ಸಿ.ಟಿ.ರವಿ ಮೇಲೆ ಹಲ್ಲೆ ಯತ್ನ ಮಾಡಿದ ವಿಚಾರಕ್ಕೆ 24 ಜನರ ಬಂಧನ: ಪರಮೇಶ್ವರ್ ಹೇಳಿದ್ದೇನು?
ಬೆಂಗಳೂರು, ಡಿಸೆಂಬರ್ 21: ಸಿ.ಟಿ.ರವಿ ಮೇಲೆ ಹಲ್ಲೆ ಯತ್ನ ಮಾಡಿದ ವಿಚಾರಕ್ಕೆ 24 ಜನರನ್ನು ಆ ಕ್ಷಣದಲ್ಲೇ ಬಂಧಿಸಲಾಗಿದೆ. ತದನಂತರ ಅವರನ್ನ ಬಿಟ್ಟಿದ್ದಾರೆ. ಬಂಧನ ಮಾಡದೇ ಹೋಗಿದ್ದರೆ ಇನ್ನೂ ಹೆಚ್ಚು ಘಟನೆಗಳು ಆಗುತ್ತಿತ್ತು. ಕೋರ್ಟ್ ನೀಡಿರುವ ತಡೆಯಾಜ್ಞೆ ಆದೇಶವನ್ನು ತೆರವುಗೊಳಿಸಲು ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಗೃಹ ಸಚಿವರಾದ ಪರಮೇಶ್ವರ್ ಹೇಳಿದರು.
ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಅವಾಚ್ಯವಾಗಿ ನಿಂದಿಸಿ ಬಂಧನಕ್ಕೊಳಗಾದ ಪ್ರಕರಣ ಕೋರ್ಟ್ನಲ್ಲಿರುವುದರಿಂದ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

ಪ್ರಕರಣ ಕೋರ್ಟ್ನಲ್ಲಿರುವುದರಿಂದ ಯಾವ ವಿಚಾರಗಳನ್ನು ಅದರ ಬಗ್ಗೆ ಚರ್ಚೆ ಮಾಡುವುದು ಸರಿಯಲ್ಲ. ಯಾವುದೇ ಪ್ರಶ್ನೆಗೂ ಉತ್ತರಿಸುವುದಿಲ್ಲ. ಪ್ರಕರಣದಲ್ಲಿ ಪೊಲೀಸರು ಸರಿಯಾಗಿ ನಡೆದುಕೊಂಡಿದ್ದೇವೆ ಎಂಬ ವಾದ ಇರುತ್ತದೆ. ಪ್ರಕರಣ ಕೋರ್ಟ್ನಲ್ಲಿರುವುದರಿಂದ ಯಾವುದು ಸರಿ, ಯಾವುದು ತಪ್ಪು ಎಂಬುದನ್ನು ಅವರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.
ಬೇರೆಬೇರೆ ರೀತಿಯಲ್ಲಿ ಮಾಹಿತಿಯನ್ನು ಕೇಳುವ ಸಂದರ್ಭದಲ್ಲಿ, ಇವರನ್ನು ಕೇಳದೆ ಜಡ್ಜ್ಮೆಂಟ್ ಆಗಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಅದರ ಬಗ್ಗೆ ಟೀಕೆ ಮಾಡಲು ಆಗಲ್ಲ. ಸಭಾಪತಿಗಳು ದಾಖಲೆಗಳಿಲ್ಲ ಎಂದು ಹೇಳಿರುವುದು ನನಗೆ ಗೊತ್ತಿಲ್ಲ. ಕೆಲವರು ಸದನ ಮುಗಿದ ಬಳಿಕ ಘಟನೆ ನಡೆಯಿತು ಅಂತ ಹೇಳುತ್ತಿದ್ದಾರೆ. ಆದ್ದರಿಂದ ಸಭಾಪತಿಗಳಿಗೆ ಇದರಲ್ಲಿ ಏನು ಹೇಳೋಕೆ ಆಗಲ್ಲ ಅಂತ ಕೆಲವರು ವಿಶ್ಲೇಷಣೆ ಮಾಡುತ್ತಾರೆ. ಇನ್ನು ಕೆಲವರು ಸದನ ನಡೀತಾ ಇತ್ತು ಅಂತ ವಿಶ್ಲೇಷಣೆ ಮಾಡಿದ್ದಾರೆ. ಅದನ್ನೆಲ್ಲ ಈಗ ನಾನು ಮಾತನಾಡಲು ಹೋಗಲ್ಲ ಎಂದರು.
ಗೃಹ ಇಲಾಖೆ ಓವರ್ ಟೇಕ್ ಮಾಡಿ ಈ ಬೆಳವಣಿಗೆ ಆಯ್ತಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆ ರೀತಿ ಮಾಡಲು ಆಗುತ್ತಾ? ನಮ್ಮ ಮೇಲೆ ಮುಖ್ಯಮಂತ್ರಿಗಳು ಇದ್ದಾರೆ. ಮುಖ್ಯಮಂತ್ರಿ ಬಿಟ್ಟರೆ ಬೇರೆ ಯಾರು ಇಲ್ಲ. ಗೃಹ ಸಚಿವರ ಮೇಲೆ ಮಂತ್ರಿಗಳ ಮೇಲೆ ಮುಖ್ಯಂಮಂತ್ರಿ ಇದ್ದಾರೆ. ಅಷ್ಟು ಬಿಟ್ರೆ ಬೇರೇನೂ ಕಾಣಿಸ್ತಾಯಿಲ್ಲ. ನನಗೆ ಬೇಕಾದಷ್ಟು ಸ್ವಾತಂತ್ರ್ಯ ಇದೆ ಎಂದರು.
ಕಲಾಪ ಸೂಕ್ತ ರೀತಿಯಲ್ಲಿ ನಡೆದಿದೆಯಾ ಅನ್ನೋ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಅನೇಕ ಪ್ರತಿಭಟನೆಗಳು ನಡೆದವು. ಎಸ್ಸಿ, ಎಸ್ಟಿ, ವಕೀಲರು, ರೈತರು, ಪಂಚಮಸಾಲಿ ಸಮುದಾಯದ ಪ್ರತಿಭಟನೆಗಳಾದವು. ಎರಡು ಸದನಗಳಲ್ಲಿಯೂ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಸಂಪೂರ್ಣ ಚರ್ಚೆಯಾಗಿದೆ. ವಕ್ಫ್ ವಿಚಾರವಾಗಿ ಚರ್ಚೆಯಾಗಿದ್ದು, ಅದಕ್ಕೆ ಸಚಿವರು ಸಮಂಜಸವಾಗಿ ಉತ್ತರ ಕೊಟ್ಟಿದ್ದಾರೆ. ಮುಖ್ಯಮಂತ್ರಿಯವರಿಗೆ ಉತ್ತರ ನೀಡಲು ಬಿಡಲಿಲ್ಲ. ಎಲ್ಲಾ ಸಮಯ ವ್ಯರ್ಥ ಆಯ್ತು ಅಂತ ಹೇಳಲು ಆಗುವುದಿಲ್ಲ ಎಂದರು.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications