ದುಬಾರಿ ದುನಿಯಾ; ಸಕ್ಕರೆನಾಡಿನಲ್ಲಿ ಗೌರಿ-ಗಣೇಶ ಹಬ್ಬದ ಕಳೆಗಟ್ಟಿದ ಸಂಭ್ರಮ: ಹೂ, ಹಣ್ಣಿನ ಬೆಲೆ ಎಷ್ಟು ಗೊತ್ತಾ?
ಮಂಡ್ಯ, ಸೆಪ್ಟೆಂಬರ್ 06: ಜಿಲ್ಲೆಯಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಪ್ರತಿಯೊಬ್ಬರ ಮನೆಯಲ್ಲೂ ಸಂತಸ ಮನೆಮಾಡಿದ್ದು, ಸಡಗರ-ಸಂತೋಷದಿಂದ ಗಣೇಶನನ್ನು ಬರಮಾಡಿಕೊಳ್ಳುವುದಕ್ಕೆ ಸಿದ್ಧತೆ ನಡೆಸಿದ್ದಾರೆ.
ಹಬ್ಬದ ಮುನ್ನಾ ದಿನವಾದ ಗುರುವಾರ ನಗರದ ಪೇಟೆಬೀದಿ, ಮಾರುಕಟ್ಟೆ ರಸ್ತೆ, ವಿಶ್ವೇಶ್ವರಯ್ಯ ರಸ್ತೆ, ಹೊಸಹಳ್ಳಿ ಸರ್ಕಲ್, ಹೊಳಲು ವೃತ್ತ ಜನ ಜಂಗುಳಿಯಿಂದ ತುಂಬಿಹೋಗಿತ್ತು. ಹಬ್ಬದ ಸಾಮಾನುಗಳ ಖರೀದಿ ಭರಾಟೆ ಜೋರಾಗಿತ್ತು. ವರ್ತಕರು-ವ್ಯಾಪಾರಸ್ಥರೆಲ್ಲರೂ ಮಾರಾಟದಲ್ಲಿ ಬ್ಯುಸಿಯಾಗಿದ್ದರು.

ಮನೆಯಲ್ಲಿ ಗೌರಿ-ಗಣೇಶನನ್ನು ಪ್ರತಿಷ್ಠಾಪಿಸಿ ಪೂಜಿಸುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಿಳೆಯರು ಪೂಜಾ ಸಾಮಗ್ರಿಗಳು, ಚೆಂದದ ಪುಟ್ಟ ಗೌರಿ-ಗಣೇಶ ವಿಗ್ರಹಗಳ ಆಯ್ಕೆಯಲ್ಲಿ ತಲ್ಲೀನರಾಗಿದ್ದರು. ಇಷ್ಟವಾದ ಮೂರ್ತಿಗಳನ್ನು ಖರೀದಿಸಿ ತೆಗೆದುಕೊಂಡು ಹೋಗುತ್ತಿದ್ದರು.
ಸಾಮಾನ್ಯವಾಗಿ ದೇವಾಲಯಗಳಲ್ಲೇ ಗೌರಿಯನ್ನು ಪ್ರತಿಷ್ಠಾಪನೆ ಮಾಡಲಾಗುತ್ತಿದ್ದು, ದೇವರ ದರ್ಶನಕ್ಕೆ ಆಗಮಿಸುವ ಮಹಿಳೆಯರು ಅಲ್ಲೇ ಗೌರಿಯನ್ನು ಪೂಜಿಸಿ ಮುತ್ತೈದೆಯರಿಗೆ ಬಾಗಿನ ಸಮರ್ಪಿಸುವರು. ಇನ್ನೂ ಹಲವರು ಮನೆಯಲ್ಲೇ ಗೌರಿಯನ್ನು ಪುಷ್ಪಮಂಟಪದಲ್ಲಿ ಪ್ರತಿಷ್ಠಾಪಿಸಿ, ವಿವಿಧ ಹೂವುಗಳಿಂದ ಅಲಂಕರಿಸುತ್ತಾರೆ. ನೈವೇದ್ಯವಾಗಿ ಹೋಳಿಗೆ, ಪೊಂಗಲ್, ಪುಳಿಯೋಗರೆ, ಮೊಸರನ್ನ, ಹಾಲು, ತುಪ್ಪ, ಮೊಸರನ್ನು ತಯಾರಿಸಿಟ್ಟುಕೊಳ್ಳುವುದಕ್ಕೆ ಅಣಿಯಾಗುತ್ತಿದ್ದರು.
ಗಣಪತಿಯನ್ನು ಪ್ರತಿಷ್ಠಾಪಿಸುವುದಕ್ಕೆ ಮೊದಲಿನಷ್ಟು ಉತ್ಸಾಹ ಯುವಕರಲ್ಲಿ ಈಗ ಇಲ್ಲವಾದರೂ ಕೆಲವು ಯುವಕರು ದೊಡ್ಡ ಗಣೇಶನನ್ನು ಖರೀದಿಸಿ ಪ್ರತಿಷ್ಠಾಪಿಸುವುದಕ್ಕೆ ಉತ್ಸುಕರಾಗಿದ್ದರು. ಅಂಗಡಿಗಳಲ್ಲಿ ಗಣೇಶನ ತರಹೇವಾರಿ ಬಣ್ಣ, ಆಕಾರದ ವಿಗ್ರಹಗಳು ಗಮನಸೆಳೆಯುತ್ತಿದ್ದವು. ಯುವಕರು ಚೌಕಾಸಿ ವ್ಯಾಪಾರ ಮಾಡಿ ಮೂರ್ತಿಗಳನ್ನು ಖರೀದಿಸುವ ದೃಶ್ಯಗಳು ಕಂಡುಬಂದವು.
ಪುಟ್ಟ ಮಕ್ಕಳಿಗೆ ಪುಟಾಣಿ ಗೌರಿ-ಗಣೇಶನನ್ನು ಕೂರಿಸುವ ಕ್ರೇಜ್. ತಂದೆ-ತಾಯಿ ಬಳಿ ಹಠ ಮಾಡಿ ಪುಟ್ಟ ಗೌರಿ-ಗಣೇಶನನ್ನು ಪ್ರತಿಷ್ಠಾಪಿಸಿ ಸಂಭ್ರಮಿಸಲು ಅಣಿಯಾಗುತ್ತಿದ್ದರು. ಹಬ್ಬಕ್ಕೆ ಹೊಸ ಬಟ್ಟೆ ಧರಿಸುವ ಸಂತಸ ಒಂದೆಡೆಯಾದರೆ, ಗೌರಿ-ಗಣೇಶನನ್ನು ಕೂರಿಸಿ ಪೂಜಿಸುವುದರೊಂದಿಗೆ ಗಣೇಶನನ್ನು ವಿಸರ್ಜಿಸಿ ಆನಂದಿಸುವ ಸಂಭ್ರಮ ಮತ್ತೊಂದೆಡೆಯಾಗಿತ್ತು.
ಹೂವು-ಹಣ್ಣು-ತರಕಾರಿ ಬೆಲೆ
ಈ ಬಾರಿಯ ಗೌರಿ-ಗಣೇಶ ಹಬ್ಬಕ್ಕೆ ಬೆಎಲೆ ಏರಿಕೆ ಬಿಸಿ ಸಾಮಾನ್ಯಜನರನ್ನು ತಟ್ಟಿದಂತೆ ಕಂಡುಬರುತ್ತಿಲ್ಲ. ಸಾಮಾನ್ಯ ದಿನಗಳಲ್ಲಿದ್ದಷ್ಟೇ ಬೆಲೆ ಹೂವು, ಹಣ್ಣು, ತರಕಾರಿಗಳಲ್ಲೂ ಕಂಡುಬರುತ್ತಿತ್ತು. ವರಮಹಾಲಕ್ಷ್ಮೀ ಹಬ್ಬಕ್ಕೆ ಹೋಲಿಸಿದರೆ ಬೆಲೆ ಕಡಿಮೆಯಾಗಿತ್ತು. ಹಣ್ಣುಗಳ ಪೈಕಿ ಪ್ರತಿ ಕೆಜಿ ಮಿಕ್ಸ್-150 ರು.. ಕಿತ್ತಳೆ-120 ರು,ಸೇಬು-150 ರೂ, ಮೂಸಂಬಿ-80 ರೂ., ದಾಳಿಂಬೆ-200 ರೂ., ದ್ರಾಕ್ಷಿ-200 ರೂ, ಮರಸೇಬು-200 ರೂ, ಬಾಳೆಹಣ್ಣು-80 ರೂ, ಸೀಬೆ-100 ರೂ, ಸೀತಾಫಲ-120 ರೂ, ಪೈನಾಪಲ್ ಒಂದಕ್ಕೆ 50 ರೂ ನಂತೆ ಮಾರಾಟವಾಗುತ್ತಿತ್ತು.
ತರಕಾರಿಗಳಲ್ಲಿ ಮಿಕ್ಸ್ ಪ್ರತಿ ಕೆಜಿಗೆ 80 ರೂ, ಬೀನಿಸ್-120 ರೂ, ಗೆಡ್ಡೆಕೋಸು-80ರೂ, ಕ್ಯಾರೆಟ್-80ರೂ, ಬೀಟ್ರೂಟ್-80 ರೂ, ಬೆಂಡೆಕಾಯಿ-40 ರೂ, ಮೂಲಂಗಿ-40 ರೂ, ಟಮ್ಯಾಟೋ-20 ರೂ ಇದ್ದರೆ, ಸೊಪ್ಪುಗಳಲ್ಲಿ ಕೊತ್ತಂಬರಿ ಒಂದು ಕಟ್ಟಿಗೆ 30 ರೂ, ಪುದೀನ-20 ರೂ, ಸಪ್ಸಿಗೆ ಸೊಪ್ಪು-30 ರೂ, ಪಾಲಾಕ್-10 ರೂ, ಕೀರೆಸೊಪ್ಪು-10 ರೂ, ಮೆಂತ್ಯ-30 ರೂ ನಂತೆ ಮಾರಾಟವಾಗುತ್ತಿದ್ದುದು ಕಂಡುಬಂದಿತು. ಹೂವಿನ ಬೆಲೆಯೂ ಸಾಮಾನ್ಯವಾಗಿತ್ತು. ಪ್ರತಿ ಮಾರು ಸೇವಂತಿಗೆ 80 ರೂ, ಕಾಕಡಾ-80 ರೂ, ಮಲ್ಲಿಗೆ-200 ರೂ, ಮರಳೆ-100 ರೂ, ಕನಕಾಂಬರ-130 ರೂಗಳಂತೆ ಮಾರಾಟವಾಗುತ್ತಿದ್ದವು.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications