ಮುನಿಸು ಮರೆತು ಕೊನೆಗೂ ಒಂದಾದ ಜನಾರ್ದನ ರೆಡ್ಡಿ-ರಾಮುಲು; ಖಡಕ್ ಸಂದೇಶ ಕೊಟ್ಟ ದೋಸ್ತಿಗಳು
ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಕುಚಿಕುಗಳಂತೆ ಬಿಜೆಪಿಯಲ್ಲಿ ಮಿಂಚುತ್ತಿದ್ದ ಶಾಸಕ ಗಾಲಿ ಜನಾರ್ದನ್ ರೆಡ್ಡಿ ಹಾಗೂ ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಇತ್ತೀಚೆಗೆ ವೈಯಕ್ತಿಕ ಕಾರಣಗಳಿಂದ ಮುನಿಸಿಕೊಂಡು ದೂರಾಗಿದ್ದು ಗೊತ್ತೇ ಇದೆ. ಇನ್ನು ಬಳ್ಳಾರಿ ರಾಜಕಾರಣದಲ್ಲಿ ಮೋಡಿ ಮಾಡಿದ್ದ ಈ ಜೋಡಿ ಮತ್ತೆ ಒಂದಾಗಬೇಕು ಎಂಬುದು ಎಲ್ಲರ ಆಸೆಯಾಗಿತ್ತು. ಈ ಆಸೆ ಕೊನೆಗೂ ಈಡೇರಿದ್ದು, ಇಬ್ಬರೂ ನಾಯಕರು ಮುನಿಸು ಮರೆತು ಒಂದಾಗಿ ಕಾಣಿಸಿಕೊಂಡಿದ್ದಾರೆ. ಗಂಗಾವತಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಈ ಅಪರೂಪದ ಸನ್ನಿವೇಶ ನಡೆದಿದೆ.
ಗಂಗಾವತಿಯ ರಾಯಲ್ ರಿಚ್ ಕೌಂಟಿ ಹೋಟೆಲ್ನಲ್ಲಿ ನಡೆದ ಬಳ್ಳಾರಿ, ಕೊಪ್ಪಳ, ವಿಜಯನಗರ ಮತ್ತು ರಾಯಚೂರು ಜಿಲ್ಲೆಗಳ ವಿಭಾಗ ಮಟ್ಟದ ಸಂಘಟನಾತ್ಮಕ ಸಭೆ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ 11 ವರ್ಷಗಳ ಸಾಧನೆಗಳ ಕುರಿತ ಸಭೆಯಲ್ಲಿ ಶ್ರೀರಾಮುಲು-ರೆಡ್ಡಿ ಒಂದಾಗಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರ ನೇತೃತ್ವದಲ್ಲೇ ಮತ್ತೆ ಇಬ್ಬರೂ ನಾಯಕರು ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಇದೇ ವೇಳೆ ಅವರು ಒಗ್ಗಟ್ಟು ಪ್ರದರ್ಶಿಸಿ ಅಚ್ಚರಿ ಮೂಡಿಸಿದ್ದಾರೆ.

ಕಳೆದ ಉಪಚುನಾವಣೆ ವೇಳೆ ಶಾಸಕ ಗಾಲಿ ಜನಾರ್ದನ್ ರೆಡ್ಡಿ ಹಾಗೂ ಸಂಸದ ಬಿ.ಶ್ರೀರಾಮುಲು ನಡುವೆ ವೈಮನಸ್ಸು ಮೂಡಿತ್ತು. ಬಳಿಕ ರಾಮುಲು ತನ್ನ ದೋಸ್ತಿ ವಿರುದ್ಧವೇ ತೊಡೆ ತಟ್ಟಿದ್ದರು.ಸಂಡೂರು ಉಪಚುನಾವಣೆಯ ಫಲಿತಾಂಶದ ಪರಸ್ಪರ ವಾಗ್ವಾದ ಉಂಟಾಗಿ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಬಿ.ಶ್ರೀರಾಮುಲು ದೋಸ್ತಿಗೆ ಗುಡ್ಬೈ ಹೇಳಿದ್ದರು. ಭಾನುವಾರ ನಡೆದ ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಬ್ಬರ ಕೈಗಳನ್ನು ಎತ್ತಿ ಹಿಡಿದು, ಹಿಂದೆ ಚಿಕ್ಕಪುಟ್ಟ ಮನಸ್ತಾಪಗಳನ್ನು ಬದಿಗಿಡುವಂತೆ ಒತ್ತಾಯಿಸಿದರು. ಅಲ್ಲದೆ ಕಾರ್ಯಕ್ರಮದಲ್ಲಿ ರೆಡ್ಡಿ ಹಾಗೂ ಶ್ರೀರಾಮುಲು ಅಕ್ಕಪಕ್ಕದಲ್ಲೇ ಕುಳಿತಿದ್ದರು. ಪಕ್ಷದ ಕಾರ್ಯಕ್ರಮದಲ್ಲೇ ಇಬ್ಬರೂ ಒಂದಾಗಿ ಅಚ್ಚರಿ ಮೂಡಿಸಿದ್ದು, "ನಾವಿಬ್ಬರೂ ಒಂದೇ" ಎಂಬ ಒಗ್ಗಟ್ಟಿನ ಸಂದೇಶ ಕೊಟ್ಟಿದ್ದಾರೆ.
ಯಾವುದೇ ಮುನಿಸಿಲ್ಲ ಎಂದ ರೆಡ್ಡಿ-ರಾಮುಲು!
ಜನಾರ್ದನ ರೆಡ್ಡಿ ಮಾತನಾಡಿ, ನಮ್ಮ ಮಧ್ಯೆ ಯಾರಾದರೂ ಮಧ್ಯಸ್ಥಿಕೆ ಮಾಡಲು ಪ್ರಯತ್ನಿಸಿದರೆ ಅವರಂತಹ ಮೂರ್ಖರು ಇನ್ನಿಲ್ಲ. ನಮಗೆ ಸಂಧಾನದ ಅಗತ್ಯವೇ ಇಲ್ಲ. ನಮ್ಮದು ಸ್ನೇಹದ ಜಗಳ, ಇದರ ಲಾಭ ಪಡೆಯಲು ಪ್ರಯತ್ನಿಸಿದವರಿಗೆ ಏನೂ ಸಿಗಲ್ಲ ಎಂದಿದ್ದಾರೆ. ಶ್ರೀರಾಮುಲು ಕೂಡ ಪ್ರತಿಕ್ರಿಯಿಸಿ, ಪಕ್ಷದ ವಿಚಾರ ಬಂದಾಗ ನಾವು ಮಾದರಿ ನಾಯಕರಾಗಬೇಕು. ಕಾಂಗ್ರೆಸ್ಸಿಗರ ಹರಕೆಯ ಕುರಿಯಾಗಬಾರದು. ಪಕ್ಷ ಸಂಘಟನೆಗಾಗಿ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ಜನಾರ್ಧನ ರೆಡ್ಡಿ ಅವರೊಂದಿಗೆ ಯಾವುದೇ ಮುನಿಸು ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜಕೀಯ ವಿಚಾರವಾಗಿ ಇಬ್ಬರೂ ಕಿತ್ತಾಡಿಕೊಂಡಿದ್ದು ನಿಜವೇ ಆದರೂ, ರೆಡ್ಡಿ-ರಾಮುಲು ನಡುವೆ ಆಸ್ತಿ ವಿಚಾರಕ್ಕೆ ಸಂಬಂಧಿಸಿದ ಕಲಹಗಳೂ ಇದ್ದವು ಎನ್ನಲಾಗಿದೆ. ಇದೇ ಕಾರಣಕ್ಕೆ ಇಬ್ಬರೂ ದೂರವಾಗಿದ್ದರು ಎಂದು ಹೇಳಲಾಗಿತ್ತು. ಆದರೆ ಈಗ ದಿಢೀರನೆ ಇಬ್ಬರೂ ಒಂದಾಗುವ ಮೂಲಕ ಎಲ್ಲರ ಬಾಯಿ ಮುಚ್ಚಿಸಿದ್ದಾರೆ. ದೋಸ್ತಿಗಳು ಮತ್ತೆ ಒಂದಾಗಿರುವುದರ ಹಿಂದೆ ದೊಡ್ಡ ಸಂದೇಶವೇ ಇದೆ ಎಂದು ಹೇಳಲಾಗುತ್ತಿದೆ. ಅದು ಮುಂದಿನ ದಿನಗಳಲ್ಲಿ ತಿಳಿಯಲಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications