ಸರ್ಕಾರಿ ಕಾಲೇಜುಗಳಲ್ಲಿ ಜಾಗತಿಕ ಗುಣಮಟ್ಟದ ಶಿಕ್ಷಣ: ಅಶ್ವಥ್ ನಾರಾಯಣ
ಬೆಂಗಳೂರು, ಜನವರಿ 13: ರಾಜ್ಯದ ಉನ್ನತ ಶಿಕ್ಷಣ ವಲಯದಲ್ಲಿ ಕ್ರಾಂತಿಕಾರಕ ಸುಧಾರಣೆ ಆಗುತ್ತಿದೆ. ಇದರ ಫಲವಾಗಿ ಕರ್ನಾಟಕ ರಾಜ್ಯದ ಸರ್ಕಾರ ಕಾಲೇಜುಗಳಲ್ಲಿ ಇಂದು ಕೈಗೆಟುಕುವ ವೆಚ್ಚದಲ್ಲಿ ಜಾಗತಿಕ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವಥ್ ನಾರಾಯಣ ಹೇಳಿದ್ದಾರೆ.
ಬೆಂಗಳೂರಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಇಡೀ ದೇಶವು ಎಲ್ಲರನ್ನೂ ಒಳಗೊಂಡು ವಿಕಾಸವಾಗಬೇಕು ಎನ್ನುವ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿಯವರು ಮೂರನೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದ್ದಾರೆ. ಇದರ ಅನುಷ್ಠಾನದಲ್ಲಿ ರಾಜ್ಯವು ಪ್ರಥಮ ಸ್ಥಾನದಲ್ಲಿದೆ ಎಂದರು.
ಕಲಿಕೆಯು ಯಾವಾಗಲೂ ಪ್ರಸ್ತುತವಾಗಿರಬೇಕು. ಇದನ್ನು ಪರಿಗಣಿಸಿ ಪಠ್ಯ ಕ್ರಮಕ್ಕೆ ಸಮಕಾಲೀನ ಸ್ಪರ್ಶ ಕೊಡಲಾಗಿದೆ. ಜತೆಗೆ ಪ್ರಾಥಮಿಕ ಶಿಕ್ಷಣ ಹಂತದಲ್ಲಿ ಕೂಡ ಎನ್ಇಪಿ ಜಾರಿಗೆ ಬರುತ್ತಿದೆ. ಪದವಿಪೂರ್ವ, ಪದವಿ, ಐಟಿಐ, ಪಾಲಿಟೆಕ್ನಿಕ್, ಎಂಜಿನಿಯರಿಂಗ್, ಜಿಟಿಟಿಸಿ ಶಿಕ್ಷಣ ಕ್ರಮಗಳಲ್ಲಿ ವ್ಯಾಪಕ ಸುಧಾರಣೆ ತರಲಾಗಿದೆ. ಕಲಿಕೆಯ ಜತೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ಶೈಕ್ಷಣಿಕ ಪರಿಸರ ಅತ್ತುತ್ತಮವಾಗಿದೆ. ಸರ್ಕಾರವು ಯುವಜನರಿಗೆ ಕೌಶಳ್ಯಗಳನ್ನು ಕಲಿಸುವ ಮೂಲಕ ಎಲ್ಲರನ್ನೂ ಉದ್ಯೋಗಕ್ಕೆ ಅರ್ಹರನ್ನಾಗಿ ಮಾಡುತ್ತಿದೆ. ಒಟ್ಟಿನಲ್ಲಿ ನುರಿತ ಮಾನವ ಸಂಪನ್ಮೂಲ ಮತ್ತು ಉತ್ತಮ ಅವಕಾಶ ಎರಡೂ ನಮ್ಮಲ್ಲಿ ಇದೆ ಎಂದು ಅವರು ತಿಳಿಸಿದರು.
ಉತ್ಪನ್ನಗಳಿಗೆ ಅಗತ್ಯ ಮಾರುಕಟ್ಟೆ ವ್ಯವಸ್ಥೆ
ಮಹಿಳೆಯರು ಸಿದ್ದಪಡಿಸುವ ಉತ್ಪನ್ನಗಳಿಗೆ ರಾಷ್ಟ್ರೀಯ ಗ್ರಾಮೀಣ ಹಾಗೂ ನಗರ ಜೀವನೋಪಾಯ ಯೋಜನೆಗಳ ವ್ಯಾಪ್ತಿಯಲ್ಲಿ ಮಾರುಕಟ್ಟೆ ಒದಗಿಸಲಾಗುವುದು. ಅಮೆಜಾನ್, ಫ್ಲಿಪ್ ಕಾರ್ಟ್ ನಂತಹ ಕಂಪೆನಿ ಮೂಲಕ ಅಗತ್ಯ ಮಾರುಕಟ್ಟೆ ಹಾಗೂ ಸೂಕ್ತ ಪ್ರಚಾರ ಒದಗಿಸಿ ಅವರನ್ನು ಸ್ವಾವಲಂಬಿ ಮಾಡಲಾಗುವುದು ಎಂದರು.

ಮಹಿಳೆಯರಲ್ಲೂ ಅಪಾರ ಮಂದಿ ಪ್ರತಿಭಾವಂತರಿದ್ದಾರೆ. ಅವರು ತಮ್ಮ ಪ್ರತಿಭೆಗಳನ್ನು ಸಮಾಜದ ಸಮಗ್ರ ಬೆಳವಣಿಗೆಗೆ ಬಳಸಿ ಕೊಳ್ಳಬೇಕು. ಎನ್ಆರ್ಎಲ್ಎಂ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರಮವಾಗಿ ಪ್ರತಿಶತ 60 ಮತ್ತು 40ರಷ್ಟು ಆರ್ಥಿಕ ಅನುದಾನ ನೀಡಲಿದ್ದೇವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಲಾವಿದ ಎಂ ಎಸ್ ನರಸಿಂಹಮೂರ್ತಿ, ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶ್ರೀರಾಮ್, ಪ್ರಿನ್ಸಿಪಾಲ್ ರತ್ನಾಕರ ಶೆಟ್ಟಿ, ಪ್ರೊ.ಲಕ್ಷ್ಮಿ ಮುಂತಾದವರು ಉಪಸ್ಥಿತರಿದ್ದರು.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications