ಸೂಡಾನಿನಲ್ಲಿ ಉಗ್ರರ ಗುಂಡಿಗೆ ಗಂಗಾವತಿ ಯುವಕ ಬಲಿ
ಆಫ್ರಿಕಾದ ದಕ್ಷಿಣ ಸೂಡಾನ್ ದೇಶದಲ್ಲಿ ಉದ್ಯೋಗದಲ್ಲಿದ್ದ ಗಂಗಾವತಿಯ ಸೈಯದ್ ಫರೂಕ್ ಬಾಷಾ ಶುಕ್ರವಾರ ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ.
ಕೊಪ್ಪಳ, ಫೆಬ್ರವರಿ 19: ಆಫ್ರಿಕಾದ ದಕ್ಷಿಣ ಸೂಡಾನ್ ದೇಶದಲ್ಲಿ ಉದ್ಯೋಗದಲ್ಲಿದ್ದ ಗಂಗಾವತಿಯ ಸೈಯದ್ ಫರೂಕ್ ಬಾಷಾ ಶುಕ್ರವಾರ ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ.
ದಕ್ಷಿಣ ಸೂಡಾನಿನ ಜ್ಯೂಬಾದಲ್ಲಿರುವ ಒಮಸ್ಕಿ ಸಾಯಿ ಇನ್ಫ್ರಾ ಕೊ ಲಿಮಿಟೆಡ್ ಎಂಬ ಕಂಪನಿಯಲ್ಲಿ ಸೈಯದ್ ಫಾರೂಕ್ ಬಾಷಾ ಸುಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದರು. ಇವರು ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ ಅವರ ಕಾರ್ಯದರ್ಶಿ ಎಸ್.ಬಿ ಖಾದ್ರಿಯವರ ಎರಡನೇ ಮಗನಾಗಿದ್ದಾರೆ.[ಐಸಿಸ್ ನಂಟು, ಕಾಸರಗೋಡಿನ ವ್ಯಕ್ತಿ ದೆಹಲಿಯಲ್ಲಿ ಬಂಧನ]

ಮೊದಲು ಎರಡು ವರ್ಷ ಜ್ಯೂಬಾದಲ್ಲಿದ್ದ ಫರೂಕ್ ಕಳೆದ ಮೂರು ತಿಂಗಳ ಹಿಂದೆಯಷ್ಟೆ ಗಂಗಾವತಿಗೆ ಬಂದು ಹೋಗಿದ್ದರು. ಶುಕ್ರವಾರ ನಮಾಜ ಮುಗಿಸಿ ಮಸೀದಿಯಿಂದ ಮರಳುತ್ತಿದ್ದಾಗ ಉಗ್ರರು ಫರೂಕ್ ಗೆ ಗುಂಡಿಕ್ಕಿ ಕೊಂದಿದ್ದಾರೆ ಎಂದು ತಿಳಿದು ಬಂದಿದೆ.[ವಿಚಾರಣೆಗಾಗಿ ಕರೆತಂದ ಆರೋಪಿ ಮುನಿರಾಬಾದ್ ಠಾಣೆಯಿಂದ ಪರಾರಿ]
Indian High Commissioner in South Sudan - Plz contact the bereaved family and help them. @eoijuba https://t.co/74eVfn6d5v
— Sushma Swaraj (@SushmaSwaraj) February 19, 2017
ಸದ್ಯ ಮೃತನ ಕುಟುಂಬಸ್ಥರು ಆಂಧ್ರ ಪ್ರದೇಶದ ಕರ್ನೂಲಿನಲ್ಲಿದ್ದಾರೆ. ಮೃತನ ದೇಹವನ್ನು ಭಾರತಕ್ಕೆ ಕಳುಹಿಸಲು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಟ್ವಿಟ್ಟರ್ ಮುಖಾಂತರ ಮನವಿ ಸಲ್ಲಿಸಿದ್ದಾರೆ. ಮಂಗಳವಾರದಂದು ಪಾರ್ಥಿವ ಶರೀರ ಗಂಗಾವತಿಗೆ ಬರುವ ಸಾಧ್ಯತೆ ಇದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications