Mahadayi Project: ಮಹದಾಯಿ ಯೋಜನೆ ಕಾಮಗಾರಿ ಶೀಘ್ರ ಪ್ರಾರಂಭ: ಗೋವಾ ಸಿಎಂ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್
ಬೆಂಗಳೂರು, ಜುಲೈ 24: ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ ನೀಡುವುದಿಲ್ಲ ಎಂಬ ಗೋವಾ ಸಿಎಂ ಪ್ರಮೋದ್ ಸಾವಂತ್ ಅವರ ಹೇಳಿಕೆ ಖಂಡನೀಯ. ಸುಪ್ರೀಂ ಕೋರ್ಟ್ ನಲ್ಲಿ ನಾವು ಸಲ್ಲಿಸಿರುವ ಅರ್ಜಿ ಹಿಂಪಡೆದು, ಶೀಘ್ರವೇ ಕಾಮಗಾರಿ ಆರಂಭಿಸುತ್ತೇವೆ. ಅವರು ಅದನ್ನು ತಡೆಯಲಿ, ನಾನೂ ನೋಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಗುಡುಗಿದ್ದಾರೆ.
ನೀರಾವರಿ ಸಚಿವರೂ ಆಗಿರುವ ಶಿವಕುಮಾರ್ ಅವರು ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕೇಂದ್ರ ಸರಕಾರ ಯಾವುದೇ ಕಾರಣಕ್ಕೂ ಮಹದಾಯಿ ಯೋಜನೆ ಆರಂಭಿಸಲು ಅನುಮತಿ ನೀಡುವುದಿಲ್ಲ ಎಂದು ಗೋವಾ ಸಿಎಂ ನೀಡಿರುವ ಬಗ್ಗೆ ಮಾಧ್ಯಮದವರು ಗಮನ ಸೆಳೆದಾಗ ಕುರಿತು ಡಿ ಕೆ ಶಿವಕುಮಾರ್ ಗರಂ ಆಗಿದ್ದಾರೆ. ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡು ಈ ರೀತಿ ಮಾತನಾಡಿದ್ದಾರೆ. ಅವರಿಗೆ ದೇಶದ ಒಕ್ಕೂಟ ವ್ಯವಸ್ಥೆ ಮೇಲೆ ಗೌರವವಿಲ್ಲ. ಮಹದಾಯಿ ವಿಚಾರದಲ್ಲಿ ನ್ಯಾಯಾಧಿಕರಣದ ತೀರ್ಪು ಹೊರಬಿದ್ದಿದೆ. ಯೋಜನೆ ಜಾರಿಗೆ ಸಂಬಂಧಿಸಿದಂತೆ ಟೆಂಡರ್ ಕರೆಯಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಸವರಾಜ ಬೊಮ್ಮಾಯಿ ಅವರು, ಸ್ಥಳೀಯ ಸಂಸದರು ಹಾಗೂ ಕೇಂದ್ರದ ಹಾಲಿ ಸಚಿವರಾದ ಪ್ರಹ್ಲಾದ್ ಜೋಷಿ ಅವರು ಈ ಯೋಜನೆ ಜಾರಿಯಾಗಲಿದೆ ಎಂದು ಸಂಭ್ರಮಾಚರಣೆ ಮಾಡಿದ್ದರು ಎಂದರು.

ಈ ವಿಚಾರವಾಗಿ ರಾಜ್ಯದ ಎಲ್ಲಾ ಸಂಸದರನ್ನು ಭೇಟಿ ಮಾಡುತ್ತೇನೆ. ಇದು ನಮ್ಮ ರಾಜ್ಯದ ಸ್ವಾಭಿಮಾನದ ಪ್ರಶ್ನೆ. ಈ ವಿಚಾರದಲ್ಲಿ ನಮ್ಮ ಸಂಸದರು ಬಾಯಿ ಮುಚ್ಚಿಕೊಂಡಿರುವುದೇ ದೊಡ್ಡ ತಪ್ಪು. ನಮ್ಮ ರಾಜ್ಯದ 28 ಲೋಕಸಭೆ ಸದಸ್ಯರು, 12 ರಾಜ್ಯಸಭೆ ಸದಸ್ಯರು ಒಗ್ಗಟ್ಟಿನಿಂದ ಹೋರಾಡಿ ರಾಜ್ಯದ ಗೌರವ ಕಾಪಾಡಬೇಕಾಗಿದೆ. ಗೋವಾದ ಕೇವಲ ಒಂದು ಸಂಸದರಿಗಾಗಿ ನಮ್ಮ ಕರ್ನಾಟಕವನ್ನು ಮಾರಿಕೊಳ್ಳಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.
ಈ ವಿಚಾರವಾಗಿ ಬಿಜೆಪಿ ಸಂಸದರು, ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸರಕಾರದ ಸಚಿವರು ಹಾಗೂ ಪ್ರಧಾನಮಂತ್ರಿಗಳ ಮೇಲೆ ಒತ್ತಡ ಹಾಕಬೇಕು. ನಾನು ಕೂಡ ಕೇಂದ್ರ ಜಲಶಕ್ತಿ ಸಚಿವರು ಹಾಗೂ ಪ್ರಧಾನಮಂತ್ರಿಗಳನ್ನು ಭೇಟಿ ಮಾಡಲು ಸಮಯಾವಕಾಶ ಕೇಳುತ್ತೇನೆ. ಎಲ್ಲಾ ಸಂಸದರ ನಿಯೋಗವನ್ನು ಕರೆದೊಯ್ಯುವ ಪ್ರಯತ್ನ ಮಾಡುತ್ತೇನೆ. ನಮ್ಮ ಜೊತೆ ಎಲ್ಲರೂ ಬರುವ ನಂಬಿಕೆ ಇದೆ. ಯಾರು ಬರುತ್ತಾರೋ ಬಿಡುತ್ತಾರೋ ನಮ್ಮ ಕೆಲಸ ನಾವು ಮಾಡುತ್ತೇವೆ ಎಂದು ತಿಳಿಸಿದರು.
ಮಹದಾಯಿ ಯೋಜನೆ ವಿಚಾರದಲ್ಲಿ ಕೇಂದ್ರ ಸಚಿವರು ದಾರಿ ತಪ್ಪಿಸುತ್ತಿದ್ದಾರಾ ಎಂಬ ಪ್ರಶ್ನೆಗೆ ಡಿ ಕೆ ಶಿವಕುಮಾರ್ ಮಾತನಾಡಿ, ಕೇಂದ್ರ ಜಲಶಕ್ತಿ ಸಚಿವರು ಈ ವಿಚಾರದಲ್ಲಿ ನಿಷ್ಪಕ್ಷಪಾತವಾಗಿದ್ದಾರೆ. ಅವರು ಈ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ. ನಾನು ಅವರನ್ನು ಐದಾರು ಬಾರಿ ಈ ವಿಚಾರಕ್ಕಾಗಿ ಭೇಟಿ ಮಾಡಿದ್ದೇನೆ. ಕೇಂದ್ರ ಅರಣ್ಯ ಸಚಿವರು ಕೂಡ ಈ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ. ಅಭಿವೃದ್ಧಿ ಕೆಲಸಕ್ಕೆ ಬೆಂಬಲವಾಗಿದ್ದಾರೆ. ಎಲ್ಲಾ ಸಮಸ್ಯೆ ಇರುವುದು ಗೋವಾದಲ್ಲಿ ಎಂದು ಕಿಡಿಕಾರಿದರು.
ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಮತಗಳ್ಳತನವಾಗಿದೆ ಎಂಬ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆ ಕುರಿತು ಮಾತನಾಡಿ, ನಾನು ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಒಪ್ಪುತ್ತೇನೆ. ನಾನು ಕೂಡ ಈ ವಿಚಾರವಾಗಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ತನಿಖೆ ನಡೆಸಿದ್ದೇನೆ. ಇಲ್ಲಿ ಅನೇಕ ಗೋಲ್ಮಾಲ್ ಗಳು ನಡೆದಿವೆ. ಈ ವಿಚಾರವಾಗಿ ಸಧ್ಯಕ್ಕೆ ನಾನು ಹೆಚ್ಚು ವಿಚಾರ ಪ್ರಸ್ತಾಪ ಮಾಡುವುದಿಲ್ಲ. ಮುಂದೆ ಈ ವಿಚಾರವಾಗಿ ಮಾತನಾಡುತ್ತೇನೆ ಎಂದರು.
-
Karnataka: ರಾಜ್ಯದಲ್ಲಿ ಹೆಚ್ಚಾಯ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ: 3 ವರ್ಷದಲ್ಲಿ 27 ಸಾವು -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
ಒಡಿಶಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪ -
ಕರ್ನಾಟಕದ ನೀರಾವರಿ ಯೋಜನೆಗೆ ಆಂಧ್ರ ಅಡ್ಡಗಾಲು: ಸಿಡಿದೆದ್ದ ಡಿಸಿಎಂ ಡಿ.ಕೆ.ಶಿವಕುಮಾರ್ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ











Click it and Unblock the Notifications