ಮತ್ತೆ ಹೊತ್ತಿದ ಕಳಸಾ ಬಂಡೂರಿ ಕಿಚ್ಚು, ಇಂದು ಗದಗ, ನರಗುಂದ ಬಂದ್
ಗದಗ, ಜುಲೈ 21 : ಮತ್ತೆ ಇಂದು (ಶುಕ್ರವಾರ) ಗದಗ, ನರಗುಂದದಲ್ಲಿ ಮಹದಾಯಿ, ಕಳಸಾ ಬಂಡೂರಿ ಕಿಚ್ಚು ಹತ್ತಿದೆ.
ರೈತರು ಮಹದಾಯಿ ಹೋರಾಟ ಪ್ರಾರಂಭಿಸಿ 2 ವರ್ಷ ಕಳೆದರೂ ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದಾಗಲೀ ಸಮಸ್ಯೆ ಬಗೆಹರಿಸಲು ಇನ್ನೂ ಸಾಧ್ಯವಾಗಿಲ್ಲ. ಈ ಹಿನ್ನಲೆಯಲ್ಲಿ ಹಲವು ಸಂಘಟನೆಗಳು ಇಂದು ಗದಗ, ನರಗುಂದ ಬಂದ್ ಗೆ ಕರೆ ನೀಡಿವೆ.

ಕಳಸಾ ಹೋರಾಟ ವೇದಿಕೆ ಅಧ್ಯಕ್ಷ ವಿರೇಶ್ ಸೊಬರದಮಠ ಉಪವಾಸ ಸತ್ಯಾಗ್ರಹ ಆರಂಭಿಸಿ 5 ದಿನಗಳಾಯಿತು. ಹೀಗಾಗಿ ರೈತರು ರೈತ ಹುತಾತ್ಮ ದಿನದಂದೇ ಸರ್ಕಾರಗಳ ವಿರುದ್ಧ ಸೆಡ್ಡು ಹೊಡೆಯಲು ಸಜ್ಜಾಗಿದ್ದಾರೆ.
ಇಂದು ಗದಗ ಜಿಲ್ಲೆ ನರಗುಂದದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುವ ಸಂಭವವಿದೆ. ರೈತ ಹುತ್ಮಾತ್ಮ ದಿನಾಚರಣೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತ ಮುಖಂಡರು, ರೈತರು, ಜನಪ್ರತಿನಿಧಿಗಳು, ವಿವಿಧ ಕನ್ನಡ - ದಲಿತ ಪರ ಸಂಘಟನೆಗಳ ಮುಖಂಡರು ಅಪಾರ ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ.
ಹೀಗಾಗಿ ನರಗುಂದ ಪಟ್ಟಣದಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಳಗ್ಗೆಯಿಂದಲೇ ಪೂರ್ಣ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅಲ್ಲದೇ, ಗದಗ ನಗರ ಹಾಗೂ ನರಗುಂದ ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications