಿಗಳು ಮತ್ತು ದಾಸ್ತಾನು ಮಳಿಗೆಗಳ ಮೇಲೆ ನಿರಂತರ ನಿಗಾ ವಹಿಸುವಂತೆ ಸೂಚಿಸಿರುವ ಅಧಿಕಾರಿಗಳು, ಕೃತಕ ವಿಧಾನಕ್ಕೆ ಬದಲಾಗಿ ನೈಸರ್ಗಿಕ ಅಥವಾ ಸುರಕ್ಷಿತವಾದ ಎಥಿಲೀನ್ ಅನಿಲವನ್ನು ನಿಯಮಿತ ಪ್ರಮಾಣದಲ್ಲಿ ಬಳಸಲು ಪ್ರೋತ್ಸಾಹಿಸುವಂತೆ ತಿಳಿಸಿದ್ದಾರೆ. ಹಣ್ಣುಗಳನ್ನು ಖರೀದಿಸುವಾಗ ಗ್ರಾಹಕರು ಸಹ ಜಾಗರೂಕರಾಗಿರಬೇಕು ಮತ್ತು ಅಸಹಜ ಬಣ್ಣ ಅಥವಾ ವಾಸನೆಯಿರುವ ಹಣ್ಣುಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಈ ಮೂಲಕ ಮನವಿ ಮಾಡಲಾಗಿದೆ. ನಿಯಮ ಉಲ್ಲಂಘಿಸುವ ಮಾರಾಟಗಾರರ ವಿರುದ್ಧ ದಂಡ ಮತ್ತು ಪರವಾನಗಿ ರದ್ದತಿಯಂತಹ ಕಠಿಣ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಮುಂದಾಗಿದೆ.

ಪ್ರಮುಖವಾಗಿ ಮಾವು, ಬಾಳೆಹಣ್ಣು ಮತ್ತು ಪಪ್ಪಾಯಿಗಳನ್ನು ಹಣ್ಣು ಮಾಡಲು 'ಮಸಾಲಾ' ಎಂದು ಕರೆಯಲ್ಪಡುವ ಕ್ಯಾಲ್ಸಿಯಂ ಕಾರ್ಬೈಡ್ ಬಳಸುವುದನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಮಾವಳಿ 2011ರ ಅಡಿಯಲ್ಲಿ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈ ರಾಸಾಯನಿಕವು ವಾಂತಿ, ಚರ್ಮದ ಹುಣ್ಣು ಮತ್ತು ಗಂಟಲು ನೋವಿನಂತಹ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದು ಪ್ರಾಧಿಕಾರವು ಎಚ್ಚರಿಕೆ ನೀಡಿದೆ.

ಕೆಲವು ಆಹಾರ ಉದ್ಯಮ ಸಂಸ್ಥೆಗಳು (FBOs) ಬಾಳೆಹಣ್ಣು ಮತ್ತು ಇತರ ಹಣ್ಣುಗಳನ್ನು ಎಥೆಫೋನ್ ದ್ರಾವಣದಲ್ಲಿ ನೇರವಾಗಿ ಮುಳುಗಿಸಿ ಹಣ್ಣು ಮಾಡುತ್ತಿರುವುದು ಪ್ರಾಧಿಕಾರದ ಗಮನಕ್ಕೆ ಬಂದಿದೆ. ಎಫ್‌ಎಸ್‌ಎಸ್‌ಎಐ ಮಾರ್ಗಸೂಚಿಗಳ ಪ್ರಕಾರ, ಹಣ್ಣುಗಳು ಅಥವಾ ತರಕಾರಿಗಳಿಗೆ ಪುಡಿ ಅಥವಾ ದ್ರವ ರೂಪದ ಎಥಿಲೀನ್ ನೇರವಾಗಿ ಸಂಪರ್ಕಕ್ಕೆ ಬರುವುದು ಕಾನೂನುಬಾಹಿರವಾಗಿದೆ. ಎಥಿಲೀನ್ ಅನಿಲವನ್ನು ಸುರಕ್ಷಿತವಾಗಿ ಬಳಸುವ ವಿಧಾನದ ಬಗ್ಗೆ ಪ್ರಾಧಿಕಾರವು ಈಗಾಗಲೇ ಸ್ಪಷ್ಟ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅದನ್ನು ಹೊರತುಪಡಿಸಿ ನೇರ ರಾಸಾಯನಿಕ ಬಳಕೆಯು ಶಿಕ್ಷಾರ್ಹ ಅಪರಾಧವಾಗಿದೆ ಎಂದು ತಿಳಿಸಲಾಗಿದೆ.

ಈ ಅಕ್ರಮಗಳನ್ನು ತಡೆಗಟ್ಟಲು ಹಣ್ಣಿನ ಮಾರುಕಟ್ಟೆಗಳು, ಮಂಡಿಗಳು, ಸಗಟು ವ್ಯಾಪಾರಿಗಳು ಮತ್ತು ಶೇಖರಣಾ ಕೇಂದ್ರಗಳ ಮೇಲೆ ವಿಶೇಷ ಜಾಗೃತ ದಳಗಳ ಮೂಲಕ ದಾಳಿ ನಡೆಸಲು ಸೂಚಿಸಲಾಗಿದೆ. ಯಾವುದೇ ದಾಸ್ತಾನು ಮಳಿಗೆ ಅಥವಾ ಹಣ್ಣಿನ ಕ್ರೇಟ್‌ಗಳ ಬಳಿ ಕ್ಯಾಲ್ಸಿಯಂ ಕಾರ್ಬೈಡ್ ಪತ್ತೆಯಾದಲ್ಲಿ, ಅದನ್ನು ಉದ್ದೇಶಪೂರ್ವಕ ಕಾನೂನು ಉಲ್ಲಂಘನೆ ಎಂದು ಪರಿಗಣಿಸಿ ಎಫ್‌ಎಸ್ ಕಾಯಿದೆಯ ಸೆಕ್ಷನ್ 59ರ ಅಡಿಯಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಪ್ರಕ್ರಿಯೆ ಪ್ರಾರಂಭಿಸಲು ಆದೇಶಿಸಲಾಗಿದೆ. ಇದಕ್ಕಾಗಿ ಅಧಿಕಾರಿಗಳು ಗೋದಾಮುಗಳಲ್ಲಿ ಅಸಿಟಿಲೀನ್ ಅನಿಲದ ಇರುವಿಕೆಯನ್ನು ಪತ್ತೆಹಚ್ಚಲು 'ಸ್ಟ್ರಿಪ್ ಪೇಪರ್' ಪರೀಕ್ಷೆಗಳನ್ನು ನಡೆಸುವಂತೆಯೂ ಸೂಚನೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+