ಗೌರಿ ಲಂಕೇಶ್ ಹತ್ಯೆ, 500 ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ
ಬೆಂಗಳೂರು, ಸೆಪ್ಟೆಂಬರ್ 8 : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಪೊಲೀಸರು 500 ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಆದರೆ, ಇದುವರೆಗೂ ಯಾವುದೇ ಸುಳಿವುಗಳು ಪತ್ತೆಯಾಗಿಲ್ಲ.
ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಪೊಲೀಸರಿಗೆ ಇದುವರೆಗೂ ಉಪಯೋಗಿಸಿರುವ ಪಿಸ್ತೂಲ್ ಬಗ್ಗೆ ಮಾತ್ರ ಖಚಿತತೆ ಸಿಕ್ಕಿದೆ. 7.65 ಎಂಎಂ ಪಿಸ್ತೂಲ್ ಬಳಸಿ ಹತ್ಯೆ ಮಾಡಲಾಗಿದೆ ಎಂಬುದು ತನಿಖೆ ವೇಳೆ ಧೃಡಪಟ್ಟಿದೆ.

ಸುಪಾರಿ ಹಂತಕರು ಈ ಹತ್ಯೆ ಮಾಡಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ನಾಡ ಪಿಸ್ತೂಲ್ ಅನ್ನು ಸುಲಭವಾಗಿ ನಿರ್ಹವಣೆ ಮಾಡುವುದು ಕಷ್ಟ. ಮೊದಲ ಬಾರಿಗೆ ಅದನ್ನು ಉಪಯೋಗ ಮಾಡಿದವರು ಈ ಹತ್ಯೆ ಮಾಡಿಲ್ಲ ಎಂಬುದು ಪೊಲೀಸರ ಶಂಕೆಯಾಗಿದೆ.
ಪಿಸ್ತೂಲ್ನಿಂದ ಗುಂಡು ಹಾರಿದ ಬಳಿಕ ಅದು ಜಾಮ್ ಆಗುತ್ತದೆ. ಮತ್ತೆ ಅದನ್ನು ರಿಲೋಡ್ ಮಾಡಬೇಕು. ಗೌರಿ ಲಂಕೇಶ್ ಹತ್ಯೆಯಲ್ಲಿ ಹಲವು ಗುಂಡುಗಳನ್ನು ನಿರಂತರವಾಗಿ ಹಾರಿಸಲಾಗಿದೆ. ಆದ್ದರಿಂದ, ಇದು ಸುಪಾರಿ ಹಂತಕರ ಕೃತ್ಯವಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಹಲವರ ಹೇಳಿಕೆಗಳನ್ನು ದಾಖಲು ಮಾಡಿಕೊಂಡಿದ್ದಾರೆ. ಆರೋಪಿಗಳ ಬಗ್ಗೆ ಸುಳಿವು ಸಿಕ್ಕರೆ ತಿಳಿಸಿ ಎಂದು ಸಾರ್ವಜನಿಕರಿಗೂ ಮನವಿ ಮಾಡಿದ್ದಾರೆ. ಗೌರಿ ಲಂಕೇಶ್ ತಾಯಿಯ ಹೇಳಿಕೆ ಪಡೆಯಲು ಪೊಲೀಸರು ಕಾಯುತ್ತಿದ್ದಾರೆ.
ಹತ್ಯೆಯಾಗುವ ಕೆಲವು ದಿನಗಳ ಮೊದಲು ಮನೆಯ ಬಳಿ ಅಪರಿಚಿತರನ್ನು ನಾನು ನೋಡಿದ್ದೇನೆ ಎಂದು ಗೌರಿ ಲಂಕೇಶ್ ತಾಯಿಯ ಬಳಿ ಹೇಳಿಕೊಂಡಿದ್ದರು. ಆದ್ದರಿಂದ, ತಾಯಿಯ ಹೇಳಿಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ.
-
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ












Click it and Unblock the Notifications