ಕಸ್ತೂರಿ ರಂಗನ್ ವರದಿ ಶಿಫಾರಸುಗಳ ಸಂಪೂರ್ಣ ಅನುಷ್ಠಾನ ಅಸಾಧ್ಯ: ಈಶ್ವರ್ ಖಂಡ್ರೆ
ಬೆಂಗಳೂರು, ಆಗಸ್ಟ್ 29: ಕೇಂದ್ರ ಸರ್ಕಾರದ ಕಸ್ತೂರಿರಂಗನ್ ಸಮಿತಿಯ ಶಿಫಾರಸುಗಳನ್ನು ಕರ್ನಾಟಕ ಸರ್ಕಾರ ಪೂರ್ಣವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಬುಧವಾರ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ನೀಡಿದ ಸಲಹೆಗಳ ಆಧಾರದ ಮೇಲೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕರ್ನಾಟಕ ವ್ಯಾಪ್ತಿಯಲ್ಲಿ 20,668 ಚದರ ಕಿಲೋಮೀಟರ್ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವೆಂದು ಅಧಿಸೂಚನೆ ಹೊರಡಿಸುವ ಸಮಿತಿಯ ಶಿಫಾರಸುಗಳನ್ನು ಪೂರ್ಣವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಸಂಪುಟ ಉಪ ಸಮಿತಿಯ ಅಧ್ಯಕ್ಷರೂ ಆಗಿರುವ ಅರಣ್ಯ, ಪರಿಸರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ತಿಳಿಸಿದ್ದಾರೆ.

ಪಶ್ಚಿಮ ಘಟ್ಟ ಪ್ರದೇಶಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಆಗಸ್ಟ್ 2ರಂದು ಹೊರಡಿಸಿರುವ 6ನೇ ಅಧಿಸೂಚನೆ (ಕಸ್ತೂರಿ ರಂಗನ್ ಸಮಿತಿ ವರದಿ)ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಿ, 10 ಜಿಲ್ಲೆಗಳ ಜನಪ್ರತಿನಿಧಿಗಳ ಅಭಿಪ್ರಾಯಪಡೆದು ಸಂಪುಟಕ್ಕೆ ಅಭಿಪ್ರಾಯ ಮಂಡಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಸಚಿವ ಸಂಪುಟದ ಉಪಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ವಿಧಾನಸೌಧದ ಸಮಿತಿ ಸಭಾಂಗಣದಲ್ಲಿ ನಡೆದ ಈ ಸಭೆಯಲ್ಲಿ ಸಚಿವರುಗಳಾದ ಡಾ.ಎಚ್.ಸಿ. ಮಹದೇವಪ್ಪ, ಕೆ.ಜೆ. ಜಾರ್ಜ್, ದಿನೇಶ್ ಗುಂಡೂರಾವ್, ಮಧು ಬಂಗಾರಪ್ಪ, ಮಾಂಕಾಳ್ ವೈದ್ಯ ಭಾಗಿಯಾಗಿ ಪರಿಸರ ಸೂಕ್ಷ್ಮ ಪ್ರದೇಶದ ಕುರಿತಂತೆ ಕೇಂದ್ರದ ಅಧಿಸೂಚನೆ ಒಪ್ಪಿಕೊಂಡರೆ ಪಶ್ಚಿಮಘಟ್ಟದ ಜನರ ಬದುಕಿನ ಮೇಲೆ ಆಗಬಹುದಾದ ಪರಿಣಾಮ, ಸಾಧಕ ಬಾಧಕಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು.
ಈಶ್ವರ ಖಂಡ್ರೆ ಮಾತನಾಡಿ ಕಸ್ತೂರಿ ರಂಗನ್ ಸಮಿತಿ ವರದಿಯಲ್ಲಿ ರಾಜ್ಯದ ಪಶ್ಚಿಮ ಘಟ್ಟದಲ್ಲಿ 20,668 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವಂತೆ ಸೂಚಿಸಿದೆ. ಆದರೆ ಈಗಾಗಲೇ ರಾಜ್ಯ ಸರ್ಕಾರ ವನ್ಯಜೀವಿಧಾಮ, ಅಭಯಾರಣ್ಯ, ಹುಲಿ ಸಂರಕ್ಷಿತ ಮೀಸಲು ಸೇರಿದಂತೆ ವಿವಿಧ ಅರಣ್ಯ ಪ್ರದೇಶದಲ್ಲಿ 16632 ಚದರ ಕಿ.ಮೀ.ಪ್ರದೇಶವು ಘೋಷಿತ ಅರಣ್ಯ, ಸಂರಕ್ಷಿತ ಪ್ರದೇಶ ಮತ್ತು ಸಂರಕ್ಷಿತ ಪ್ರದೇಶಗಳಿಗೆ ಹೊಂದುಕೊಂಡಿರುವ ಪರಿಸರ ಸೂಕ್ಷ್ಮ ವಲಯ (ಇ.ಎಸ್.ಝಡ್) ಎಂದು ಘೋಷಿಸಿದ್ದು, ಈ ಎಲ್ಲ ಪ್ರದೇಶಗಳು ಸಂರಕ್ಷಿತವಾಗಿರುತ್ತದೆ. ಹೀಗಾಗಿ ಇದಕ್ಕಷ್ಟೇ ಸೀಮಿತಗೊಳಿಸಿ ಡಾ. ಕಸ್ತೂರಿ ರಂಗನ್ ಸಮಿತಿಯ ಶಿಫಾರಸಿನಂತೆ ಕೇಂದ್ರ ಸರ್ಕಾರ ಹೊರಡಿಸಿರುವ 6ನೇ ಅಧಿಸೂಚನೆಗೆ ಸರ್ಕಾರದ ನಿಲುವು ವ್ಯಕ್ತಪಡಿಸಲು ಸಚಿವ ಸಂಪುಟಕ್ಕೆ ಶಿಫಾರಸು ಮಾಡಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ಪಶ್ಚಿಮ ಘಟ್ಟ ಪ್ರದೇಶದಲ್ಲಿ 1533 ವಸತಿ ಪ್ರದೇಶಗಳಿದ್ದು, ಇಲ್ಲಿರುವ ಜನರ ಬದುಕಿಗೆ ಯಾವುದೇ ರೀತಿಯ ತೊಂದರೆ ಆಗದ ರೀತಿಯಲ್ಲಿ ನಿರ್ದಿಷ್ಟ ಷರತ್ತುಗಳನ್ನು ಮುಂದಿಟ್ಟು ಕೇಂದ್ರ ಸರ್ಕಾರಕ್ಕೆ ಸೆಪ್ಟೆಂಬರ್ ಅಂತ್ಯದೊಳಗೆ ರಾಜ್ಯದ ನಿಲುವು ತಿಳಿಸಬೇಕಾಗುತ್ತದೆ ಎಂದು ಹೇಳಿದರು. ಅಂತಿಮವಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನಂತರ ಪಶ್ಚಿಮಘಟ್ಟದ 10 ಜಿಲ್ಲೆಗಳ ಜನಪ್ರತಿನಿಧಿಗಳ ಅಭಿಪ್ರಾಯಪಡೆದು ಸಚಿವ ಸಂಪುಟಕ್ಕೆ ಅಂತಿಮ ಶಿಫಾರಸು ಸಲ್ಲಿಸಲು ತೀರ್ಮಾನಿಸಲಾಯಿತು.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ












Click it and Unblock the Notifications