ಡ್ರಗ್ಸ್ ಮುಕ್ತ ಕರ್ನಾಟಕದ ಗುರಿ, ಶೇ.50 ಟ್ರಾಫಿಕ್ ನಿಯಂತ್ರಣವಾಗಿದೆ: ಜಿ.ಪರಮೇಶ್ವರ
ಬೆಂಗಳೂರು, ಜನವರಿ 02: ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಜನಸ್ನೇಹಿಯಾಗಿ ಕರ್ತವ್ಯನಿರ್ವಹಿಸಿರುವುದಕ್ಕೆ ಜನರಿಂದ ಅಭಿನಂದನೆ ವ್ಯಕ್ತವಾಗಿದೆ. ಇದನ್ನು ನಿರಂತರವಾಗಿ ಅಳವಡಿಸಿಕೊಳ್ಳಬೇಕು. ಇನ್ನೂ ಡ್ರಗ್ಸ್ ಮುಕ್ತ ಕರ್ನಾಟಕಕ್ಕಾಗಿ ಕ್ರಿಯಾ ಯೋಜನೆ ರೂಪಿಸಬೇಕಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು.
ಮಂಗಳವಾರ ಬೆಳಗ್ಗೆ ಸದಾಶಿವನಗರದ ಗೃಹ ಕಚೇರಿಯಲ್ಲಿ ನಗರ ಪೊಲೀಸ್ ಆಯುಕ್ತ ದಯಾನಂದ್, ಹೆಚ್ಚುವರಿ ಪೊಲೀಸ್ ಆಯುಕ್ತರಾದ ರಮಣಗುಪ್ತ, ಸತೀಶ್, ಎಂಎನ್ ಅನುಚೇತ್ ಸೇರಿದಂತೆ ನಗರದ ಎಲ್ಲ ವಿಭಾಗದ ಡಿಸಿಪಿಗಳ ಜತೆ ಸಭೆ ನಡೆಸಿದರು. ಈ ವೇಳೆ, ಕೆಲವು ಕಟ್ಟುನಿಟ್ಟಿನ ನಿಯಮಗಳನ್ನು ಅಚ್ಚುಕಟ್ಟಾಗಿ ಪಾಲಿಸುವುದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಶೇಷವಾಗಿ ನಡೆದಿದೆ ವರ್ಷಾಚರಣೆ
ನಾನು ಕಾಲೇಜು ದಿನಗಳಿಂದಲೂ ಹೊಸ ವರ್ಷ ಆಚರಣೆಯನ್ನು ನೋಡಿಕೊಂಡು ಬಂದಿದ್ದೇನೆ. ಈ ವರ್ಷ ವಿಶೇಷವಾಗಿ ಆಚರಣೆ ನಡೆದಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಅಚ್ಚುಕಟ್ಟಾಗಿ ನಿಭಾಯಿಸಲಾಗಿದೆ. ಇದರಲ್ಲಿ ಪೊಲೀಸರ ಶ್ರಮ ದೊಡ್ಡದು ಎಂದು ಶ್ಲಾಘಿಸಿದರು.
ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ರಕ್ತದಾನ, ನೇತ್ರದಾನಕ್ಕೆ ಸಹಿ, ಶಾಲಾ ಮಕ್ಕಳಿಗೆ ಹಾಗೂ ಅನಾಥ ಮಕ್ಕಳಿಗೆ ಸಿಹಿ ಹಂಚಿರುವುದು, ಇಲಾಖೆಯ ನಿವೃತ್ತ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಶುಭ ಕೋರುವ ಮೂಲಕ ಹೊಸ ವರ್ಷ ಆಚರಣೆ ಮಾಡಿರುವುದು ಅರ್ಥಪೂರ್ಣ ಎನಿಸಿದೆ. ಜನರು ಸಹ ಇದನ್ನೆ ಬಯಸುವುದು. ಪೊಲೀಸರು ನಮ್ಮ ಜೊತೆಗೆ ಇದ್ದಾರೆ, ರಕ್ಷಣೆ ಮಾಡುತ್ತಾರೆ ಎಂಬ ಇಲಾಖೆಯ ಮೇಲಿನ ನಂಬಿಕೆ, ಗೌರವ ಹೆಚ್ಚಾಗಬೇಕು. ಇದು ಹೀಗೆ ಮುಂದುವರಿಯಲಿ ಎಂದು ಹೇಳಿದರು.
'ಮಾದಕದ್ರವ್ಯ ಮುಕ್ತ ಕರ್ನಾಟಕ'ದ ಗುರಿ
ಕರ್ನಾಟಕವನ್ನು "ಮಾದಕದ್ರವ್ಯ ಮುಕ್ತ" ರಾಜ್ಯವನ್ನಾಗಿಸಬೇಕು ಎಂಬುದು ನನ್ನ ಪ್ರಮುಖ ಗುರಿ. ನಿನ್ನೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಹ ಇದೇ ಆಶಯ ವ್ಯಕ್ತಪಡಿಸಿದ್ದಾರೆ. ಹಿರಿಯರು ಆಗಿ, ಹೆಚ್ಚಿನ ಶ್ರಮಹಾಕಬೇಕಿದೆ. ಕೆಲ ದೇಶಗಳ ಪ್ರಜೆಗಳು ಹೆಚ್ಚಾಗಿ ಮಾದಕದ್ರವ್ಯ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ.

ಬೆಂಗಳೂರಿನಲ್ಲಿ ಹಲವು ವರ್ಷಗಳಿಂದ ವಾಸಿಸುತ್ತಿರುವ ಹಾಗೂ ನಗರಕ್ಕೆ ಬರುವ ವಿದೇಶಿ ಪ್ರಜೆಗಳ ಮೇಲೆ ಕಣ್ಣಿಡಬೇಕು. ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣಕ್ಕಾಗಿ 'ಕ್ರಿಯೆ ಯೋಜನೆ' (plan of action) ರೂಪಿಸಬೇಕಿದೆ. ಈ ಬಗ್ಗೆ ಸಜ್ಜಾಗುವಂತೆ ಸೂಚಿಸಿದರು.
ಟ್ರಾಫಿಕ್ ಸಮಸ್ಯೆ ನಿಯಂತ್ರಣಕ್ಕೆ
ರಾಜ್ಯದಲ್ಲಿ ಗುಂಪು ಗಲಭೆಗಳು ಕಡಿಮೆ ಆಗಿವೆ. ಅಮಾಯಕ ಮಕ್ಕಳು ಅಪರಾಧ ಪ್ರಕರಣಗಳಲ್ಲಿ ಸಿಲುಕುತ್ತಿದ್ದು, ಈ ಬಗ್ಗೆ ನಿಗಾವಹಿಸಬೇಕು. ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಅರಿವು ಮೂಡಿಸಬೇಕು. ನಗರದಲ್ಲಿ ಟ್ರಾಫಿಕ್ ಸಮಸ್ಯೆ ಈ ಮೊದಲಿಗಿಂತಲೂ ಕಡಿಮೆಯಾಗಿದೆ. ಶೇಕಡಾ 50ರಷ್ಟು ಟ್ರಾಫಿಕ್ ಸಮಸ್ಯೆ ನಿಯಂತ್ರಣಕ್ಕೆ ಬಂದಿದೆ. ಇನ್ನೂ ಹೆಚ್ಚಿನ ಒತ್ತು ನೀಡಬೇಕು.
ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ದೈನಂದಿನ ಅನುಭವಗಳ ಆಧಾರದ ಮೇಲೆ ನೋಟ್ಸ್ ತಯಾರಿಸಿ, ಕಮಿಷನರ್ಗೆ ಕೊಡಿ. ಇಂಪ್ಲಿಮೆಂಟ್ ಮಾಡೋಣ. ಇಲಾಖೆಯಲ್ಲಿ ಪದವೀಧರ ಸಿಬ್ಬಂದಿಗಳು ಹೆಚ್ಚಾಗಿ ನೇಮಕವಾಗಿದ್ದಾರೆ. ಇದು ಇಲಾಖೆಯ ಒಳ್ಳೆ ಬೆಳವಣಿಗೆ ಹೌದು. ಅವರಲ್ಲಿ ಹೊಸ ಐಡಿಯಾಗಳಿರುತ್ತವೆ. ವಿಶ್ಲೇಷಣೆ ಮಾಡಿಕೊಂಡು ನೋಟ್ ಅಥವಾ ವರದಿ ರೂಪದಲ್ಲಿ ಮೇಲಾಧಿಕಾರಿಗಳಿಗೆ ಕೊಡಲಿ. ಇದರಿಂದ ಇಲಾಖೆಯಲ್ಲಿ ಬದಲಾವಣೆ ತರಲು ಹೆಚ್ಚು ಅನುಕೂಲವಾಗುತ್ತದೆ ಎಂದು ಹೇಳಿದರು.
ಸಿಬ್ಬಂದಿಗಳು ಪೊಲೀಸ್ ಇ-ಬೀಟ್ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕು. ಆಯಾ ವಿಭಾಗದಲ್ಲಿ ನಡೆಯುವ ಘಟನೆಗಳಿಗೆ ಡಿಸಿಪಿಗಳು ಜವಾಬ್ದಾರರು. ಹಳೇ ಪ್ರಕರಣಗಳ ಮೇಲೆ ನಿಗಾವಹಿಸಿ ಎಂದು ಸೂಚಿಸಿದರು.
ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಹೆಚ್ಚುವರಿ ಪೊಲೀಸ್ ಆಯುಕ್ತರಾದ ರಮಣಗುಪ್ತ, ಸತೀಶ್, ಸಂಚಾರ ವಿಭಾಗದ ಜಂಟಿ ಆಯುಕ್ತ ಎಂ.ಎನ್.ಅನುಚೇತ್ ಸೇರಿದಂತೆ ಎಲ್ಲ ವಿಭಾಗದ ಡಿಸಿಪಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications