ಗೌರಿ ಹತ್ಯೆ: ನವೀನ್ ವಿರುದ್ಧ ಚಾರ್ಜ್ಶೀಟ್ ಸಿದ್ಧಪಡಿಸಿದ ಎಸ್ಐಟಿ
ಬೆಂಗಳೂರು, ಏಪ್ರಿಲ್ 26: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿ ಕೆ.ಟಿ.ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜನ ವಿರುದ್ಧ ಎಸ್ಐಟಿ ಜಾರ್ಜ್ಶೀಟ್ ಸಿದ್ಧಪಡಿಸಿದೆ.
ಗೌರಿ ಲಂಕೇಸ್ ಹತ್ಯೆಯಲ್ಲಿ ನವೀನ್ ಮತ್ತು ಆತನ ಇಬ್ಬರು ಸಹಚರರು, ಜೊತೆಗೆ ಮತ್ತಿಬ್ಬರು ಶಾರ್ಪ್ಶೂಟರ್ಗಳು ಭಾಗಿಯಾಗಿದ್ದಾರೆ ಎಂಬುದಕ್ಕೆ ಸಾಕ್ಷಿಗಳನ್ನು ಕಲೆ ಹಾಕಿರುವ ಎಸ್ಐಟಿ ಈ ಸಂಬಂಧ 15 ದಿನಗಳೊಳಗೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲು ಚಿಂತನೆ ನಡೆಸಿದೆ.
ಗೌರಿ ಕೊಲೆಗೆ ಸಂಚು ರೂಪಿಸಿ, ಕಾರ್ಯಗತಗೊಳಿಸುವ ಸಂಬಂಧ ನವೀನ್ ಆನೆಕಲ್ ನ ವ್ಯಕ್ತಿಯೊಬ್ಬರ ಜೊತೆ ನಡೆಸಿರುವ ಸಂಭಾಷಣೆ ಎಸ್ಐಟಿಗೆ ಸಿಕ್ಕಿದೆ ಎನ್ನಲಾಗಿದೆ.

ಇದಲ್ಲದೆ ನವೀನ್ ಕೊಳ್ಳೆಗಾಲ ಹಾಗೂ ಸತ್ಯಮಂಗಲ ಅರಣ್ಯ ಪ್ರದೇಶಗಳಲ್ಲಿ ಸಹಚರರೊಂದಿಗೆ ಸಂಚಿನ ಬಗ್ಗೆ ಚರ್ಚೆ ನಡೆಸಿದ್ದ. ವಿಚಾರಣೆ ವೇಳೆ ಇದನ್ನು ಆತ ಒಪ್ಪಿಕೊಂಡಿದ್ದಾನೆ ಎಂದು ಎಸ್ಐಟಿ ಮೂಲಗಳು ಹೇಳಿದ್ದಾಗಿ ವರದಿಯಾಗಿದೆ.
ನವೀನ್ ಮತ್ತು ಆತನ ಸಹಚರರು ಕೃತ್ಯಕ್ಕೆ ಬಳಸಿದ್ದ ಪಿಸ್ತೂಲನ್ನು ಕೊಳ್ಳೆಗಾಲ ಅಥವಾ ಸತ್ಯಮಂಗಲ ಅರಣ್ಯ ಪ್ರದೇಶದಲ್ಲಿ ಎಸೆದಿದ್ದಾರೆ ಎನ್ನುವ ಮಾಹಿತಿಗಳು ಎಸ್ಐಟಿಗೆ ಸಿಕ್ಕಿದ್ದು, ಈ ಪ್ರದೇಶದಲ್ಲಿ ಹುಟುಕಾಟ ನಡೆಸುತ್ತಿದ್ದಾರೆ. ಈ ಬಗ್ಗೆ ಚಾರ್ಜ್ ಶೀಟ್ ನಲ್ಲಿಯೂ ಎಸ್ಐಟಿ ಉಲ್ಲೇಖ ಮಾಡಲಿದೆ ಎಂದು ತಿಳಿದು ಬಂದಿದೆ.
2017ರ ಸೆಪ್ಟೆಂಬರ್ 5ರಂದು ರಾಜರಾಜೇಶ್ವರಿ ನಗರದಲ್ಲಿರುವ ಮನೆಯ ಮುಂಭಾಗ ಗೌರಿ ಲಂಕೇಶ್ ರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications