ಗೌರಿ ಲಂಕೇಶ್ ಹತ್ಯೆ, ವಿಜಯಪುರದಲ್ಲಿ ಎಸ್ಐಟಿ ತಂಡ
ವಿಜಯಪುರ, ಅಕ್ಟೋಬರ್ 05 : ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ತಂಡ ವಿಜಯಪುರದಲ್ಲಿ ತನಿಖೆ ನಡೆಸುತ್ತಿದೆ. ಸೆಪ್ಟೆಂಬರ್ 5ರಂದು ಬೆಂಗಳೂರಿನಲ್ಲಿ ಗೌರಿ ಲಂಕೇಶ್ ಹತ್ಯೆ ನಡೆದಿತ್ತು.
ಬೆಂಗಳೂರು ಅಪರಾಧ ವಿಭಾಗದ ಡಿಸಿಪಿ, ಎಸ್ಐಟಿ ತಂಡದ ಅಧಿಕಾರಿ ಜಿನೇಂದ್ರ ಖನಗಾವಿ ವಿಜಯಪುರದಲ್ಲಿ ವಾಸ್ತವ್ಯ ಹೂಡಿದ್ದು, ತನಿಖೆ ನಡೆಸುತ್ತಿದ್ದಾರೆ. 'ತನಿಖಾ ತಂಡದ ಮುಖ್ಯಸ್ಥರ ಸೂಚನೆಯಂತೆ ಇಲ್ಲಿ ಬಂದು ತನಿಖೆ ನಡೆಸುತ್ತಿರುವೆ. ಎಷ್ಟು ದಿನ ತನಿಖೆ ನಡೆಯಲಿದೆ? ಎಂಬುದನ್ನು ಹೇಳಲಾಗುವುದಿಲ್ಲ' ಎಂದು ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇಂಡಿ ಹಾಗೂ ಸಿಂಧಗಿ ತಾಲೂಕಿನ ಭೀಮಾ ತೀರಿದ ಕೆಲವು ರೌಡಿಗಳು ಮಧ್ಯಪ್ರದೇಶದ ಅಕ್ರಮ ಶಸ್ತ್ರಾಸ್ತ್ರ ಪೂರೈಕೆದಾರರ ಜೊತೆ ನಂಟು ಹೊಂದಿದ್ದಾರೆ. ಹಲವು ಸುಪಾರಿ ಕಿಲ್ಲರ್ಗಳು ಇದ್ದಾರೆ. ಆಗಾಗ ಕೊಲೆಗಳನ್ನು ಇವರು ಮಾಡುತ್ತಾರೆ. ಆದ್ದರಿಂದ, ತನಿಖೆ ನಡೆಸಲಾಗುತ್ತಿದೆ.
ಗೌರಿ ಲಂಕೇಶ್ ಹತ್ಯೆಗೆ ಬಳಿಸಿದ ಪಿಸ್ತೂಲ್, ಇಲ್ಲಿನ ವ್ಯಕ್ತಿಗಳು ಯಾರಾದರೂ ಹತ್ಯೆಯಲ್ಲಿ ಭಾಗಿಯಾಗಿರಬಹುದೇ? ಎಂದು ಮಾಹಿತಿ ಸಂಗ್ರಹ ಮಾಡಲು ವಿಜಯಪುರದಲ್ಲಿ ತನಿಖೆ ನಡೆಸಲಾಗುತ್ತಿದೆ. ಜಿನೇಂದ್ರ ಖನಗಾವಿ ಅವರು ಹಿಂದೆ ವಿಜಯಪುರದಲ್ಲಿ ಎಸ್ಪಿಯಾಗಿ ಕೆಲಸ ಮಾಡಿದ್ದರು. ಆದ್ದರಿಂದ, ಇಲ್ಲಿನ ಅಪರಾಧ ಚಟುವಟಿಕೆಗಳ ಬಗ್ಗೆ ಮಾಹಿತಿ ಇರುವುದರಿಂದ ಅವರನ್ನು ತನಿಖೆಗೆ ನಿಯೋಜನೆ ಮಾಡಲಾಗಿದೆ.
ಗೌರಿ ಹತ್ಯೆಗೆ ಒಂದು ತಿಂಗಳು : ಬೆಂಗಳೂರಿನ ಆರ್.ಆರ್.ನಗರದ ನಿವಾಸದ ಮುಂದೆ ಗೌರಿ ಲಂಕೇಶ್ ಹತ್ಯೆ ನಡೆದು ಒಂದು ತಿಂಗಳು ಕಳೆದಿದೆ. ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು, 'ಗೌರಿ ಹಂತಕರ ಸುಳಿವು ಸಿಕ್ಕಿದೆ. ಎಸ್ಐಟಿ ತಂಡ ಸಾಕ್ಷಿಗಳ ಸಂಗ್ರಹಣೆಯಲ್ಲಿ ತೊಡಗಿದೆ' ಎಂದು ಎರಡು ದಿನಗಳ ಹಿಂದೆ ಹೇಳಿಕೆ ನೀಡಿದ್ದಾರೆ.
-
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications