ಪುಂಡರಿಗೆ ಬಿಸಿ ಮುಟ್ಟಿಸಿದ ಬಿಸಿಲ ನಾಡ ಹುಡುಗೀರು
ರಾಯಚೂರು, ಜುಲೈ, 15 : ಹುಡುಗಿಯರನ್ನು ಚುಡಾಯಿಸುವುದನ್ನು ಕರ್ತವ್ಯ ಮಾಡಿಕೊಂಡ ಪಡ್ಡೆ ಹುಡುಗರಿಗೆ ಉತ್ತರ ಕರ್ನಾಟಕದ ಯುವತಿಯರು ಸರಿಯಾಗಿಯೇ ಒಂದು ಟಾಂಗ್ ನೀಡಿದ್ದಾರೆ. ಅದೇನಪ್ಪಾ ಅಂದ್ರೇ?
ರಾಯಚೂರಿನ ವಿವಿಧ ಕಾಲೇಜಿನ ಸುಮಾರು 100 ಜನ ಯುವತಿಯರು ಎಐಎಂಎಸ್ ಎಸ್ (All India Mahila Sanskritik Sanghathan) ಬ್ಯಾನರ್ ಅಡಿಯಲ್ಲಿ ಜಾಥಾ ಕೈಗೊಂಡಿದ್ದು, ಬುಧವಾರ ಮಾಣಿಕ್ಯಪ್ರಭು ದೇವಾಲಯದ ಬಳಿಯ ಸದಾರ್ ಪೊಲೀಸ್ ಠಾಣೆ ಮುಂದೆ ಹುಡುಗರು ಚುಡಾಯಿಸುವುದರ ಬಗ್ಗೆ ಕಠಿಣ ಕ್ರಮ ಜರುಗಿಸಬೇಕು ಎಂದು ಪ್ರತಿಭಟನೆ ನಡೆಸಿದ್ದಾರೆ.[ಗೋವಾ : ಪೋಲಿ ಚಿತ್ರ ನೋಡುವ ಕಾಲೇಜು ಹುಡುಗರು]

ಹಲವು ಏರಿಯಾಗಳಲ್ಲಿ ಪುಂಡರು ಪೋಲಿಗಳ ಸಂಖ್ಯೆ ಅಧಿಕವಾಗಿದ್ದು, ಕಾಲೇಜು, ಶಾಲೆಗೆ ಹೋಗುವ ದಾರಿಯಲ್ಲಿ ಬಂದು ನಿಲ್ಲುವ ಹುಡುಗರು ಅವಾಚ್ಯ ಶಬ್ದಗಳನ್ನು ಬಳಸಿ ಹುಡುಗಿಯರನ್ನು ಚುಡಾಯಿಸುತ್ತಿರುವುದು ಹೆಚ್ಚಾಗಿದೆ. ಇದರಿಂದ ವಿದ್ಯಾನಗರ ಸುತ್ತಮುತ್ತಲು ಹುಡುಗಿಯರು ಓಡಾಡುವುದು ಕಷ್ಟಕರವಾಗಿದೆ. ಯಾವಾಗಲೂ ಭಯದಲ್ಲಿಯೇ ಹೆಜ್ಜೆ ಹಾಕಬೇಕಾಗಿದೆ. ಹಾಗಾಗಿ ಇದರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಹುಡುಗಿಯರು ಪ್ರತಿಭಟನೆ ನಡೆಸಿದ್ದಾರೆ.
ಮನೆಗೆ ಹೋಗುವ ದಾರಿಯಲ್ಲಿ ಹಿಂಬಾಲಿಸುವ ಹುಡುಗರು ಅಶ್ಲೀಲ ಪದ ಬಳಕೆ ಮಾಡಿ ಮಾತನಾಡುವುದಲ್ಲದೇ ಓಡಾಡುವುದಕ್ಕೆ ಹಿಂಜರಿಯಬೇಕಾದ ಪರಿಸ್ಥಿತಿ ಬಂದಿದೆ ಎಂದು ಯುವತಿಯರು ಬೇಸರ ವ್ಯಕ್ತ ಪಡಿಸಿದ್ದಾರೆ. ಇವರ ಅಹವಾಲು ಸ್ವೀಕರಿಸಿದ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂಬ ಭರವಸೆ ನೀಡಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications