Police Transper: ಪೊಲೀಸ್ ಪೇದೆಗಳಿಗೆ ಸಿಹಿ ಸುದ್ದಿ: ವರ್ಗಾವಣೆ ಕ್ರಮಕ್ಕೆ ಸಚಿವರ ನಿರ್ದೇಶನ
ಬೆಂಗಳೂರು, ಫೆಬ್ರವರಿ 26: ಅಂತರಜಿಲ್ಲಾ ವರ್ಗಾವಣೆ ಹಾಗೂ ಪತಿ-ಪತ್ನಿಯರ ಪ್ರಕರಣದಲ್ಲಿ ವರ್ಷಗಳಿಂದಲೂ ಜಾತಕ ಪಕ್ಷಿಗಳಂತೆ ಕಾಯುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ಗಳಿಗೆ ಕೊನೆಗೂ ಸಿಹಿ ಸುದ್ದಿಯೊಂದನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ ನೀಡಿದ್ದಾರೆ.
ಪೊಲೀಸ್ ಕಾನ್ಸ್ಟೇಬಲ್ ವರ್ಗಾವಣೆ (ಪತಿ-ಪತ್ನಿ ಪ್ರಕರಣಗಳು) ಕುರಿತು ಗೃಹ ಸಚಿವರು ಇಲಾಖೆಗೆ ಸೋಮವಾರ (ಫೆಬ್ರವರಿ 26) ರಂದು ಕರ್ನಾಟಕ ರಾಜ್ಯದ ಡೈರಕ್ಟರ್ ಜನರಲ್ ಮತ್ತು ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಇವರಿಗೆ ಸೂಚನೆ ನೀಡಿದ್ದಾರೆ.

ಈ ಕುರಿತು ಟಿಪ್ಪಣಿ ಹೊರಡಿಸಿರುವ ಗೃಹ ಸಚಿವ ಜಿ.ಪರಮೇಶ್ವರ ಅವರು, ''ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ಟೇಬಲ್ಗಳ (ಪತಿ-ಪತ್ನಿ ಪ್ರಕರಣಗಳು) ಅಂತರಜಿಲ್ಲಾ ವರ್ಗಾವಣೆ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ವರದಿ ಬಿತ್ತರ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆ 2024ರ ನೀತಿ ಸಂಹಿತಾ ಜಾರಿಯಾಗುವ ಮೊದಲೇ ಅರ್ಹರಿಗೆ ಅಂತರ ಜಿಲ್ಲಾ ವರ್ಗಾವಣೆ ಪ್ರಸ್ತಾವನೆಗಳ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ಈ ಬಗ್ಗೆ ವರದಿ ಸಲ್ಲಿಸಬೇಕು'' ಎಂದು ನಿರ್ದೇಶಿಸಿದ್ದಾರೆ.
ವರ್ಗಾವಣೆ ನಕಾರ: ದಯಾಮರಣ ಕೋರಿ ಪತ್ರ
ಇತ್ತಿಚೆಗೆ ಮೂರು ನಾಲ್ಕು ವರ್ಷಗಳಿಂದ ಪತಿ-ಪತ್ನಿ ಪೇದೆಗಳಿಗೆ ವರ್ಗಾವಣೆ ನೀಡಲ್ಲವೆಂದು ಅವರು ದಯಾಮರಣ ಕೋರಿ ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದರು ಎನ್ನಲಾಗಿದೆ. ಈ ಪತ್ರ ವೈರಲ್ ಆಗಿತ್ತು. ಒಂದೇ ಘಟಕ ಅಥವಾ ಒಂದೇ ಜಿಲ್ಲೆಯಲ್ಲಿ ವರ್ಗಕ್ಕೆ ಅವಕಾಶ ನಿರಾಕರಿಸಿದ್ದರಿಂದ ದಯಾಮರಣ ಕೋರಿ ಪತ್ರ ಬರೆದು ಮನವಿ ಮಾಡಿದ್ದರು.
ಅಂತರಜಿಲ್ಲಾ ವರ್ಗಾವಣೆಗೆ ಅವಕಾಶ ಇಲ್ಲದ್ದರಿಂದ ನಿರಾಸೆಯಾದ ಪೊಲೀಸ್ ವರ್ಗಾವಣೆ ಗ್ಯಾರಂಟಿ ವಿರುದ್ಧ ಪೇದೆಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಈಗಿನ ಸರ್ಕಾರ ಪದೇ ಪದೆ ವರ್ಗಾವಣೆ ಭರವಸೆ ನೀಡುತ್ತಿದೆ. ಹೊರತು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಿಲ್ಲ ಎಂದು ಪೊಲೀಸ್ ಇಲಾಖೆಯ ಕೆಲವು ಕೆಳ ಹಂತದ ಉದ್ಯೋಗಿಗಳಿಗೆ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.
-
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್












Click it and Unblock the Notifications