ಕರ್ನಾಟಕದ ರಾಗಿ ಮುದ್ದೆ, ಬಸ್ಸಾರು ನೆನಪಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು!
ಬೆಂಗಳೂರು, ಆ. 24: ಕರ್ನಾಟಕದ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ರಾಜ್ಯದ ಆಹಾರವನ್ನು ನೆನಪಿಸಿದ್ದಾರೆ.
ಐದು ದಿನಗಳ ರಾಜ್ಯ ಪ್ರವಾಸದಲ್ಲಿರುವ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮಂಗಳವಾರ ಮಹತ್ವದ ಕೊರೊನಾ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ, ಸುಸ್ಥಿರ ಗುರಿಗಳ ಸಹಕಾರ ಕೇಂದ್ರ ಹಾಗೂ ಗಿವ್ ಇಂಡಿಯಾ ಪ್ರತಿಷ್ಠಾನದ ಸಹಯೋಗದಲ್ಲಿ ಆಯೋಜಿಸಿದ್ದ ವ್ಯಾಕ್ಸಿನೇಟ್ ಇಂಡಿಯಾ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ರಾಜಭವನದಲ್ಲಿ ಚಾಲನೆ ನೀಡಿದರು.
ಸಾಂಕೇತಿಕವಾಗಿ ಇಬ್ಬರು ಮಹಿಳೆಯರಿಗೆ ವ್ಯಾಕ್ಸಿನ್ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಉಪರಾಷ್ಟ್ರಪತಿಗಳು, "ಸಾರ್ವಜನಿಕರು ಮೈ ಮರೆಯಬಾರದು. ಕಡ್ಡಾಯವಾಗಿ ಆರು ಅಡಿ ಅಂತರ ಕಾಯ್ದುಕೊಳ್ಳಬೇಕು, ಮಾಸ್ಕ್ ಧರಿಸುವುದು, ಕೈ ತೊಳೆಯುಯುವುದನ್ನು ಕಡ್ಡಾಯವಾಗಿ ಪಾಲಿಸಬೇಕು" ಎಂದರು.

ರಾಗಿ ಮುದ್ದೆ, ಬಸ್ಸಾರು ಆರೋಗ್ಯಕರ ಆಹಾರ!
ಇದೇ ಸಂದರ್ಭದಲ್ಲಿ ಮಾತನಾಡಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ದು ಕರ್ನಾಟಕದ ಆಹಾರವನ್ನು ನೆನಪಿಸಿದರು. "ಕೋವಿಡ್ ಮಹಾಮಾರಿಗೆ ಇಡೀ ವಿಶ್ವವೇ ತತ್ತರಿಸಿದೆ. ಕೋವಿಡ್ ಹಾವಳಿ ನಿರಂತರವಾಗಿದ್ದು, ಜನರು ಎಚ್ಚೆತ್ತುಕೊಂಡಿರಬೇಕು. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ಹಾಗೂ ಆರೋಗ್ಯ ಇಲಾಖೆಗಳು ಜಾರಿ ಮಾಡಿರುವಂತಹ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಆರೋಗ್ಯವೇ ಮಹಾಭಾಗ್ಯವೆಂದು ಅರಿತುಕೊಂಡು, ಮಾಸ್ಕ್ ಧರಿಸುವುದು, ಭೌತಿಕ ಅಂತರ ಕಾಪಾಡಿಕೊಳ್ಳುವುದು, ದೈಹಿಕ ವ್ಯಾಯಾಮ ಮಾಡುವುದರ ಜೊತೆಗೆ ಜಂಕ್ ಪುಡ್ ಸೇವಿಸುವುದನ್ನು ಕಡಿಮೆ ಮಾಡಬೇಕು."
"ಕರ್ನಾಟಕದ ಸಾಂಪ್ರಾದಾಯಿಕ ಆಹಾರವನ್ನು ಸೇವಿಸುವುದರಿಂದ ಆರೋಗ್ಯ ಉತ್ತಮವಾಗಿರುತ್ತದೆ ಎಂದ ಅವರು ಕರ್ನಾಟಕ ರಾಗಿ ಮುದ್ದೆ, ಬಸ್ಸಾರು ರುಚಿಕರ ಮತ್ತು ಆರೋಗ್ಯಕರ ಆಹಾರವಾಗಿದೆ" ಎಂದು ವಿವರಿಸಿದರು.
|
ಕೊರೊನಾ ವಿರುದ್ಧ ಉಚಿತ ಲಸಿಕೆ ಅಭಿಯಾನ!
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಾತನಾಡಿ, "ಉಚಿತ ಲಸಿಕೆಯನ್ನು ಭಾರತ ಸರ್ಕಾರ ನಡೆಸುತ್ತಿದೆ. ಇದನ್ನು ಜನವರಿ 16, 2021 ರಿಂದ ಆರಂಭಿಸಲಾಯಿತು, ಮೊದಲ ಹಂತದಲ್ಲಿ, ಆರೋಗ್ಯ ಕಾರ್ಯಕರ್ತರಿಗೆ ಲಸಿಕೆಯನ್ನು ನೀಡಲಾಯಿತು, ನಂತರ ಫೆಬ್ರವರಿ 8, 2021 ರಿಂದ, ಮುಂಚೂಣಿಯ ಕೆಲಸಗಾರರಿಗೆ ಲಸಿಕೆಯನ್ನು ನೀಡಲಾಯಿತು. ಎರಡನೇ ಹಂತದಲ್ಲಿ, ಮಾರ್ಚ್ 1, 2021 ರಿಂದ, 60 ವರ್ಷಕ್ಕಿಂತ ಮೇಲ್ಪಟ್ಟ ಜನರು ಮತ್ತು ಏಪ್ರಿಲ್ 1, 2021 ರಿಂದ, 45-59 ವಯಸ್ಸಿನ ಜನರನ್ನು ಪ್ರಾರಂಭಿಸಲಾಯಿತು" ಎಂದು ವಿವರಿಸಿದರು.

ಸೆಪ್ಟಂಬರ್ ತಿಂಗಳಿನಿಂದ ಹೆಚ್ಚು ಲಸಿಕೆ!
ಲಸಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಬಡವರು, ಕೆಳ ಹಂತದ ವರ್ಗದವರಿಗೆ ಲಸಿಕೆ ನೀಡುವುದು ನಮ್ಮ ಗುರಿ. ದಾನಿಗಳು ಹಾಗೂ ಖಾಸಗಿ ಸಂಸ್ಥೆಗಳು ಸಿಎಸ್ಆರ್ ನಿಧಿ ಮೂಲಕ ಲಸಿಕೆ ನೀಡಲು ಮುಂದಾಗಬೇಕು. ಸರ್ಕಾರ ಹಾಗೂ ಸಮಾಜ ಒಟ್ಟಾಗಿ ಕೋವಿಡ್ ವಿರುದ್ಧ ಹೋರಾಡಬೇಕಿದೆ ಎಂದರು. ಸೆಪ್ಟೆಂಬರ್ ತಿಂಗಳಿನಿಂದ ಪ್ರತಿ ದಿನ 5 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಈಗ ಪ್ರತಿದಿನ 3.5 ರಿಂದ 4 ಲಕ್ಷ ಜನರಿಗೆ ಲಸಿಕೆ ನೀಡಲಾಗುತ್ತಿದೆ ಎಂದರು.

ಹೆಚ್ಚಿನ ಲಸಿಕೆ ಸರಬರಾಜಿಗೆ ಮನವಿ!
ನಾಳೆ ದೆಹಲಿಗೆ ತೆರಳುತ್ತಿದ್ದೇನೆ. ಕೇಂದ್ರ ಆರೋಗ್ಯ ಸಚಿವರನ್ನು ಭೇಟಿ ಮಾಡಲು ಸಮಯಾವಕಾಶ ಕೇಳಿದ್ದೇನೆ. ಆರೋಗ್ಯ ಸಚಿವರನ್ನು ಭೇಟಿ ಮಾಡಿದಾಗ, ಈಗಿನ ಲಸಿಕೆ ಸರಬರಾಜಿಗಿಂತ ಹೆಚ್ಚಿನ ಲಸಿಕೆ ಕೊಡುವಂತೆ ಮನವಿ ಮಾಡಲಿದ್ದೇವೆ. ಕೇಂದ್ರ ಸರ್ಕಾರದಿಂದ 1.5 ಕೋಟಿ ಲಸಿಕೆ ಪೂರೈಕೆಯಾಗುವ ನಿರೀಕ್ಷೆ ಇದೆ. ಈ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications