Get Updates
Get notified of breaking news, exclusive insights, and must-see stories!

ಸಚಿವ ಸಂಪುಟ ಪುನರ್‌ರಚನೆ, ನಾಯಕತ್ವ ಬದಲಾವಣೆ ಬಗ್ಗೆ ಜಿ.ಪರಮೇಶ್ವರ್‌ ಅಚ್ಚರಿ ಹೇಳಿಕೆ

ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ರಚನೆ ಬಗ್ಗೆ ಬಿರುಸಿನ ಚರ್ಚೆಗಳು ನಡೆಯುತ್ತಿವೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಹೈಕಮಾಂಡ್‌ ನಾಯಕರ ಭೇಟಿಗಾಗಿ ದೆಹಲಿಗೆ ಹಾರಿದ್ದಾರೆ. ಅಲ್ಲದೆ ಸಿದ್ದರಾಮಯ್ಯ ಅವರು ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ಸಚಿವ ಸಂಪುಟ ಪುನರ್‌ರಚನೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಹಾಲಿ ಸಚಿವರಿಗೆ ನಡುಕ ಶುರುವಾಗಿದೆ. ಗೃಹ ಸಚಿವ ಜಿ.ಪರಮೇಶ್ವರ್‌ ಕೂಡ ನಾಯಕತ್ವದ ಬದಲಾವಣೆ ಹಾಗೂ ಸಚಿವ ಸ್ಥಾನದ ಬದಲಾವಣೆ ಬಗ್ಗೆ ಅಚ್ಚರಿಯ ಮಾತುಗಳನ್ನಾಡಿದ್ದಾರೆ.

ಸಚಿವ ಸಂಪುಟ ಪುನರ್‌ರಚನೆ ಬಹಳ ದಿನಗಳಿಂದ ಬಾಕಿ ಉಳಿದಿರುವ ಬೇಡಿಕೆಯಾಗಿದೆ. ಅನೇಕ ಜನರು ಸಚಿವರಾಗುವ ನಿರೀಕ್ಷೆಯಲ್ಲಿದ್ದರು. ಈಗ, ಒಂದು ವೇಳೆ ಅದಕ್ಕೆ ಅನುಮತಿ ನೀಡಿದರೆ, ಸಿಎಂ ಸಿದ್ದರಾಮಯ್ಯ ಮತ್ತು ಹೈಕಮಾಂಡ್ ಅದನ್ನು ಮುಂದುವರಿಸುತ್ತಾರೆ. ಅದರಲ್ಲಿ ದೊಡ್ಡದೇನೂ ಇಲ್ಲ ಎಂದು ಪರಮೇಶ್ವರ್‌ ಹೇಳಿದ್ದಾರೆ.

G Parameshwara Surprise Statement on Cabinet Reshuffle Leadership Change In Karnataka

ಹೈಕಮಾಂಡ್ ಸಚಿವ ಸಂಪುಟ ಪುನರ್‌ರಚನೆಗೆ ಒಪ್ಪಿಗೆ ನೀಡಿದ್ದರೆ, ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದರ್ಥ. ಸಾಮಾನ್ಯವಾಗಿ ಪುನರ್‌ರಚನೆ ನಡೆದಾಗ, ನಾಯಕತ್ವ ಬದಲಾಗುವುದಿಲ್ಲ. ಸಂಪುಟ ಪುನರ್‌ರಚನೆಗೆ ಒಪ್ಪಿಗೆ ಸಿಕ್ಕರೆ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದರ್ಥ ಎಂದು ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಆ ಚರ್ಚೆಯಾಗಿಲ್ಲ ಎಂದ ಸಿಎಂ

ದೆಹಲಿಯಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ನಾನು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದು ನಿಜ. ನಾವು ಬಿಹಾರ ಚುನಾವಣೆಯ ಬಗ್ಗೆ ಮಾತ್ರ ಚರ್ಚಿಸಿದ್ದೇವೆ ಎಂದಿದ್ದಾರೆ. ರಾಹುಲ್‌ ಗಾಂಧಿ ಅವರು ನಮ್ಮ ನಾಯಕರಾಗಿದ್ದು, ಬಿಹಾರ ಚುನಾವಣೆಯಲ್ಲಿ ಹಿನ್ನಡೆಯಾದ ಕಾರಣ ನಾವು ಅವರಿಗೆ ಧೈರ್ಯ ತುಂಬಿದೆವು. ಆದರೆ ಅವರು ಅದರ ಬಗ್ಗೆ ಚಿಂತಿಸುವುದಿಲ್ಲ ಎಂದಿದ್ದಾರೆ. ನಾವು ಅವರಿಗೆ ಉತ್ಸಾಹ ಕಳೆದುಕೊಳ್ಳಬೇಡಿ ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.

ನಾನು ರಾಹುಲ್ ಗಾಂಧಿ ಅವರನ್ನು ಭೇಟಿಯಾದಾಗ ಬಿಹಾರ ಚುನಾವಣೆಯ ಬಗ್ಗೆ ಮಾತ್ರ ಚರ್ಚೆ ನಡೆಸಿದ್ದೇನೆ. ಸಚಿವ ಸಂಪುಟ ಪುನರ್‌ ರಚನೆಯ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ. ನಮ್ಮ ಯಾವುದೇ ಸಚಿವರು ಕೂಡ ಸಂಪುಟ ಪುನರ್‌ರಚನೆ ಬಗ್ಗೆ ಚರ್ಚೆ ನಡೆಸಿಲ್ಲ. ನಾನು ಪ್ರಧಾನಿಯವರನ್ನು ಭೇಟಿಯಾಗಲಿದ್ದೇನೆ. ಬಿಹಾರ ಚುನಾವಣೆಯ ಕಾರಣ, ನಾನು ಅವರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ. ಹೀಗಾಗಿ ಸೋಮವಾರ ಅವರನ್ನು ಭೇಟಿ ಮಾಡುತ್ತೇನೆ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಜೊತೆ ಭೇಟಿಯಾದ ಬಗ್ಗೆ ನನಗೆ ತಿಳಿದಿಲ್ಲ. ಸಂಪುಟ ಪುನರ್‌ರಚನೆ ಚರ್ಚೆಯ ಬಗ್ಗೆ ನನಗೆ ತಿಳಿದಿಲ್ಲ ಎಂದು ಡಿಕೆ ಶಿವಕುಮಾರ್‌ ಕೂಡ ಹೇಳಿದ್ದಾರೆ. ನಾನು ರಾಹುಲ್ ಗಾಂಧಿ ಅವರನ್ನ ಭೇಟಿಯಾಗುತ್ತೇನೋ? ಇಲ್ಲವೋ? ಎಂದು ನನಗೆ ತಿಳಿದಿಲ್ಲ. ನಾಯಕತ್ವ ಬದಲಾವಣೆಯ ವಿಷಯಗಳ ಪುನರ್‌ರಚನೆ ಬಗ್ಗೆ ಸಿಎಂ ಅವರ ಬಳಿಯೇ ಕೇಳಬೇಕು. ನಾನು ಪಕ್ಷ ಹೇಳುವುದನ್ನು ಪಾಲಿಸಬೇಕು. ಮುಖ್ಯಮಂತ್ರಿಗಳಿಗೆ ಪ್ರಧಾನಿ, ಗೃಹ ಸಚಿವ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡುವ ಎಲ್ಲ ಹಕ್ಕಿದೆ. ಅದರಲ್ಲಿ ಯಾವುದೇ ತಪ್ಪಿಲ್ಲ ಎಂದಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+