ಹತ್ಯೆದಿನ ಹಂತಕ ಗೌರಿ ಲಂಕೇಶ್ ಮನೆ ಸುತ್ತ 3 ಬಾರಿ ಬಂದು ಹೋಗಿದ್ದ!
Recommended Video

ಬೆಂಗಳೂರು, ಸೆಪ್ಟೆಂಬರ್ 13: ಗೌರಿ ಲಂಕೇಶ್ ಹತ್ಯೆಯ ತನಿಖೆ ನಡೆಯುತ್ತಿದ್ದು ಸಿಸಿಟಿವಿ ಫೂಟೇಜ್ ಗಳು ನೀಡಿದ ಸಾಕ್ಷ್ಯಗಳ ಪ್ರಕಾರ ಒಬ್ಬನೇ ಒಬ್ಬ ವ್ಯಕ್ತಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
In Pics: ನಾನೂ ಗೌರಿ ಎಂದು ಬಂದರು ಸಾವಿರಾರು ಮಂದಿ
ಸಿಸಿಟಿವಿಯಲ್ಲಿ ದಾಖಲಾಗಿರುವ ಬೇರೆ ಬೇರೆ ಕೋನಗಳ ದೃಶ್ಯಾವಳಿಗಳು ಇದನ್ನು ಹೇಳುತ್ತಿವೆ. ಗೌರಿ ಲಂಕೇಶ್ ಹತ್ಯೆಯಾದ ದಿನ ಅಂದರೆ ಸೆಪ್ಟೆಂಬರ್ 5ರಂದು ಬಿಳಿ ಶರ್ಟ್ ಧರಿಸಿ ಹೆಲ್ಮೆಟ್ ಹಾಕಿಕೊಂಡಿದ್ದ ಹಂತಕ ಮೂರು ಬಾರಿ ಅವರ ಮನೆ ಬಳಿ ಬಂದು ಹೋಗಿದ್ದ.

3.15 ನಿಮಿಷಕ್ಕೆ ಆತ ಮೊದಲ ಬಾರಿಗೆ ಮನೆ ಪಕ್ಕ ಬಂದಿದ್ದ. ಮೂರು ಬಾರಿಯೂ ಆತ ಬೈಕ್ ನಲ್ಲೇ ಬಂದಿದ್ದು. ಮೂರನೇ ಬಾರಿಗೆ ಆತ ಬರುವಾಗ ಆತನ ಜತೆಗೊಂದು ಬ್ಯಾಗ್ ಇತ್ತು. ಇದರಲ್ಲಿ ಆತ ಬಂದೂಕು ಅಡಗಿಸಿಟ್ಟುಕೊಂಡಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ.
ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿದ ಹಲವಾರು ವ್ಯಕ್ತಿಗಳನ್ನು ವಿಶೇಷ ತನಿಖಾ ತಂಡ ವಿಚಾರಣೆ ನಡೆಸುತ್ತಿದೆ. ಆದರೆ ಇಲ್ಲಿಯವರೆಗೆ ಯಾರನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿಲ್ಲ.
ಹಲವು ಕೋನಗಳಿಂದ ಪ್ರಕರಣವನ್ನು ತನಿಖೆ ನಡೆಸಲಾಗುತ್ತಿದೆ. ಸುಳಿವುಗಳು, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಎಲ್ಲವನ್ನೂ ಪಡೆದುಕೊಂಡು ತನಿಖೆಯಲ್ಲಿ ಬಳಸಿಕೊಳ್ಳಲಾಗುತ್ತಿದೆ.
ಗೌರಿ ಲಂಕೇಶ್ ಕೊಲೆ ಮಾಡಿದ ವ್ಯಕ್ತಿ ಒಟ್ಟು ನಾಲ್ಕು ಬುಲೆಟ್ ಗಳನ್ನು ಶೂಟ್ ಮಾಡಿದ್ದ. ಇದರಲ್ಲಿ ಮೂರು ಆಕೆಯ ದೇಹವನ್ನು ಹೊಕ್ಕರೆ ಒಂದು ಮಾತ್ರ ಮಿಸ್ ಆಗಿ ಗೋಡೆಗೆ ಬಡಿದಿತ್ತು ಎಂಬುದು ತನಿಖೆ ವೇಳೆ ತಿಳಿದು ಬಂದಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications