ಕರ್ನಾಟಕ ಸೇರಿದಂತೆ 8 ರಾಜ್ಯಗಳಲ್ಲಿ ಭಾನುವಾರ ಪೆಟ್ರೋಲ್ ರಜಾ
ಇಂಧನ ಉಳಿಸಲು ಪ್ರಧಾನಿ ನರೇಂದ್ರ ಮೋದಿ ನೀಡಿದ ನಿರ್ದೇಶನದಂತೆ ಪೆಟ್ರೋಲ್ ಡೀಲರ್ ಗಳ ಒಕ್ಕೂಟ ಕರ್ನಾಟಕ ಸೇರಿದಂತೆ ಒಟ್ಟು 8 ರಾಜ್ಯಗಳಲ್ಲಿ ಭಾನುವಾರ ಪೆಟ್ರೋಲ್ ಪಂಪ್ ಗಳನ್ನು ಬಂದ್ ಮಾಡಲು ನಿರ್ಧರಿಸಿದೆ.
ಬೆಂಗಳೂರು, ಏಪ್ರಿಲ್ 19: ಇನ್ನು ಮುಂದೆ ಕರ್ನಾಟಕದಲ್ಲಿ ಭಾನುವಾರ ಪೆಟ್ರೋಲ್ ಸಿಗುವುದಿಲ್ಲ. ಮೇ 14ರಿಂದ ಆರಂಭಿಸಿ ಕರ್ನಾಟಕದಾದ್ಯಂತ ಭಾನುವಾರದಂದು ಪೆಟ್ರೋಲ್ ಪಂಪ್ ಗಳನ್ನು ಬಂದ್ ಮಾಡಲಾಗುತ್ತದೆ.
ಇಂಧನ ಉಳಿಸಲು ಪ್ರಧಾನಿ ನರೇಂದ್ರ ಮೋದಿ ನೀಡಿದ ನಿರ್ದೇಶನದಂತೆ ಪೆಟ್ರೋಲಿಯಂ ಡೀಲರ್ ಗಳ ಒಕ್ಕೂಟ ಈ ನಿರ್ಧಾರಕ್ಕೆ ಬಂದಿದೆ. ಕರ್ನಾಟಕ ಸೇರಿದಂತೆ ಒಟ್ಟು 8 ರಾಜ್ಯಗಳಲ್ಲಿ ಈ ಸಂಪ್ರದಾಯ ಜಾರಿಗೆ ಬರಲಿದೆ. ಇದರಿಂದ ಕರ್ನಾಟಕ, ಕೇರಳ, ತಮಿಳುನಾಡು, ಪುದುಚೆರಿ, ತೆಲಂಗಾಣ, ಮಹಾರಾಷ್ಟ್ರ, ಹರ್ಯಾಣ ರಾಜ್ಯಗಳ 20,000 ಪೆಟ್ರೋಲ್ ಪಂಪ್ ಗಳ ಮೇಲೆ ಪರಿಣಾಮ ಬೀರಲಿದೆ.[ಹಳ್ಳಿಗಳಲ್ಲಿ ನೀರು ಕೊರತೆಗೆ ಜಿಲ್ಲಾಧಿಕಾರಿಗಳೇ ಹೊಣೆ: ಸಿಎಂ]
ಆ್ಯಂಬುಲೆನ್ಸ್ ನಂತಹ ತುರ್ತು ಸೇವೆಗಳಿಗೆ ಇಂಧನವನ್ನು ತುಂಬಿಸಬಹುದು. ಇದಕ್ಕಾಗಿ ಭಾನುವಾರದ ದಿನ ಕನಿಷ್ಠ ಒಬ್ಬ ವ್ಯಕ್ತಿ ಪೆಟ್ರೋಲ್ ಪಂಪ್ ಗಳಲ್ಲಿ ಇರಬೇಕು. ಈ ಕುರಿತು ಪೆಟ್ರೋಲ್ ಪಂಪ್ ಗಳಿಗೆ ಪೆಟ್ರೋಲಿಯಂ ಡೀಲರ್ ಗಳ ಒಕ್ಕೂಟ ಸುತ್ತೋಲೆ ಹೊರಡಿಸಲಿದೆ.[ಇಂದಿರಾ ಕ್ಯಾಂಟೀನ್ ಏಕೆ? ಹೈ ಕಮಾಂಡ್ ಗುಲಾಮಗಿರಿ ಬಿಡಿ]
ಹಲವು ವರ್ಷಗಳ ಹಿಂದೆಯೇ ಭಾನುವಾರದ ದಿನ ಪೆಟ್ರೋಲ್ ಪಂಪ್ ಗಳನ್ನು ಮುಚ್ಚುವ ನಿರ್ಧಾರಕ್ಕೆ ಬರಲಾಗಿತ್ತು. ಆದರೆ ತೈಲ ವರ್ತಕರ ವಿರೋಧದಿಂದ ಜಾರಿಗೆ ಬಂದಿರಲಿಲ್ಲ. ಆದರೆ ಈ ಬಾರಿ ಇದು ಜಾರಿಗೆ ಬರಲಿದೆ.
ಇನ್ನು ಭಾನುವಾರ ಪೆಟ್ರೋಲ್ ಪಂಪ್ ಮುಚ್ಚುವುದರಿಂದ ತಮಿಳುನಾಡಿನಲ್ಲಿ ಕನಿಷ್ಟ 150 ಕೋಟಿ ನಷ್ಟವಾಗಬಹುದು ಎಂದುಕೊಳ್ಳಲಾಗಿದೆ. ಉಳಿದ ರಾಜ್ಯಗಳಲ್ಇ ಸಾಮಾನ್ಯ ಬಾನುವಾರದ ಶೇಕಡಾ 40ರಷ್ಟು ನಷ್ಟವಾಗಬಹುದು ಎಂದು ಅಂದಾಜು ಮಾಡಲಾಗಿದೆ.