ಗದಗ : ಇಂದಿನಿಂದ ದೇವರಾಜ್ ಅರಸು ಛಾಯಾಚಿತ್ರ ಪ್ರದರ್ಶನ
ಗದಗ, ಮಾರ್ಚ್ 28 : ಡಿ. ದೇವರಾಜ ಅರಸು ಅವರ ಜೀವನಚರಿತ್ರೆ ಬಿಂಬಿಸುವ ವಿಶೇಷ ಛಾಯಾಚಿತ್ರಗಳ ಪ್ರದರ್ಶನವು ನಗರದ ಕೆ.ಎಚ್.ಪಾಟೀಲ್ ಜಿಲ್ಲಾ ಕ್ರೀಡಾಂಗಣದ ಕ್ರೀಡಾ ಸಮುಚ್ಛಯದಲ್ಲಿ ಮಾ. 28 ರಿಂದ ಆರಂಭವಾಗಲಿದೆ.
ಎರಡು ದಿನಗಳವರೆಗೆ ನಡೆಯುವ ಈ ಪ್ರದರ್ಶನವನ್ನು ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ್ ಅವರು ಇಂದು ಉದ್ಘಾಟಿಸಲಿದ್ದಾರೆ. ರಾಜ್ಯದ ಮಾಜಿ ಮುಖ್ಯಮಂತ್ರಿ, ಸಾಮಾಜಿಕ ಪರಿವರ್ತನೆಯ ಹರಿಕಾರ ಅರಸು ಅವರ ಅಪರೂಪದ ಛಾಯಾಚಿತ್ರ ಪ್ರದರ್ಶನವನ್ನು ಪ್ರತಿದಿನ ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯ ತನಕ ವೀಕ್ಷಿಸಬಹುದಾಗಿದೆ. [ಅರಸು ಹುಟ್ಟೂರು ದತ್ತು ಪಡೆದ ಸರ್ಕಾರ]

ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಯುವಜನ ಸಬಲೀಕರಣ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯೋಜಿಸಿರುವ ಈ ಅಪರೂಪದ ಛಾಯಾಚಿತ್ರ ಪ್ರದರ್ಶನದಲ್ಲಿ 76 ಚಿತ್ರಗಳಿವೆ. [ಮೈಸೂರಲ್ಲಿ ಅರಸು ಜನ್ಮಶತಮಾನೋತ್ಸವಕ್ಕೆ ಚಾಲನೆ]

ಅರಸು ಅವರು ಸ್ವತಹ ಕೃಷಿಕರಾಗಿ ಉಳುಮೆ ಮಾಡುತ್ತಿದ್ದ, ಅರಸು ಕುಟುಂಬದ ಸದಸ್ಯರ, ಮುಖ್ಯಮಂತ್ರಿಯಾಗಿ ಅವರು ಅಧಿಕಾರ ಸ್ವೀಕರಿಸಿದ ಸಂದರ್ಭ, ಭೂ ಸುಧಾರಣಾ ಕಾಯ್ದೆ ಫಲಾನುಭವಿಗಳಿಗೆ ಭೂ ಅಧಿಕಾರ ವಿತರಣೆ ಮಾಡಿದ ಚಿತ್ರ ಸೇರಿದಂತೆ ಹಲವಾರು ಚಿತ್ರಗಳಿವೆ. [ವಕೀಲೆ ಚಿತ್ರಲೇಖಾ ಕೊಲೆ ಪ್ರಕರಣ: ದೇವರಾಜ್ ಅರಸ್ ಪುತ್ರಿಗೆ ರಿಲೀಫ್]

ಜೊತೆಗೆ ಕೃಷಿ, ಕಾರ್ಮಿಕರಿಗೆ ಕನಿಷ್ಠ ವೇತನ, ಮಲ ಹೊರುತ್ತಿರುವ ಪದ್ಧತಿ ನಿಷೇಧ, ಜೀತ ವಿಮುಕ್ತಿ, ಋಣ ಪರಿಹಾರ, ನಿರುದ್ಯೋಗಿ ಪದವೀಧರರಿಗೆ ಭತ್ಯೆ, ವೃದ್ಧಾಪ್ಯ ವೇತನ, ಸೂರಿಲ್ಲದವರಿಗೆ ಜನತಾ ಮನೆ, ಕೊಳಚೆ ಪ್ರದೇಶಗಳ ಅಭಿವೃಧ್ಧಿ ಹಾಗೂ ನಿರ್ವಹಣೆ, ಹಿಂದುಳಿದ ವರ್ಗದವರಿಗೆ ಮೀಸಲು ಜಾರಿ, ಬಡವರ ನೆರವಿಗಾಗಿ ಸಹಕಾರಿ ಸಂಘಗಳ ಸ್ಥಾಪನೆ, ಹಿಂದುಳಿದ ವರ್ಗಗಳ ಇಲಾಖೆ ಸ್ಥಾಪನೆ ಸೇರಿದಂತೆ ವಿವಿಧ ಜನಪರ ಯೋಜನೆಗಳ ಕುರಿತ ಮಾಹಿತಿ ಕೂಡಾ ನೀಡಲಾಗಿತ್ತದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ












Click it and Unblock the Notifications