ಗೌರಿ ಹತ್ಯೆ ಪ್ರಕರಣ: ಕಳೆದೆರಡು ದಿನದಲ್ಲಿ ಏನೇನಾಯಿತು?
ಬೆಂಗಳೂರು, ಜೂನ್ 13: ರಾಜ್ಯ ಮಾತ್ರವಲ್ಲದೆ ರಾಷ್ಟ್ರದಾದ್ಯಂತ ಕುತೂಹಲ ಕೆರಳಿಸಿರುವ ಗೌರಿ ಲಂಕೇಶ್ ಹತ್ಯೆ ಪ್ರಕರಣ ಕಳೆದೆರಡು ದಿನದಿಂದ ಹೆಚ್ಚಿನ ಚುರುಕು ಪಡೆದುಕೊಂಡಿದೆ.
ಗೌರಿ ಲಂಕೇಶ್ ಹತ್ಯೆಯ ಪ್ರಮುಖ ಆರೋಪಿ ಪರಶುರಾಮ್ ವಾಗ್ಮೋರೆ ಅವರನ್ನು ಎಸ್ಐಟಿಯು ನಿನ್ನೆ ಬಂದಿಸಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಆತನ ಜೊತೆಗೆ ಸುನಿಲ್ ಅಗಸರ ಎಂಬಾತನನ್ನೂ ಪೊಲೀಸರು ಬಂಧಿಸಿದ್ದಾರೆ.
ಪರಶುರಾಮ್ ವಾಗ್ಮೋರೆ ಅವರ ವಿಚಾರಣೆ ನಡೆಯುತ್ತಿದ್ದು, ಆತನೇ ಗೌರಿ ಲಂಕೇಶ್ ಅವರ ಮೇಲೆ ಗುಂಡು ಹಾರಿಸಿದವ ಎಂದು ಎಸ್ಐಟಿ ಹೇಳುತ್ತಿದೆ. ಈ ಎರಡು ದಿನದಲ್ಲಿ ಗೌರಿ ಹತ್ಯೆ ಪ್ರಕರಣದಲ್ಲಿ ಏನೇನಾಯಿತು ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ..

ಪರಶುರಾಮ್ ವಾಗ್ಮೋರೆ ಬಂಧನ
ಎಸ್ಐಟಿ ಪೊಲೀಸರು ನಿನ್ನೆ (ಜೂನ್ 13) ಸಿಂಧಗಿಯ ಪರಶುರಾಮ್ ವಾಗ್ಮೋರೆ ಎಂಬಾತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿತು. ಆತನೇ ಗೌರಿ ಲಂಕೇಶ್ ಮೇಲೆ ಗುಂಡು ಹಾರಿಸಿದವ ಎಂದು ಎಸ್ಐಟಿ ವಾದಿಸಿತು. ನ್ಯಾಯಾಲಯವು ಪರಶುರಾಮ್ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಪರಶುರಾಮ್ ಜೊತೆಗೆ ಸುನಿಲ್ ಅಗಸರ ಎಂಬಾತನನ್ನೂ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ ಆದರೆ ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿಲ್ಲ. ಪರಶುರಾಮ್ನನ್ನು ಎಲ್ಲಿ ಬಂಧಿಸಿದ್ದು ಎಂಬ ಬಗ್ಗೆ ಮಾಹಿತಿಯನ್ನು ಎಸ್ಐಟಿ ಬಹಿರಂಗ ಪಡಿಸಿಲ್ಲ.

ಪರಶುರಾಮ್ ವಾಗ್ಮೋರೆ ಹಿನ್ನೆಲೆ
ಪರಶುರಾಮ್ ವಾಗ್ಮೋರೆ ಸಿಂಧಗಿಯವನಾಗಿದ್ದು, ಆತ ಕಂಪ್ಯೂಟರ್ ಅಂಗಡಿ ಇಟ್ಟುಕೊಂಡಿದ್ದಾನೆ. ಈತ ಶ್ರೀರಾಮಸೇನೆಯ ಕಾರ್ಯಕರ್ತನಾಗಿದ್ದು, ಈತನ ಮೇಲೆ ಪಾಕಿಸ್ತಾನ ಧ್ವಜ ಹಾರಿಸಿದ ಕೇಸೊಂದು ಆರು ವರ್ಷದ ಹಿಂದೆ ದಾಖಲಾಗಿದೆ. ಇನ್ನು ಸುನಿಲ್ ಅಗಸರ ಕೂಡಾ ಶ್ರೀರಾಮಸೇನೆ ಕಾರ್ಯಕರ್ತನಾಗಿದ್ದು ಆತ ಇಸ್ತ್ರೀ ಅಂಗಡಿ ಇಟ್ಟುಕೊಂಡಿದ್ದಾನೆ. ಇಬ್ಬರೂ ಬಡ ಕುಟುಂಬದವರು ಅವರು ಕೊಲೆಯಂತಹಾ ಘೋರ ಅಪರಾಧದಲ್ಲಿ ತೊಡಗಿರಲು ಸಾಧ್ಯವಿಲ್ಲ ಎಂದು ಕುಟುಂಬಸ್ಥರು, ಸ್ನೇಹಿತರು ಹೇಳುತ್ತಿದ್ದಾರೆ.

ಪರಶುರಾಮ್ ಸುಳಿವು ಸಿಕ್ಕಿದ್ದು ಹೇಗೆ
ಭಗವಾನ್ ಹತ್ಯೆ ಸಂಚಿನ ಆರೋಪದಲ್ಲಿ ಬಂಧಿತನಾಗಿರುವ ಪ್ರವೀಣ್ ಎಂಬಾತ ಪರಶುರಾಮ್ನಿಂದ ಬಂದೂಕು ಪಡೆದುದಾಗಿ ಹೇಳಿಕೆ ನೀಡಿದ್ದ. ಅಲ್ಲದೆ ಆತನು ಬಂದೂಕು ಚಲಾವಣೆ ಮಾಡುವ ತರಬೇತಿ ಪಡೆದಿದ್ದ ಎನ್ನಲಾಗಿದೆ. ಪರಶುರಾಮ್ ಬೆಂಗಳೂರಿಗೆ ಬಂದಿದ್ದಾಗ ಹಲವು ಬಾರಿ ನವೀನ್ ಕುಮಾರ್ಗೆ ಕರೆ ಮಾಡಿದ್ದ ಹಾಗಾಗಿ ಎಸ್ಐಟಿಯು ಪರಶುರಾಮ್ನನ್ನು ಬಂಧಿಸಿದ್ದಾರೆ.

ಪ್ರಮೋದ್ ಮುತಾಲಿಕ್ ಹೇಳಿಕೆ
ಬಂಧಿತ ಪರಶುರಾಮ್ ಹಾಗೂ ಸುನಿಲ್ ಶ್ರೀರಾಮ ಸೇನೆಗೆ ಸೇರಿದವರು ಎನ್ನುತ್ತಿದ್ದಂತೆ ಹೇಳಿಕೆ ನೀಡಿದ ಶ್ರೀರಾಮಸೇನೆ ರಾಷ್ಟ್ರಾಧ್ಯಕ್ಷ ಪ್ರಮೋದ್ ಮುತಾಲಿಕ್ ಆತ ಸಂಘಟನೆಯವನಲ್ಲ ಎಂದರು. ಆದರೆ ಆ ವೇಳೆಗಾಗಲೇ ಪ್ರಮೋದ್ ಮುತಾಲಿಕ್ ಜೊತೆಗಿನ ಪರಶುರಾಮ್ ಫೊಟೊ ವೈರಲ್ ಆಗಿತ್ತು.

ನ್ಯಾಯಾಲಯಕ್ಕೆ ಮೊರೆ ಹೋದ ಹೊಟ್ಟೆ ಮಂಜ
ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಮೊದಲಿಗೆ ಬಂಧಿತನಾದ ಆರೋಪಿ ಕೆ.ಟಿ.ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜ ಜಾಮೀನು ಕೊರಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾನೆ. ಪೊಲೀಸರು ಮಾನಸಿಕ, ದೈಹಿಕ ಕಿರುಕುಳ ನೀಡುತ್ತಾರೆ ಎಂದು ಆತ ನ್ಯಾಯಾಲಯದಲ್ಲಿ ದೂರು ಹೇಳಿದ್ದಾನೆ. ಆತನ ಅರ್ಜಿಯ ವಿಚಾರಣೆ ನಾಳೆ ನಡೆಯಲಿದೆ.

ಧರ್ಮ ರಕ್ಷಕ ಪಟ್ಟ ನೀಡಿದ ಶ್ರೀರಾಮ ಸೇನೆ
ಪರಶುರಾಮ್ ವಾಗ್ಮೋರೆಯನ್ನು ಶ್ರೀರಾಮ ಸೇನೆ ಸೇರಿದಂತೆ ಹಲವು ಹಿಂದೂಪರ ಸಂಘಟನೆಗಳ ಸದಸ್ಯರು ಬೆಂಬಲಿಸಿ ಪೋಸ್ಟ್ ಹಾಕಿದ್ದಾರೆ. ಮುಖ್ಯವಾಗಿ ಶ್ರೀರಾಮಸೇನೆಯ ರಾಜ್ಯ ಕಾರ್ಯದರ್ಶಿ ನೀಲಕಂಠ ಕಂದುಗೋಲ್ ಅವರು ಫೇಸ್ಬುಕ್ನಲ್ಲಿ ಪರಶುರಾಮ್ನನ್ನು ಧರ್ಮ ರಕ್ಷಕ ಎಂದು ಹೊಗಳಿದ್ದಾರೆ.

ಪ್ರಗತಿಪರರಿಗೆ ಹೆಚ್ಚಿದ ಭದ್ರತೆ
ಗೌರಿ ಹತ್ಯೆ ಆರೋಪಿಗಳನ್ನು ಬಂಧಿಸುತ್ತಿದ್ದಂತೆ ವಿಚಾರವಾದಿಗಳಿಗೆ ಪೊಲೀಸ್ ಭದ್ರತೆ ನೀಡಲಾಗಿದೆ. ಸಾಹಿತಿ ಭಗವಾನ್ಗೆ ಈಗಾಗಲೇ ಭದ್ರತೆ ನೀಡಲಾಗಿದ್ದು. ಇಂದು ಮೈಸೂರಿನ ಪ್ರೊಫೆಸರ್ ಮಹೇಶ್ ಚಂದ್ರ ಗುರು ಅವರಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications