ದುಬಾರಿ ದುನಿಯಾ; ಸಕ್ಕರೆನಾಡಿನಲ್ಲಿ ಗೌರಿ-ಗಣೇಶ ಹಬ್ಬದ ಕಳೆಗಟ್ಟಿದ ಸಂಭ್ರಮ: ಹೂ, ಹಣ್ಣಿನ ಬೆಲೆ ಎಷ್ಟು ಗೊತ್ತಾ?
ಮಂಡ್ಯ, ಸೆಪ್ಟೆಂಬರ್ 06: ಜಿಲ್ಲೆಯಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಪ್ರತಿಯೊಬ್ಬರ ಮನೆಯಲ್ಲೂ ಸಂತಸ ಮನೆಮಾಡಿದ್ದು, ಸಡಗರ-ಸಂತೋಷದಿಂದ ಗಣೇಶನನ್ನು ಬರಮಾಡಿಕೊಳ್ಳುವುದಕ್ಕೆ ಸಿದ್ಧತೆ ನಡೆಸಿದ್ದಾರೆ.
ಹಬ್ಬದ ಮುನ್ನಾ ದಿನವಾದ ಗುರುವಾರ ನಗರದ ಪೇಟೆಬೀದಿ, ಮಾರುಕಟ್ಟೆ ರಸ್ತೆ, ವಿಶ್ವೇಶ್ವರಯ್ಯ ರಸ್ತೆ, ಹೊಸಹಳ್ಳಿ ಸರ್ಕಲ್, ಹೊಳಲು ವೃತ್ತ ಜನ ಜಂಗುಳಿಯಿಂದ ತುಂಬಿಹೋಗಿತ್ತು. ಹಬ್ಬದ ಸಾಮಾನುಗಳ ಖರೀದಿ ಭರಾಟೆ ಜೋರಾಗಿತ್ತು. ವರ್ತಕರು-ವ್ಯಾಪಾರಸ್ಥರೆಲ್ಲರೂ ಮಾರಾಟದಲ್ಲಿ ಬ್ಯುಸಿಯಾಗಿದ್ದರು.

ಮನೆಯಲ್ಲಿ ಗೌರಿ-ಗಣೇಶನನ್ನು ಪ್ರತಿಷ್ಠಾಪಿಸಿ ಪೂಜಿಸುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಿಳೆಯರು ಪೂಜಾ ಸಾಮಗ್ರಿಗಳು, ಚೆಂದದ ಪುಟ್ಟ ಗೌರಿ-ಗಣೇಶ ವಿಗ್ರಹಗಳ ಆಯ್ಕೆಯಲ್ಲಿ ತಲ್ಲೀನರಾಗಿದ್ದರು. ಇಷ್ಟವಾದ ಮೂರ್ತಿಗಳನ್ನು ಖರೀದಿಸಿ ತೆಗೆದುಕೊಂಡು ಹೋಗುತ್ತಿದ್ದರು.
ಸಾಮಾನ್ಯವಾಗಿ ದೇವಾಲಯಗಳಲ್ಲೇ ಗೌರಿಯನ್ನು ಪ್ರತಿಷ್ಠಾಪನೆ ಮಾಡಲಾಗುತ್ತಿದ್ದು, ದೇವರ ದರ್ಶನಕ್ಕೆ ಆಗಮಿಸುವ ಮಹಿಳೆಯರು ಅಲ್ಲೇ ಗೌರಿಯನ್ನು ಪೂಜಿಸಿ ಮುತ್ತೈದೆಯರಿಗೆ ಬಾಗಿನ ಸಮರ್ಪಿಸುವರು. ಇನ್ನೂ ಹಲವರು ಮನೆಯಲ್ಲೇ ಗೌರಿಯನ್ನು ಪುಷ್ಪಮಂಟಪದಲ್ಲಿ ಪ್ರತಿಷ್ಠಾಪಿಸಿ, ವಿವಿಧ ಹೂವುಗಳಿಂದ ಅಲಂಕರಿಸುತ್ತಾರೆ. ನೈವೇದ್ಯವಾಗಿ ಹೋಳಿಗೆ, ಪೊಂಗಲ್, ಪುಳಿಯೋಗರೆ, ಮೊಸರನ್ನ, ಹಾಲು, ತುಪ್ಪ, ಮೊಸರನ್ನು ತಯಾರಿಸಿಟ್ಟುಕೊಳ್ಳುವುದಕ್ಕೆ ಅಣಿಯಾಗುತ್ತಿದ್ದರು.
ಗಣಪತಿಯನ್ನು ಪ್ರತಿಷ್ಠಾಪಿಸುವುದಕ್ಕೆ ಮೊದಲಿನಷ್ಟು ಉತ್ಸಾಹ ಯುವಕರಲ್ಲಿ ಈಗ ಇಲ್ಲವಾದರೂ ಕೆಲವು ಯುವಕರು ದೊಡ್ಡ ಗಣೇಶನನ್ನು ಖರೀದಿಸಿ ಪ್ರತಿಷ್ಠಾಪಿಸುವುದಕ್ಕೆ ಉತ್ಸುಕರಾಗಿದ್ದರು. ಅಂಗಡಿಗಳಲ್ಲಿ ಗಣೇಶನ ತರಹೇವಾರಿ ಬಣ್ಣ, ಆಕಾರದ ವಿಗ್ರಹಗಳು ಗಮನಸೆಳೆಯುತ್ತಿದ್ದವು. ಯುವಕರು ಚೌಕಾಸಿ ವ್ಯಾಪಾರ ಮಾಡಿ ಮೂರ್ತಿಗಳನ್ನು ಖರೀದಿಸುವ ದೃಶ್ಯಗಳು ಕಂಡುಬಂದವು.
ಪುಟ್ಟ ಮಕ್ಕಳಿಗೆ ಪುಟಾಣಿ ಗೌರಿ-ಗಣೇಶನನ್ನು ಕೂರಿಸುವ ಕ್ರೇಜ್. ತಂದೆ-ತಾಯಿ ಬಳಿ ಹಠ ಮಾಡಿ ಪುಟ್ಟ ಗೌರಿ-ಗಣೇಶನನ್ನು ಪ್ರತಿಷ್ಠಾಪಿಸಿ ಸಂಭ್ರಮಿಸಲು ಅಣಿಯಾಗುತ್ತಿದ್ದರು. ಹಬ್ಬಕ್ಕೆ ಹೊಸ ಬಟ್ಟೆ ಧರಿಸುವ ಸಂತಸ ಒಂದೆಡೆಯಾದರೆ, ಗೌರಿ-ಗಣೇಶನನ್ನು ಕೂರಿಸಿ ಪೂಜಿಸುವುದರೊಂದಿಗೆ ಗಣೇಶನನ್ನು ವಿಸರ್ಜಿಸಿ ಆನಂದಿಸುವ ಸಂಭ್ರಮ ಮತ್ತೊಂದೆಡೆಯಾಗಿತ್ತು.
ಹೂವು-ಹಣ್ಣು-ತರಕಾರಿ ಬೆಲೆ
ಈ ಬಾರಿಯ ಗೌರಿ-ಗಣೇಶ ಹಬ್ಬಕ್ಕೆ ಬೆಎಲೆ ಏರಿಕೆ ಬಿಸಿ ಸಾಮಾನ್ಯಜನರನ್ನು ತಟ್ಟಿದಂತೆ ಕಂಡುಬರುತ್ತಿಲ್ಲ. ಸಾಮಾನ್ಯ ದಿನಗಳಲ್ಲಿದ್ದಷ್ಟೇ ಬೆಲೆ ಹೂವು, ಹಣ್ಣು, ತರಕಾರಿಗಳಲ್ಲೂ ಕಂಡುಬರುತ್ತಿತ್ತು. ವರಮಹಾಲಕ್ಷ್ಮೀ ಹಬ್ಬಕ್ಕೆ ಹೋಲಿಸಿದರೆ ಬೆಲೆ ಕಡಿಮೆಯಾಗಿತ್ತು. ಹಣ್ಣುಗಳ ಪೈಕಿ ಪ್ರತಿ ಕೆಜಿ ಮಿಕ್ಸ್-150 ರು.. ಕಿತ್ತಳೆ-120 ರು,ಸೇಬು-150 ರೂ, ಮೂಸಂಬಿ-80 ರೂ., ದಾಳಿಂಬೆ-200 ರೂ., ದ್ರಾಕ್ಷಿ-200 ರೂ, ಮರಸೇಬು-200 ರೂ, ಬಾಳೆಹಣ್ಣು-80 ರೂ, ಸೀಬೆ-100 ರೂ, ಸೀತಾಫಲ-120 ರೂ, ಪೈನಾಪಲ್ ಒಂದಕ್ಕೆ 50 ರೂ ನಂತೆ ಮಾರಾಟವಾಗುತ್ತಿತ್ತು.
ತರಕಾರಿಗಳಲ್ಲಿ ಮಿಕ್ಸ್ ಪ್ರತಿ ಕೆಜಿಗೆ 80 ರೂ, ಬೀನಿಸ್-120 ರೂ, ಗೆಡ್ಡೆಕೋಸು-80ರೂ, ಕ್ಯಾರೆಟ್-80ರೂ, ಬೀಟ್ರೂಟ್-80 ರೂ, ಬೆಂಡೆಕಾಯಿ-40 ರೂ, ಮೂಲಂಗಿ-40 ರೂ, ಟಮ್ಯಾಟೋ-20 ರೂ ಇದ್ದರೆ, ಸೊಪ್ಪುಗಳಲ್ಲಿ ಕೊತ್ತಂಬರಿ ಒಂದು ಕಟ್ಟಿಗೆ 30 ರೂ, ಪುದೀನ-20 ರೂ, ಸಪ್ಸಿಗೆ ಸೊಪ್ಪು-30 ರೂ, ಪಾಲಾಕ್-10 ರೂ, ಕೀರೆಸೊಪ್ಪು-10 ರೂ, ಮೆಂತ್ಯ-30 ರೂ ನಂತೆ ಮಾರಾಟವಾಗುತ್ತಿದ್ದುದು ಕಂಡುಬಂದಿತು. ಹೂವಿನ ಬೆಲೆಯೂ ಸಾಮಾನ್ಯವಾಗಿತ್ತು. ಪ್ರತಿ ಮಾರು ಸೇವಂತಿಗೆ 80 ರೂ, ಕಾಕಡಾ-80 ರೂ, ಮಲ್ಲಿಗೆ-200 ರೂ, ಮರಳೆ-100 ರೂ, ಕನಕಾಂಬರ-130 ರೂಗಳಂತೆ ಮಾರಾಟವಾಗುತ್ತಿದ್ದವು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications