BREAKING: ಈಗ 11 ಗಂಟೆಗೆ ಸಾರಿಗೆ ನೌಕರರ ಮುಷ್ಕರ ವಾಪಾಸ್!
ಬೆಂಗಳೂರು, ಡಿ. 14: ಮುಂದಿನ ಒಂದು ಗಂಟೆಯಲ್ಲಿ (ಬೆಳಗ್ಗೆ 11 ಗಂಟೆಗೆ) ಸಾರಿಗೆ ನೌಕರರು ಮುಷ್ಕರ್ ವಾಪಾಸ್ ಪಡೆಯುವುದು ಖಚಿತವಾಗಿದೆ. ಈ ಕುರಿತು ಮಾಹಿತಿ ನೀಡಿರುವ ಸಾರಿಗೆ ನೌಕರರ ಹೋರಾಟದ ನೇತೃತ್ವ ವಹಿಸಿರುವ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರು ಮುಷ್ಕರ ಕೈಬಿಡುವುದು ಅನಿವಾರ್ಯ ಎಂದು ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಹೋರಾಟದಲ್ಲಿ ಭಾಗಿಯಾಗಿರುವ ನಮ್ಮ ಕೋರ್ ಟೀಂ ಜೊತೆಗೆ ಚರ್ಚಿಸಿ ಅಂತಿಮ ನಿರ್ಧಾರವನ್ನು ಪ್ರಕಟಿಸುತ್ತೇವೆ ಎಂದಿದ್ದಾರೆ. ಹೀಗಾಗಿ ಮುಷ್ಕರ ಮುಂದಿನ ಒಂದು ಗಂಟೆಯಲ್ಲಿ ತಾರ್ಕಿಕ ಅಂತ್ಯ ಕಾಣಲಿದೆ.
Recommended Video
ಮೊದಲೇ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಭಟನೆ ಮಾಡುತ್ತಿದ್ದವರೊಂದಿಗೆ ಮಾತನಾಡಿದ್ದರೆ ಈ ಸ್ಥಿತಿ ಎದುರಾಗುತ್ತಿರಲಿಲ್ಲ. ಈಗ 11 ಗಂಟೆಗೆ ಪ್ರತಿಭಟನೆಯ ನೃತೃತ್ವ ವಹಿಸಿರುವ ಕೋರ್ ಟೀಂ ಜೊತೆ ಮಾತನಾಡಿ ಅಂತಿಮ ನಿರ್ಧಾರ ಪ್ರಕಟ ಮಾಡುತ್ತೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿಕೆ ನೀಡಿದ್ದಾರೆ. ಹೀಗಾಗಿ ಮಧ್ಯಾಹ್ನ 12 ಗಂಟೆಯ ಬಳಿಕ ಸಾರಿಗೆ ಬಸ್ಗಳು ರಸ್ತೆಗೆ ಇಳಿಯಲಿವೆ.
ಮೊದಲು ಮುಷ್ಕರ ವಾಪಾಸ್ ಪಡೆಯಲಿ: ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು, ಸಂಸ್ಥೆಯ ನೌಕರರು ಸರ್ಕಾರ ಒಂದೇ ಕುಟುಂಬ ಇದ್ದಂತೆ. ನಮ್ಮ ಕುಟುಂಬದ ಸಮಸ್ಯೆಯನ್ನು ನಾವೇ ಪರಿಹರಿಸಿಕೊಳ್ಳುತ್ತೇವೆ. ಕೋಡಿಹಳ್ಳಿ ಚಂದ್ರಶೇಖರ್ ಅವರಿಗು ನಮಗೂ ಯಾವುದೇ ಸಂಬಂಧವಿಲ್ಲ ಎಂದು ಬೆಂಗಳೂರಿನಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್ ಅವರು ಈ ಸಂದರ್ಭದಲ್ಲಿ ನನ್ನೊಂದಿಗೆ ಮಾತನಾಡಿಲ್ಲ ಎಂದಿರುವ ಸಾರಿಗೆ ಸಚಿವ ಸವದಿ ಅವರು, ಹಿಂದೆ ಬಹಳಷ್ಟು ಸಂದರ್ಭಗಳಲ್ಲಿ ಅವರೊಂದಿಗೆ ಮಾತನಾಡಿದ್ದೇನೆ. ಆದರೆ ಈಗ ಮಾತನಾಡಿಲ್ಲ ಎಂದಿದ್ದಾರೆ. ಮೊದಲು ಮುಷ್ಕರ ವಾಪಾಸ್ ಪಡೆಯಲಿ ಆಮೇಲೆ ಪ್ರತಿಕ್ರಿಯೆ ನೀಡುತ್ತೇವೆ. ಅವರು ನಿರ್ಧಾರ ಪ್ರಕಟಿಸಿದ ಬಳಿಕ 11 ಗಂಟೆಯ ನಂತರ ನಾನು ಈ ಬಗ್ಗೆ ಪ್ರತಿಕ್ರಿಯೆ ಕೊಡುತ್ತೇನೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications