ಗೌರಿ ಲಂಕೇಶ್ ಹತ್ಯೆ: ತನಿಖಾಧಿಕಾರಿಗಳಿಗೆ ಸಿಕ್ಕಿತು ಮತ್ತೊಂದು ಟ್ವಿಸ್ಟ್?
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ವಿಚಾರದಲ್ಲಿ ವಿಶೇಷ ತನಿಖಾ ತಂಡಕ್ಕೆ ಮಹತ್ವದ ದೂರೊಂದು ದಾಖಲು.
ಬೆಂಗಳೂರು, ಸೆ 16: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ವಿಚಾರದಲ್ಲಿ ವಿಶೇಷ ತನಿಖಾ ತಂಡಕ್ಕೆ (SIT) ಮಹತ್ವದ ದೂರೊಂದು ದಾಖಲಾಗಿದ್ದು, ನಾಡಿನ ಪ್ರಮುಖ ಮಠದ ಮೇಲೆ ಗಂಭೀರ ಆರೋಪ ಹೊರಿಸಲಾಗಿದೆ.
ಗೌರಿ ಲಂಕೇಶ್ ಹತ್ಯೆಯ ವಿಚಾರದಲ್ಲಿ ಹತ್ತು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿರುವ ತನಿಖಾ ತಂಡಕ್ಕೆ, ರಾಮಚಂದ್ರಾಪುರ ಮಠದ ಮಾಜಿ ಶಿಷ್ಯೆ, ಪ್ರೇಮಲತಾ ದಿವಾಕರ್ ದಂಪತಿಗಳು ದೂರು ಸಲ್ಲಿಸಿದ್ದು, ಅದರಲ್ಲಿ ರಾಘವೇಶ್ವರ ಶ್ರೀಗಳ ಹೆಸರನ್ನು ಉಲ್ಲೇಖಿಸಲಾಗಿದೆ ಎಂದು ಕನ್ನಡ ಟಿವಿ ಮಾಧ್ಯಮಗಳು ವರದಿ ಮಾಡಿವೆ.

ರಾಘವೇಶ್ವರ ಶ್ರೀಗಳ ವಿರುದ್ದ ಗೌರಿ ಲಂಕೇಶ್ ಲೇಖನ ಬರೆದಿದ್ದರು. ಹಾಗಾಗಿ, ರಾಘವೇಶ್ವರ ಶ್ರೀಗಳೇ ಗೌರಿ ಹತ್ಯೆಗೆ ಸುಪಾರಿ ಯಾಕೆ ಕೊಟ್ಟಿರಬಾರದು ಎನ್ನುವ ಶಂಕೆಯನ್ನು ವ್ಯಕ್ತಪಡಿಸಿ, ಪ್ರೇಮಲತಾ ದಿವಾಕರ್ ಸುಮಾರು ಐನೂರು ಪುಟಗಳ ದಾಖಲೆ ಮತ್ತು ಪತ್ರವನ್ನು ಎಸ್ ಐಟಿಗೆ ನೀಡಿದ್ದಾರೆಂದು ಸುವರ್ಣ ವಾಹಿನಿ ವರದಿ ಮಾಡಿದೆ.
ವಿಶೇಷ ತನಿಖಾ ತಂಡ ಈ ನಿಟ್ಟಿನಲ್ಲೂ ವಿಚಾರಣೆ ನಡೆಸುವ ಸಾಧ್ಯತೆಯಿದೆ ಎಂದು ಪ್ರಜಾವಾಣಿ ಪತ್ರಿಕೆ ಕೂಡಾ ವರದಿ ಮಾಡಿತ್ತು. ಪ್ರೇಮಲತಾ ನೀಡಿರುವ ದೂರುಗಳನ್ನು SIT ಪರಿಶೀಲಿಸುತ್ತಿದೆ ಎಂದು ವರದಿಯಾಗಿದೆ.
ಗೌರಿ ಹತ್ಯೆಯ ವಿಚಾರದಲ್ಲಿ ಏನಾದರೂ ಮಾಹಿತಿಯಿದ್ದರೆ ಸಾರ್ವಜನಿಕರು ಕರೆ ಮಾಡಿ ಮಾಹಿತಿ ನೀಡಬಹುದು ಎನ್ನುವ ಇಲಾಖೆಯ ಪತ್ರಿಕಾ ಪ್ರಕಟಣೆಗೆ ಇದುವರೆಗೆ ನೂರಾರು ದೂರವಾಣಿ ಕರೆಗಳು ಬಂದಿವೆ.
ಅದರಲ್ಲಿ ಹೆಚ್ಚಿನ ಕರೆಗಳು ರಾಘವೇಶ್ವರ ಶ್ರೀಗಳ ಮೇಲೆ ಶಂಕೆ ವ್ಯಕ್ತಪಡಿಸಿ ಬಂದಿದ್ದು ಎನ್ನಲಾಗುತ್ತಿದ್ದು, ಆದರೆ ಯಾವುದೇ ಸಂಬಂಧಪಟ್ಟ ಸಾಕ್ಷಿಗಳು ಲಭ್ಯವಾಗಿಲ್ಲ ಎನ್ನುವ ಮಾಹಿತಿಯಿದೆ.
ಗೌರಿ ಹತ್ಯೆಗೆ ಸಂಬಂಧ ಶ್ರೀಗಳ ವಿರುದ್ದ ಪ್ರೇಮಲತಾ ಅವರು ಏನು ಆರೋಪ ಮಾಡಿದ್ದಾರೋ, ಅದಕ್ಕೆ ಪೂರಕ ದಾಖಲೆಗಳನ್ನು ತೆಗೆದುಕೊಂಡು ಶ್ರೀಮಠಕ್ಕೆ ಬಂದರೆ, ಮಠ ಮುಕ್ತವಾಗಿ ವಿಚಾರಣೆ ಎದುರಿಸುತ್ತದೆ ಎಂದು ರಾಮಚಂದ್ರಾಪುರ ಮಠದ ಅಧಿಕಾರಿಗಳು ' ಒನ್ ಇಂಡಿಯಾ' ಗೆ ತಿಳಿಸಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications