ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಗಾಂಧಿ ಭವನ ನಿರ್ಮಾಣಕ್ಕೆ 3 ಕೋಟಿ!
ಬೆಂಗಳೂರು, ಅಕ್ಟೋಬರ್. 03 : ರಾಜ್ಯದ 30 ಜಿಲ್ಲೆಗಳಲ್ಲಿ ಮಹಾತ್ಮ ಗಾಂಧಿ ಅವರ ಗಾಂಧಿ ಭವನ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.
ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಗಾಂಧಿ ಭವನದಲ್ಲಿ ಆಯೋಜಿಸಿದ್ದ 'ಗಾಂಧಿ ಜಯಂತಿ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿ ಜಿಲ್ಲಾ ಕೇಂದ್ರ ಮಟ್ಟದಲ್ಲಿ ಗಾಂಧಿ ಭವನ ನಿರ್ಮಾಣಕ್ಕೆ ಪ್ರತಿ ಜಿಲ್ಲೆಗೆ 3 ಕೋಟಿ ಅನುದಾನ ನೀಡಲಾಗುವುದು ತಿಳಿಸಿದ್ದಾರೆ.

'ರಾಜ್ಯದ 30 ಜಿಲ್ಲೆಗಳಲ್ಲಿ ಗಾಂಧಿ ಭವನ ನಿರ್ಮಾಣ ಮಾಡಲು ಬಜೆಟ್ ನಲ್ಲಿ 90 ಕೋಟಿ ರುಗಳನ್ನು ಮೀಸಲಿಡಲಾಗಿದೆ. ಪ್ರತಿ ಜಿಲ್ಲಾ ಕೇಂದ್ರ ಮಟ್ಟದಲ್ಲಿ ಗಾಂಧಿ ಭವನ ನಿರ್ಮಾಣಕ್ಕೆ 3 ಕೋಟಿ ರು ಅನುದಾನ ನೀಡಲಾಗುತ್ತಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.












Click it and Unblock the Notifications