ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮತ್ತೆ ಹೊತ್ತಿದ ಕಳಸಾ ಬಂಡೂರಿ ಕಿಚ್ಚು, ಇಂದು ಗದಗ, ನರಗುಂದ ಬಂದ್

|
Google Oneindia Kannada News

ಗದಗ, ಜುಲೈ 21 : ಮತ್ತೆ ಇಂದು (ಶುಕ್ರವಾರ) ಗದಗ, ನರಗುಂದದಲ್ಲಿ ಮಹದಾಯಿ, ಕಳಸಾ ಬಂಡೂರಿ ಕಿಚ್ಚು ಹತ್ತಿದೆ.

ರಾಜಕೀಯ ಪಕ್ಷಗಳ ಮೇಲೆ ನಂಬಿಕೆ ಕಳೆದುಕೊಂಡ ಮಹಾದಾಯಿ ಹೋರಾಟಗಾರರುರಾಜಕೀಯ ಪಕ್ಷಗಳ ಮೇಲೆ ನಂಬಿಕೆ ಕಳೆದುಕೊಂಡ ಮಹಾದಾಯಿ ಹೋರಾಟಗಾರರು

ರೈತರು ಮಹದಾಯಿ ಹೋರಾಟ ಪ್ರಾರಂಭಿಸಿ 2 ವರ್ಷ ಕಳೆದರೂ ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದಾಗಲೀ ಸಮಸ್ಯೆ ಬಗೆಹರಿಸಲು ಇನ್ನೂ ಸಾಧ್ಯವಾಗಿಲ್ಲ. ಈ ಹಿನ್ನಲೆಯಲ್ಲಿ ಹಲವು ಸಂಘಟನೆಗಳು ಇಂದು ಗದಗ, ನರಗುಂದ ಬಂದ್ ಗೆ ಕರೆ ನೀಡಿವೆ.

Gadag and Nargund bandh today demanding Kalasa Banduri project

ಕಳಸಾ ಹೋರಾಟ ವೇದಿಕೆ ಅಧ್ಯಕ್ಷ ವಿರೇಶ್ ಸೊಬರದಮಠ ಉಪವಾಸ ಸತ್ಯಾಗ್ರಹ ಆರಂಭಿಸಿ 5 ದಿನಗಳಾಯಿತು. ಹೀಗಾಗಿ ರೈತರು ರೈತ ಹುತಾತ್ಮ ದಿನದಂದೇ ಸರ್ಕಾರಗಳ ವಿರುದ್ಧ ಸೆಡ್ಡು ಹೊಡೆಯಲು ಸಜ್ಜಾಗಿದ್ದಾರೆ.

ಇಂದು ಗದಗ ಜಿಲ್ಲೆ ನರಗುಂದದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುವ ಸಂಭವವಿದೆ. ರೈತ ಹುತ್ಮಾತ್ಮ ದಿನಾಚರಣೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತ ಮುಖಂಡರು, ರೈತರು, ಜನಪ್ರತಿನಿಧಿಗಳು, ವಿವಿಧ ಕನ್ನಡ - ದಲಿತ ಪರ ಸಂಘಟನೆಗಳ ಮುಖಂಡರು ಅಪಾರ ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ.

ಹೀಗಾಗಿ ನರಗುಂದ ಪಟ್ಟಣದಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಳಗ್ಗೆಯಿಂದಲೇ ಪೂರ್ಣ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅಲ್ಲದೇ, ಗದಗ ನಗರ ಹಾಗೂ ನರಗುಂದ ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

English summary
Protesters call Naragunda and Gadag bandh today. For demanding drinking water Kalasa banduri project. The district administration has declared school colleges holiday on July 21.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X