Breaking: Gas Leakage: ಧಾರವಾಡ ಬಳಿ NH 4 ನಲ್ಲಿ ಅನಿಲ ಸೋರಿಕೆ, ಹೆದ್ದಾರಿ ಮಾರ್ಗ ಬದಲಾವಣೆ
ಧಾರವಾಡ, ಆಗಸ್ಟ್ 16: ಬೆಳಗಾವಿಯಿಂದ ಬೆಂಗಳೂರಿಗೆ ಬರುತ್ತಿದ್ದ ಎಲ್ಪಿಜಿ ಟ್ಯಾಂಕರ್ ನಲ್ಲಿ ಗ್ಯಾಸ್ ಸೋರಿಕೆ ಆಗಿರುವ ಘಟನೆ ಧಾರವಾಡ ಸಮೀಪ ರಾಷ್ಟ್ರೀಯ ಹೆದ್ದಾರಿ (NH 4) ಬಳಿ ನಡೆದಿದೆ. ಇದರಿಂದ ಈ ಭಾಗದಲ್ಲಿ ಹೆದ್ದಾರಿ ಸಂಚಾರ ಸ್ಥಗತಿಗೊಂಡಿದೆ.
ಘಟನೆಯಿಂದ ಎಚ್ಚೆತ್ತ ಸರ್ಕಾರ ಸುರಕ್ಷತಾ ದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗಾವಿಯಿಂದ ಧಾರವಾಡ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ವಾಹನಗಳ ಸಂಚಾರ ಮಾರ್ಗ ಬದಲಾಯಿಸಲಾಗಿದೆ ಎಂದು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ (SP) ಡಾ.ಸಂಜೀವ್ ಪಾಟೀಲ್ ತಿಳಿಸಿದ್ದಾರೆ.

ಧಾರವಾಡ ಹೈಕೋರ್ಟ್ ಬಳಿ ಅಂಡರ್ಪಾಸ್ನಲ್ಲಿ ಸಿಲುಕಿದ ಹೆಚ್ಪಿ ಕಂಪನಿಗೆ ಸೇರಿದ ಟ್ಯಾಂಕರ್ನಿಂದ ಗ್ಯಾಸ್ ಸೋರಿಕೆ ಆಗಿದೆ. ಸುರಕ್ಷತಾ ದೃಷ್ಟಿಯಿಂದ ಈ ಭಾಗದಲ್ಲಿ ವಿದ್ಯುತ್ ಕಡಿತಗೊಳಿಸಲಾಗಿದೆ. ಅಗ್ನಿ ಶಾಮಕ ಸಿಬ್ಬಂದಿ ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯ ವಾಹನಗಳ ಸಂಚಾರಕ್ಕಾಗಿ NH 4 ಹೊರತುಪಡಿಸಿ ನಾಲ್ಕು ಪರ್ಯಾಯ ಮಾರ್ಗಗಗಳನ್ನು ಸವಾರರಿಗೆ ಸೂಚಿಸಲಾಗಿದೆ. ಬೆಳಗಾವಿಯಿಂದ ಬೆಂಗಳೂರಿಗೆ ಬರುವವರು ಕಿತ್ತೂರುನಿಂದ ತಿರುವು ಪಡೆದು ತಡಕೋಡ ಧಾರವಾಡ ರ್ಮಾವಾಗಿ ಹುಬ್ಬಳ್ಳಿಗೆ ಬಂದು ರಾಜಧಾನಿಗೆ ಬರಬೇಕಿದೆ.
ಇನ್ನೂ ಬೆಳಗಾವಿಯಿಂದ ಹಿರೇಬಾಗೇವಾಡಿ ಮೂಲಕ ಬೈಲಹೊಂಗಲ ಮಾರ್ಗವಾಗಿ ಸಾಗಿ ತಡಕೋಡ ಹಾದು ಧಾರವಾಡದಿಂದ ಸಾಗಬೇಕು. ಅದೇ ರೀತಿ ಸಂಕೇಶ್ವರದಿಂದ ಹುಕ್ಕೇರಿ ಘಟಪ್ರಭಾ ಮೂಲಕ ಗೋಕಾಕ್ ಮತ್ತು ಧಾರವಾಡ ಮಾರ್ಗವಾಗಿ ಬೆಂಗಳೂರಿಗೆ ಬರಬೇಕು.
ಮತ್ತೊಂದು ಪರ್ಯಾಯ ಮಾರ್ಗವೆಂದರೆ ಬೆಳಗಾವಿಯಿಂದ ನಿಪ್ಪಾಣಿ ಮೂಲಕ ಸಾಗಿ ಬಂದು ಹುಕ್ಕೇರಿ ಮಾರ್ಗವಾಗಿ ಗೋಕಾಕ್, ಸವದತ್ತಿ ಬೆಂಗಳೂರಿನತ್ತ ಸಂಚರಿಸಲು ಸಂಚಾರ ಪೊಲೀಸರು ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಯಾವುದೇ ಪ್ರಾಣ ಹಾನಿ ಆಗಿಲ್ಲ ಎನ್ನಲಾಗಿದೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications