ಇನ್ನು ಮುಂದೆ ಕರ್ನಾಟಕದಲ್ಲಿ ವಿದ್ಯಾರ್ಥಿನಿಯರಿಗೆ ಬಸ್ ಪಾಸಿನ ಗೊಡವೆ ಇಲ್ಲ: ಕಾರಣ ತಿಳಿಯಿರಿ
ಬೆಂಗಳೂರು, ಜೂನ್ 22: ಶಾಲಾ-ಕಾಲೇಜಿಗೆ ಹೋಗುವ ವಿದ್ಯಾರ್ಥಿನಿಯರು ಉಚಿತ ಪ್ರಯಾಣಕ್ಕಾಗಿ ಇನ್ನು ಮುಂದೆ ಪಾಸ್ ಖರೀದಿಸುವ ಅಗತ್ಯವಿಲ್ಲ ಎಂದು ಕರ್ನಾಟಕ ಸಾರಿಗೆ ಸಂಸ್ಥೆ ಹೇಳಿದೆ. ಶಕ್ತಿ ಯೋಜನೆಯಡಿ ಅವರು ಉಚಿತವಾಗಿ ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಸಬಹುದು ಎಂದು ಘೋಷಿಸಿದೆ.
ಮೂಲಗಳ ಪ್ರಕಾರ, ಈ ಬಗ್ಗೆ ಅಧಿಕೃತ ಆದೇಶವನ್ನು ಶೀಘ್ರದಲ್ಲೇ ನಿರೀಕ್ಷಿಸಲಾಗಿದೆ. ಇತರೆ ಮಹಿಳಾ ಪ್ರಯಾಣಿಕರಂತೆ ವಿದ್ಯಾರ್ಥಿನಿಯರು ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯಬೇಕು. ಅಂತಹ ಕಾರ್ಡ್ಗಳಿಗಾಗಿ ಅರ್ಜಿಗಳನ್ನು ಶೀಘ್ರದಲ್ಲೇ ಸ್ವೀಕರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ವಿದ್ಯಾರ್ಥಿನಿಯರಿಗೆ 'ಶೂನ್ಯ' ದರದಲ್ಲಿ ಟಿಕೆಟ್ಗಳನ್ನು ನೀಡುವಂತೆ ಸರ್ಕಾರಿ ಬಸ್ಗಳ ಕಂಡಕ್ಟರ್ಗಳಿಗೆ ನಿರ್ದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿದ್ಯಾರ್ಥಿನಿಯರು 2023-24 ರ ಪಾಸ್ಗಳನ್ನು ಖರೀದಿಸಿದ್ದರೆ, ಅವರಿಗೆ ಆ ಮಾರ್ಗಗಳಲ್ಲಿ ಪ್ರಯಾಣಿಸಲು ಅನುಮತಿಸಲಾಗುವುದು. ಅಂಥವರಿಗೆ 'ಶೂನ್ಯ' ಟಿಕೆಟ್ಗಳನ್ನು ನೀಡದಂತೆ ಕಂಡಕ್ಟರ್ಗಳಿಗೆ ನಿರ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.
ವಿದ್ಯಾರ್ಥಿನಿಯರು ಪಾವತಿಸಿದ ಬಸ್ ಪಾಸ್ ಶುಲ್ಕವನ್ನು ಮರುಪಾವತಿಸುವುದಿಲ್ಲ. ಅಂತಹುದಕ್ಕೆ ಯಾವುದೇ ಅವಕಾಶವಿಲ್ಲ ಎಂದು ಮೂಲಗಳು ತಿಳಿಸಿವೆ.
ಶಾಲಾ ಮತ್ತು ಕಾಲೇಜಿಗೆ ಹೋಗುವ ವಿದ್ಯಾರ್ಥಿನಿಯರು ಕಳೆದ ಶೈಕ್ಷಣಿಕ ವರ್ಷಕ್ಕೆ (2022-23) ಜೂನ್ 30 ರವರೆಗೆ ನೀಡಲಾದ ಪಾಸ್ಗಳನ್ನು ಬಳಸಬಹುದು. ಅಂತವರಿಗೆ ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಸಲು ಅನುಮತಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿನಿಯರು ಜುಲೈ 1 ರಿಂದ ಸೇವಾ ಸಿಂಧು ಪೋರ್ಟಲ್ ಮೂಲಕ ಹೊಸ ಪಾಸ್ಗಳನ್ನು ಪಡೆಯಬೇಕು. ಜೂನ್ 20 ರಂದು 17.89 ಲಕ್ಷ ಮಹಿಳೆಯರು ಬಿಎಂಟಿಸಿ ಬಸ್ಗಳಲ್ಲಿ ಪ್ರಯಾಣಿಸಿದ್ದಾರೆ. ಶಕ್ತಿ ಯೋಜನೆಯಡಿ ವಿನಾಯಿತಿ ಪಡೆದ ಒಟ್ಟು ಟಿಕೆಟ್ ಮೊತ್ತ 2.27 ಕೋಟಿ ರೂ ಆಗಿದೆ.
ಕೆಎಸ್ಆರ್ಟಿಸಿ 17.46 ಲಕ್ಷ ಪ್ರಯಾಣಿಕರನ್ನು ದಾಖಲಿಸಿದ್ದು, ವಿನಾಯಿತಿ ಮೊತ್ತ 5.21 ಕೋಟಿ ರೂ ಆಗಿದೆ. ವಾಯುವ್ಯ ಸಾರಿಗೆ 14.47 ಲಕ್ಷ ಪ್ರಯಾಣಿಕರನ್ನು ದಾಖಲಿಸಿದೆ. ಅದರ ವಿನಾಯಿತಿ ಮೊತ್ತ 3.59 ಕೋಟಿ ರೂ. ಆಗಿದೆ. ಕಲ್ಯಾಣ ಕರ್ನಾಟಕದ ಸಾರಿಗೆ 8.05 ಲಕ್ಷ ಪ್ರಯಾಣಿಕರನ್ನು ನೋಂದಾಯಿಸಿದೆ ಮತ್ತು ಒಟ್ಟು ವಿನಾಯಿತಿ ಮೊತ್ತ 2.57 ಕೋಟಿ ರೂ. ಆಗಿದೆ.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Bangladesh Bus Tragedy: ನದಿಗೆ ಉರಳಿದ 50 ಪ್ರಯಾಣಿಕರಿದ್ದ ಬಸ್, ಹಲವರು ಸಾವು; ಎದೆ ನಡುಗಿಸೋ ವಿಡಿಯೋ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ











Click it and Unblock the Notifications