ಆಗಸ್ಟ್ 18ರಂದು ಗದಗ-ವಾಡಿ ಹೊಸ ರೈಲ್ವೆ ಮಾರ್ಗ ಕಾಮಗಾರಿ ಪ್ರಾರಂಭ
ಬೆಂಗಳೂರು, ಆಗಸ್ಟ್ 17: ಗದಗ-ವಾಡಿ ಹೊಸ ರೈಲ್ವೆ ಮಾರ್ಗ ಕಾಮಗಾರಿ ಸೇರಿದಂತೆ ಹೊಸ ಯೋಜನೆಗೆ ಕೇಂದ್ರ ರೈಲ್ವೆ ಸಚಿವರಾದ ಸುರೇಶ ಪ್ರಭು ಅವರು ಆಗಸ್ಟ್ 18ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡುವರು.
ಗದಗ-ವಾಡಿ ಹೊಸ ರೈಲ್ವೆ ಮಾರ್ಗ ಕಾಮಗಾರಿ(257 ಕಿಮೀ) ಪ್ರಾರಂಭ, ಭಾನಾಪುರ-ಕೊಪ್ಪಳ ಸೆಕ್ಷನ್ ಜೋಡಿ ಮಾರ್ಗ ರಾಷ್ಟ್ರಕ್ಕೆ ಸಮರ್ಪಣೆ ಹಾಗೂ ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ಹೊಸ ಪ್ಲಾಟ್ ಫಾರಂ ಸಂಖ್ಯೆ 2/3 ರ ಉದ್ಘಾಟನಾ ಸಮಾರಂಭ ಆಯೋಜನೆಗೊಂಡಿದೆ.
ಕೊಪ್ಪಳ ಜಿಲ್ಲೆಯ ಭಾನಾಪುರ ರೈಲ್ವೆ ನಿಲ್ದಾಣದಲ್ಲಿ ಬೆಳಿಗ್ಗೆ 11-30 ಗಂಟೆಗೆ ನಡೆಯಲಿದೆ. ಕೇಂದ್ರ ರೈಲ್ವೆ ಸಚಿವರಾದ ಸುರೇಶ ಪ್ರಭಾಕರ್ ಪ್ರಭು ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡುವರು.

ಮುಖ್ಯ ಅತಿಗಳಾಗಿ ಕೇಂದ್ರ ಸರ್ಕಾರದ ಸಚಿವರುಗಳಾದ ಡಿ.ವಿ ಸದಾನಂದ ಗೌಡ, ಅನಂತ ಕುಮಾರ, ರಮೇಶ ಚಂದಪ್ಪ ಜಿಗಜಿಣಗಿ, ಹಾಗೂ ನಿರ್ಮಲಾ ಸೀತಾರಾಮನ್ ಅವರು ಪಾಲ್ಗೊಳ್ಳುವರು.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಮಂತ್ರಿಗಳಾದ ಆರ್.ವಿ ದೇಶಪಾಂಡೆ, ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ, ವೈದ್ಯಕೀಯ ಶಿಕ್ಷಣ ಮಂತ್ರಿಗಳಾದ ಶರಣಪ್ರಕಾಶ ರುದ್ರಪ್ಪ ಪಾಟೀಲ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ವಕ್ಫ್ ಮಂತ್ರಿಗಳಾದ ತನ್ವೀರ ಸೇಠ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಪ್ರಮಾಸೋದ್ಯಮ ಮಂತ್ರಿಗಳಾದ ಪ್ರಿಯಾಂಕ ಖರ್ಗೆ, ಸಂಸದರುಗಳಾದ ಮಲ್ಲಿಕಾರ್ಜುನ ಖರ್ಗೆ, ಕರಡಿ ಸಂಗಣ್ಣ, ಬಿ.ವಿ. ನಾಯಕ, ರಾಜ್ಯಸಭಾ ಸದಸ್ಯರಾದ ಬಸವರಾಜ ಪಾಟೀಲ, ಕೊಪ್ಪಳ ಜಿ.ಪಂ. ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳ, ಶಾಸಕರುಗಳಾದ ಕೆ. ರಾಘವೇಂದ್ರ ಹಿಟ್ನಾಳ, ದೊಡ್ಡನಗೌಡ ಪಾಟೀಲ, ಮಾನಪ್ಪ ಡಿ. ವಜ್ಜಲ, ರಾಜಾ ವೆಂಕಟಪ್ಪ ನಾಯಕ, ಗುರು ಪಾಟೀಲ್ ಶಿರವಾಳ, ಡಾ. ಅಜಯ್ ಸಿಂಗ್, ಮಾಲಿಕಯ್ಯ ವೆಂಕಯ್ಯ ಗುತ್ತೆದಾರ, ಪ್ರತಾಪಗೌಡ ಪಾಟೀಲ್, ಶಿವರಾಜ ತಂಗಡಗಿ, ವಿಧಾನಪರಿಷತ್ ಸದಸ್ಯರುಗಳಾದ ಶರಣಪ್ಪ ಮಟ್ಟೂರ, ಬಸವರಾಜ ಪಾಟೀಲ ಇಟಗಿ, ಬಿ.ಜಿ. ಪಾಟೀಲ್, ಅಮರನಾಥ ಪಾಟೀಲ್ ಹಾಗೂ ಬಸವರಾಜ ಎಸ್. ಮುಗಂಡಮಠ ಮೊದಲಾದ ಗಣ್ಯರು ಪಾಲ್ಗೊಳ್ಳುವರು ಎಂದು ನೈರುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications