ಗೌರಿ ಲಂಕೇಶ್ ಹತ್ಯೆ, ಸಿಬಿಐ ತನಿಖೆಗೆ ಒತ್ತಾಯ
ಬೆಂಗಳೂರು, ಸೆಪ್ಟೆಂಬರ್ 06 : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ. ಮುಖ್ಯಮಂತ್ರಿಸ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ.
ಮಂಗಳವಾರ ರಾತ್ರಿ ಬೆಂಗಳೂರಿನ ಆರ್.ಆರ್.ನಗರದ ನಿವಾಸದಲ್ಲಿ ಗೌರಿ ಲಂಕೇಶ್ ಹತ್ಯೆ ನಡೆದಿತ್ತು. ಮಾಧ್ಯಮಗಳ ಜೊತೆ ಮಾತನಾಡಿದ್ದ ಗೌರಿ ಲಂಕೇಶ್ ಸಹೋದರ ಇಂದ್ರಜಿತ್ ಲಂಕೇಶ್, 'ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು' ಎಂದು ಒತ್ತಾಯಿಸಿದ್ದರು.

ಬುಧವಾರ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು, ಕರ್ನಾಟಕ ಸರ್ಕಾರ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಹೇಳಿದ್ದಾರೆ.
Karnataka Government should hand over the case to CBI- D. V. Sadananda Gowda,Union Minister on #GauriLankesh pic.twitter.com/LnHccubP4n
— ANI (@ANI) September 6, 2017
ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಗೆ ಮೂರು ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದೆ. ಸದ್ಯ, ಬೆಂಗಳೂರು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಸರ್ಕಾರ ಸಿಐಡಿ ಅಥವ ಸಿಬಿಐ ತನಿಖೆಗೆ ಆದೇಶ ನೀಡಲಿದೆಯೇ? ಕಾದು ನೋಡಬೇಕು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಂತಕರನ್ನು ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಅವರು ಬುಧವಾರ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು.












Click it and Unblock the Notifications