ಗಿಗ್ ಕಾರ್ಮಿಕರ ನೆರವಿಗೆ ಕಾನೂನು ರೂಪಿಸಲಿದೆ ಕರ್ನಾಟಕ ಸರ್ಕಾರ
ಬೆಂಗಳೂರು, ಜೂನ್ 30: ಕರ್ನಾಟಕ ಸರ್ಕಾರ ಗಿಗ್ ಕಾರ್ಮಿಕರಿಗೆ ವಿಮೆ ಸೌಲಭ್ಯವನ್ನು ಕಲ್ಪಿಸಿತ್ತು. ಈಗ ಅವರ ಭದ್ರತೆಗಾಗಿ ಹೊಸ ಮಸೂದೆ ಮಂಡಿಸಲು ತಯಾರಿ ನಡೆಸಿದೆ. ಕರಡು ಪ್ರತಿ ಸಿದ್ಧವಾಗಿದ್ದು, ಮುಂಗಾರು ಅಧಿವೇಶನದಲ್ಲಿಯೇ ಮಂಡನೆಯಾಗುವ ನಿರೀಕ್ಷೆ ಇದೆ.
ಕರ್ನಾಟಕ ಗಿಗ್ ವರ್ಕರ್ಸ್ (ಸೇವಾ ಮತ್ತು ಕಲ್ಯಾಣ ನಿಯಮಗಳು) ಮಸೂದೆ, 2024 ಅನ್ನು ಕರ್ನಾಟಕ ಸರ್ಕಾರ ಜಾರಿಗೆ ತರಲಿದೆ. ಇದರಿಂದಾಗಿ ಡೆಲಿವರಿ ವೃತಿಯಲ್ಲಿ ತೊಡಗಿರುವ ಗಿಗ್ (ಡೆಲಿವರಿ ಕಾರ್ಮಿಕ/ ಬಾಯ್) ಕಾರ್ಮಿಕರಿಗೆ ಅನುಕೂಲವಾಗಲಿದೆ.

ಈ ಕರಡು ಮಸೂದೆಯ ಅನ್ವಯ ಡೆಲಿವರಿ ಬಾಯ್ಗಳನ್ನು ನೇಮಕ ಮಾಡಿಕೊಳ್ಳುವ ಕಂಪನಿಗಳು ಕಡ್ಡಾಯವಾಗಿ ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಸಬೇಕು. ಕೆಲಸದ ಸಂದರ್ಭದಲ್ಲಿ ಡೆಲಿವರಿ ಬಾಯ್ಗಳು ರಸ್ತೆ ಅಪಘಾತದಲ್ಲಿ ಗಾಯಗೊಂಡರೆ, ಮೃತಪಟ್ಟರೆ ಪರಿಹಾರ ನೀಡಲು ಇದು ಸಹಾಯಕವಾಗಲಿದೆ.
ಡೆಲಿವರಿ ವೃತಿಯಲ್ಲಿ ತೊಡಗಿರುವ ಗಿಗ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸಲು ಈ ಮಸೂದೆ ನೆರವಾಗಲಿದೆ ಎಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ. ಎಲ್ಲಾ ಆನ್ಲೈನ್ ಡೆಲಿವರಿ ಕಂಪನಿಗಳು ಈ ಮಸೂದೆ ಅಡಿ ನೋಂದಣಿ ಮಾಡಿಕೊಳ್ಳಬೇಕು.
ಎಷ್ಟು ಗಿಗ್ ಕಾರ್ಮಿಕರು?: ಕರ್ನಾಟಕ ಸರ್ಕಾರ ನೀತಿ ಆಯೋಗಕ್ಕೆ ಸಲ್ಲಿಕೆ ಮಾಡಿರುವ ವರದಿ ಅನ್ವಯ ರಾಜ್ಯದಲ್ಲಿ 2.33 ಲಕ್ಷಕ್ಕೂ ಅಧಿಕ ಗಿಗ್ ಕಾರ್ಮಿಕರು ಇದ್ದಾರೆ. ಇವರಲ್ಲಿ ಅತಿ ಹೆಚ್ಚು ಕಾರ್ಮಿಕರು ಬೆಂಗಳೂರು ನಗರದಲ್ಲಿದ್ದಾರೆ.
ಮಸೂದೆಯ ಪ್ರಕಾರ ಕಂಪನಿಗಳು ಕಾರ್ಮಿಕ ಇಲಾಖೆಗೆ ಗಿಗ್ ಕಾರ್ಮಿಕರು ಸುರಕ್ಷತೆ ಬಗ್ಗೆ ಮಾರ್ಗಸೂಚಿಗಳನ್ನು ನೀಡಬೇಕು, ಅವರಿಂದ ಶುಲ್ಕ ಸಂಗ್ರಹ ಮಾಡಿ ಒಪ್ಪಂದ ಮಾಡಿಕೊಳ್ಳುವುದನ್ನು ಸಹ ಕಡ್ಡಾಯಗೊಳಿಸಲಾಗುತ್ತದೆ. ಅವರ ವಿರುದ್ಧ ಬರುವ ದೂರುಗಳನ್ನು ಪಾರದರ್ಶಕವಾಗಿ ನಿರ್ವಹಣೆ ಮಾಡಲು ಸಹ ಸೂಚಿಸುತ್ತದೆ.
ಗಿಗ್ ಕಾರ್ಮಿಕರ ಔದ್ಯೋಗಿಕ ಸುರಕ್ಷತೆ ಮತ್ತು ಆರೋಗ್ಯದ ದೃಷ್ಟಿಯಿಂದಲೂ ಮಸೂದೆಯಲ್ಲಿ ಹಲವಾರು ಅಂಶಗಳನ್ನು ರಾಜ್ಯ ಸರ್ಕಾರ ಪ್ರಸ್ತಾಪಿಸಲಿದೆ. ಈ ಮೂಲಕ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆ ಸೇರಿದಂತೆ ಅನೇಕ ವಿಚಾರಗಳ ಕುರಿತು ಸ್ಪಷ್ಟವಾದ ನಿಯಮವನ್ನು ರೂಪಿಸಲಿದೆ.
2023ರಲ್ಲಿ ರಾಜಸ್ಥಾನದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಗಿಗ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸಲು ಕಾನೂನು ರೂಪಿಸಿತ್ತು. ಈ ಮಾದರಿ ಕಾನೂನು ರೂಪಿಸಿದ ದೇಶದ ಮೊದಲ ರಾಜ್ಯ ರಾಜಸ್ಥಾನ. ಈಗ ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಇಂತಹ ಹೆಜ್ಜೆ ಇಟ್ಟಿದೆ.
ಇಷ್ಟು ದಿನ ಅಗ್ರಿಗೇಟರ್ಗಳು ಗಿಗ್ ಕಾರ್ಮಿಕರನ್ನು ನೇಮಕಾತಿ ಮಾಡುವ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡುತ್ತಿರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ನೋಂದಣಿಯನ್ನು ಕಡ್ಡಾಯಗೊಳಿಸಲಾಗುತ್ತಿದೆ.
ಕಾರ್ಮಿಕ ಇಲಾಖೆಯ ಮಾಹಿತಿ ಪ್ರಕಾರ ಓಲಾ, ಊಬರ್, ಅಮೆಝಾನ್, ಫ್ಲಿಕ್ ಕಾರ್ಟ್, ಝೊಮ್ಯಾಟೋ, ಸ್ವಿಗ್ಗಿ ಸೇರಿದಂತೆ 20 ಅಗ್ರಿಗೇಟರ್ಗಳ ಜೊತೆ ಇಲಾಖೆ ಸಭೆಯನ್ನು ನಡೆಸಿದೆ. ಸರ್ಕಾರ ಮುಂದಿಟ್ಟ ಪ್ರಸ್ತಾವನೆಗೆ ಅವರು ಸಹ ಒಪ್ಪಿಗೆ ನೀಡಿದ್ದು, ಬಳಿಕ ಕರಡು ಮಸೂದೆ ರಚಿಸಲಾಗುತ್ತಿದೆ.
ಕೆಲವೇ ದಿನಗಳಲ್ಲಿ ಈ ಮಸೂದೆಯ ಪ್ರಮುಖ ಅಂಶಗಳನ್ನು ಕಂಪನಿಗಳ ಮುಂದಿಟ್ಟು ಆಕ್ಷೇಪಣೆಗಳನ್ನು ಆಹ್ವಾನಿಸಲಾಗುತ್ತದೆ. ಬಳಿಕ ಅಧಿವೇಶನದಲ್ಲಿ ಮಂಡನೆ ಮಾಡಲಾಗುತ್ತದೆ. ಜುಲೈನಲ್ಲಿ ವಿಧಾನಸಭೆಯ ಮುಂಗಾರು ಅಧಿವೇಶನ ಆರಂಭವಾಗಲಿದೆ. ಆಗ ಮಸೂದೆ ಮಂಡಿಸುವ ನಿರೀಕ್ಷೆ ಇದೆ.
ಕರ್ನಾಟಕ ಸರ್ಕಾರ ಈಗಾಗಲೇ 'ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ' ಮೂಲಕ ಅಸಂಘಟಿತ ಕಾರ್ಮಿಕರ ನೆರವಿಗೆ ಧಾವಿಸಿದೆ. ಪೂರ್ಣಕಾಲಿಕ ಹಾಗೂ ಅರೆಕಾಲಿಕ ಡೆಲಿವರಿ ನೌಕರರು ಈ ಯೋಜನೆಯ ಲಾಭ ಪಡೆಯಬಹುದು. ಆದರೆ ಈ ಕಾರ್ಮಿಕರು ಕಾರ್ಮಿಕ ಇಲಾಖೆಯಲ್ಲಿ ನೋಂದಣಿಯಾಗದ ಕಾರಣ ಅಪಘಾತ, ಮರಣ ಸಂದರ್ಭದಲ್ಲಿ ಹೆಚ್ಚಿನ ಪರಿಹಾರವನ್ನು ನೀಡಲು ಸಾಧ್ಯವಾಗುತ್ತಿರಲಿಲ್ಲ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications