ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಉಪವಾಸ ಸತ್ಯಾಗ್ರಹ : ಬೇಡಿಕೆಗಳೇನು?
ಸರ್ಕಾರದ ವಿರುದ್ದ ಸಾರಿಗೆ ಮುಖಂಡ ಅನಂತ ಸುಬ್ಬರಾವ್ ನೇತೃತ್ವದಲ್ಲಿ ಬೆಳಗ್ಗೆ 10:30 ರಿಂದ 5 ಗಂಟೆಯವರೆಗೆ ನೌಕರರ ಉಪವಾಸ ಸತ್ಯಾಗ್ರಹ ನಡೆಯಲಿದೆ. ಸಾರಿಗೆ ನೌಕರರು ಇಂದು ಫ್ರೀಡಂಪಾರ್ಕ್ನಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದ್ದು, ಸಾರಿಗೆ ನೌಕರರನ್ನ ಅಬಕಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ಭೇಟಿ ಮಾಡಿ ಅಹವಾಲು ಸ್ವೀಕರಿದ್ದಾರೆ.
ಮಾರ್ಚ್ 4 ರಿಂದ ಸಾರಿಗೆ ನೌಕರರು ಆಹೋರಾತ್ರಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ಪ್ಲಾನ್ ರೂಪಿಸಿದ್ದಾರೆ. ಸೇವೆಯಿಂದ ವಜಾ ಆಗಿರುವ ಸಿಬ್ಬಂದಿಗೆ ನ್ಯಾಯ ಒದಗಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಿವೃತ್ತಿ ನೌಕರರು ಹಾಗೂ ಹಾಲಿ ನೌಕರರು ನಗರದ ಫ್ರೀಡಂ ಪಾರ್ಕ್ ನಲ್ಲಿ ಕುಟುಂಬ ಸಮೇತ ಹೋರಾಟ ನಡೆಸಲು ಮುಂದಾಗಿದ್ದಾರೆ. ಅಲ್ಲದೇ ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಬಸ್ ಗಳು ನಿಲ್ಲುತ್ತೆ, ಮುಷ್ಕರಕ್ಕೂ ಹೋಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಾರಿಗೆ ನೌಕರರ ಬೇಡಿಕೆಗಳೇನು?
ಮೂಲ ವೇತನದ 25% ವೇತನ ಹೆಚ್ಚಿಸಬೇಕು.
2020ರ ಜನವರಿ 1ರಿಂದ ಅನ್ವಯವಾಗುವಂತೆ ವೇತನ ಹೆಚ್ಚಳದ ಬಾಕಿ ಹಣ ನೀಡಬೇಕು.
2020ರ ಜನವರಿ 1ರಿಂದ ರಿಂದ ನಿವೃತ್ತ ನೌಕರರ ವೇತನ ಹೆಚ್ಚಳದ ಫಿಕ್ಸೇಷನ್ ಆಗಬೇಕು.
ನಿವೃತ್ತಿ ನೌಕರರಿಗೆ ಅಂತಿಮವಾಗಿ ಬರಬೇಕಾದ ಹಣ ಕೊಡಬೇಕು ಮತ್ತು 38 ತಿಂಗಳ ವೇತನ ಹೆಚ್ಚಳದ ಬಾಕಿ ನೌಕರರಿಗೆ ನೀಡಬೇಕು.
ಉಚಿತ ಔಷಧಿ ಸೇರಿದಂತೆ ವೈದ್ಯಕೀಯ ಸೌಲಭ್ಯ ನೀಡಬೇಕು
2021ರ ಮುಷ್ಕರದ ವೇಳೆ ಬಿಜೆಪಿ ಸರ್ಕಾರ ತೆಗೆದುಕೊಂಡಿರುವ ಎಲ್ಲಾ ರೀತಿಯ ಶಿಕ್ಷೆಗಳು ಹಿಂಪಡೆಯಬೇಕು.
ಎಲೆಕ್ಟ್ರಿಕ್ ಬಸ್ಗಳನ್ನು ಸಾರಿಗೆ ನಿಗಮಗಳೇ ಓಡಿಸಬೇಕು.
ಕೇಂದ್ರ ಸರ್ಕಾರ FAME-2 ಯೋಜನೆ ( ಎಲೆಕ್ಟ್ರಿಕ್ ಬಸ್ಗಳನ್ನು) ಖಾಸಗಿಯವರ ಮೂಲಕ ಓಡಿಸುವ ಖಾಸಗೀಕರಣವನ್ನು ವಿರೋಧಿಸಬೇಕು.
ಭ್ರಷಾಚಾರದ ಆಡಳಿತಕ್ಕೆ ಕಡಿವಾಣ ಹಾಕಬೇಕು.
ಎಲ್ಲಾ ನಿಗಮಗಳ ನೌಕರರ ಮುಂಬಡ್ತಿಗೆ ಕ್ರಮವಹಿಸುವುದು. ವಿವಿಧ ಭತ್ಯೆಗಳನ್ನ ಐದು ಪಟ್ಟು ಹೆಚ್ಚಿಸುವುದು.
ಆಡಳಿತ ವರ್ಗ ಏಕ ಪಕ್ಷೀಯವಾಗಿ ಸುತ್ತೋಲೆಗಳನ್ನು ತರುವ ಪದ್ಧತಿ ನಿಲ್ಲಿಸಿ, ಕಾರ್ಮಿಕ ಸಂಘಗಳ ಜತೆ ಮಾತುಕತೆ ನಡೆಸಿ ಉತ್ತಮ ಕೈಗಾರಿಕಾ ಬಾಂದವ್ಯ ರೂಪಿಸಬೇಕು.
ಸರ್ಕಾರಿ ನೌಕರರ ಸಂಬಳ ಸಾರಿಗೆ ನೌಕರರಿಗೂ ವಿಸ್ತರಣೆ ಮಾಡಬೇಕು
ಪ್ರತಿಭಟನಕಾರರ ಭೇಟಿ ಮಾಡಿದ ಆರ್ ಬಿ ತಿಮ್ಮಾಪೂರ
ಫ್ರೀಡಂ ಪಾರ್ಕ್ನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಫೆಡರೇಶನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಷನ್ ಸದಸ್ಯರನ್ನು ಅಬಕಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ಭೇಟಿ ಮಾಡಿ ಅಹವಾಲು ಸ್ವೀಕರಿಸಿದರು. ಚಿಲ್ಲರೆ ಮದ್ಯ ಮಾರಾಟ ಲಾಭಾಂಶ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳ ಕುರಿತು ಮನವಿ ಸ್ವೀಕರಿಸಿದ ಸಚಿವ ಆರ್ ಬಿ ತಿಮ್ಮಾಪೂರ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
IPL 2026: ಬೆಂಗಳೂರು ಕ್ರಿಕೆಟ್ ಪ್ರೇಮಿಗಳೇ ಗಮನಿಸಿ, ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗುವ ಮುನ್ನ ಈ ಹೊಸ ರೂಲ್ಸ್ ಗೊತ್ತಿರಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications