ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಳ
ಬೆಂಗಳೂರು, ಮಾರ್ಚ್ 28 : ಬಿರು ಬೇಸಿಗೆಯಲ್ಲಿ ವಿದ್ಯುತ್ ಕೊರತೆ ಎದುರಿಸುತ್ತಿದ್ದೇವೆ. ಇದರ ನಡುವೆಯೇ ದರವೂ ಹೆಚ್ಚಳವಾಗುವ ಸಾಧ್ಯತೆ ಇದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ದರ ಪರಿಷ್ಕರಣೆ ಮಾಡಿದ್ದು, ಏಪ್ರಿಲ್ 1ರಿಂದ ನೂತನ ದರ ಜಾರಿಗೆ ಬರಲಿದೆ.
ವಿದ್ಯುತ್ ಸರಬರಾಜು ಕಂಪನಿಗಳು ದರ ಹೆಚ್ಚಳದ ಕುರಿತು ಸಲ್ಲಿಸಿದ ಬೇಡಿಕೆಗಳನ್ನು ಆಯೋಗ ಪರಿಗಣಿಸಿದ್ದು, ದರವನ್ನು ಪರಿಷ್ಕರಣೆ ಮಾಡಲಾಗಿದೆ. ಮಾ.30 ಅಥವ 31ರಂದು ದರ ಏರಿಕೆ ಕುರಿತು ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ.[ವಿದ್ಯುತ್ ದರ ಹೆಚ್ಚಳಕ್ಕೆ ಸಿದ್ಧವಾಗಿ]

ವಿದ್ಯುತ್ ಸರಬರಾಜು ಕಂಪನಿಗಳು ಪ್ರತಿ ಯೂನಿಟ್ಗೆ 1.2 ರೂ. ದರ ಹೆಚ್ಚಳ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿವೆ. ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ 35 ರಿಂದ 50 ಪೈಸೆ ವರೆಗೆ ದರ ಹೆಚ್ಚಳ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.[ಕರ್ನಾಟಕದಲ್ಲಿ ವಿದ್ಯುತ್ ಕೊರತೆ : ಶಾಶ್ವತ ಪರಿಹಾರಗಳು]
2015ರಲ್ಲಿ ವಿದ್ಯುತ್ ಸರಬರಾಜು ಕಂಪನಿಗಳು ಪ್ರತಿ ಯೂನಿಟ್ಗೆ ಕನಿಷ್ಠ 80 ಪೈಸೆ ದರ ಹೆಚ್ಚಳ ಮಾಡಬೇಕೆಂದು ಆಯೋಗಕ್ಕೆ ಮನವಿ ಮಾಡಿದ್ದವು. 2015ರ ಮಾರ್ಚ್ನಲ್ಲಿ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಪ್ರತಿ ಯೂನಿಟ್ಗೆ 13 ರಿಂದ 20 ಪೈಸೆ ತನಕ ದರ ಹೆಚ್ಚಳ ಮಾಡಿತ್ತು. [ಕರೆಂಟ್ ಕೊಡಿ ಎಂದು ಕರೆ ಮಾಡಿದ್ದಕ್ಕೆ ಕಂಬಿ ಹಿಂದೆ ಹೋದ್ರು]
ನಂತರ ಹಲವು ಬಾರಿ ವಿದ್ಯುತ್ ಸರಬರಾಜು ಕಂಪನಿಗಳಾಗದ ಬೆಸ್ಕಾಂ, ಹೆಸ್ಕಾಂ, ಜೆಸ್ಕಾಂ, ಮೆಸ್ಕಾಂ ಮತ್ತು ಚೆಸ್ಕಾಂ ಪುನಃ ಆಯೋಗಕ್ಕೆ ದರ ಹೆಚ್ಚಳಕ್ಕೆ ಅವಕಾಶ ನೀಡಬೇಕು ಎಂದು ಮನವಿ ಸಲ್ಲಿಸಿದ್ದವು. ಈ ಬೇಡಿಕೆಗೆ ಆಯೋಗ ಸ್ಪಂದಿಸಿದ್ದು, ದರ ಹೆಚ್ಚಳ ಮಾಡಲು ಮುಂದಾಗಿವೆ. [ಈಗ ವಿದ್ಯುತ್ ದರ ಎಷ್ಟಿದೆ?]
'ಎಲ್ಲ ವಿದ್ಯುತ್ ಸರಬರಾಜು ಕಂಪನಿಗಳು ದರ ಹೆಚ್ಚಳದ ಕುರಿತು ಸಲ್ಲಿಸಿದ ಬೇಡಿಕೆಗಳನ್ನು ಪರಿಗಣಿಸಿ ವಿದ್ಯುತ್ ದರ ಪರಿಷ್ಕರಣೆಯ ಅಂತಿಮ ಆದೇಶವನ್ನು ಶೀಘ್ರದಲ್ಲೇ ಹೊರಡಿಸಲಾಗುತ್ತದೆ' ಎಂದು ಆಯೋಗದ ಅಧ್ಯಕ್ಷ ಎಂ.ಕೆ. ಶಂಕರಲಿಂಗೇಗೌಡ ಕೆಲವು ದಿನಗಳ ಹಿಂದೆ ಹೇಳಿದ್ದರು.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications