ಗೋವಾ ರೀತಿ ಮಂಗಳೂರಿನ ಅಭಿವೃದ್ಧಿ, ಹೊಸ ಪ್ರವಾಸೋದ್ಯಮ ನೀತಿ ಜಾರಿ: ಡಿ.ಕೆ.ಶಿವಕುಮಾರ್
ಮಂಗಳೂರು: ಕರಾವಳಿ ಪ್ರವಾಸೋದ್ಯಮದಲ್ಲಿ ಹೆಸರುವಾಸಿಯಾಗಿರುವ ಗೋವಾ ಮಾದರಿ ಕರ್ನಾಟಕದ ಕರಾವಳಿಯನ್ನು ಅಭಿವೃದ್ಧಿ ಪಡಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರಾವಳಿ ಭಾಗಕ್ಕೆ ಮತ್ತೆ ಜೀವ ಕೊಡಬೇಕು. ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಇಲ್ಲಿನ ಶಾಸಕರು ಹಾಗೂ ಜನಪ್ರತಿನಿಧಿಗಳ ಅಭಿಪ್ರಾಯವನ್ನು ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.
ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಕರಾವಳಿ ಕರ್ನಾಟಕದ ಪ್ರವಾಸೋದ್ಯಮ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ್ದಾರೆ. ಕರಾವಳಿ ಎಂದರೆ ಒಂದು ಸೌಂದರ್ಯ, ಜ್ಞಾನ ಹಾಗೂ ಸಂಪತ್ತಿನ ಪರ್ವತ. ದೈವ, ದೇವಾಲಯ ಹಾಗೂ ಶಕ್ತಿ ದೇವತೆಗಳ ಪ್ರವಾಸಿ ಕೇಂದ್ರ, ಇದು ವ್ಯಾಪಾರಿಗಳ ನಿಧಿ ಹಾಗೂ ಪ್ರವಾಸಿಗರ ಸ್ವರ್ಗ. 300 ಕಿ.ಮೀ ಕರಾವಳಿ ಪ್ರದೇಶವನ್ನು ಅಭಿವೃದ್ಧಿ ಮಾಡಲು ನಮ್ಮ ಸರ್ಕಾರ ಪ್ರವಾಸೋದ್ಯಮ ನೀತಿಯನ್ನು ರೂಪಿಸುತ್ತಿದೆ ಎಂದು ಹೇಳಿದ್ದಾರೆ.

ಗೋವಾ ಮಂಗಳೂರಿಗೆ ಯಾವುದೇ ವ್ಯತ್ಯಾಸ ಇಲ್ಲ
ಪರಿಸರ, ಪ್ರಕೃತಿ ಹಾಗೂ ನೀರಿನ ವಿಷಯದಲ್ಲಿ ಗೋವಾಗೆ ಹಾಗೂ ಮಂಗಳೂರಿಗೆ ಯಾವುದೇ ವ್ಯತ್ಯಾಸವಿಲ್ಲ. ಗೋವಾದಲ್ಲಿರುವ ಬೀಚ್ಗಳೇ ನಮ್ಮಲ್ಲೂ ಇವೆ. ಹೀಗಾಗಿ ಕಾನೂನು ಚೌಕಟ್ಟಿನಲ್ಲಿ ಏನೆಲ್ಲ ತೊಂದರೆಗಳಿವೆ, ಅವುಗಳನ್ನು ಸರಿಪಡಿಸಿ ಹೊಸ ಪ್ರವಾಸೋದ್ಯಮ ನೀತಿಯನ್ನು ರೂಪಿಸುತ್ತೇವೆ ಎಂದು ಹೇಳಿದ್ದಾರೆ.
ಇತಿಹಾಸಕ್ಕೆ ಹೋಗಿ ನೋಡುವುದಾರೆ ಮಂಗಳೂರಿನವರು ಇಡೀ ರಾಷ್ಟ್ರಕ್ಕೆ ಬ್ಯಾಂಕ್ಗಳನ್ನು ಕೊಟ್ಟಿದ್ದಾರೆ. ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಶಿಸ್ತಿನ ಜನ. ಜೊತೆಗೆ ಮಂಗಳೂರು ಒಂದು ಎಜ್ಯುಕೇಷನ್ ಹಬ್. ಇಷ್ಟು ಮೆಡಿಕಲ್, ಇಂಜಿನಿಯರಿಂಗ್ ಹಾಗೂ ಪಿಯು ಕಾಲೇಜುಗಳು ಎಲ್ಲೂ ಇಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕರಾವಳಿ ಭಾಗಕ್ಕೆ ಮತ್ತೆ ಜೀವ ಕೊಡುವ ಉದ್ದೇಶದಿಂದ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಇಲ್ಲಿನ ಶಾಸಕರು ಹಾಗೂ ಜನಪ್ರತಿನಿಧಿಗಳ ಅಭಿಪ್ರಾಯವನ್ನು ತೆಗೆದುಕೊಳ್ಳುತ್ತೇವೆ. ಜೊತೆಗೂಡುವುದು ಆರಂಭ, ಜೊತೆಗೂಡಿ ಚರ್ಚಿಸುವುದು ಪ್ರಗತಿ, ಜೊತೆಗೂಡಿ ಕೆಲಸ ಮಾಡುವುದು ಯಶಸ್ಸು. ಎಲ್ಲರೂ ಒಗ್ಗಟ್ಟಾಗಿ ಕರಾವಳಿ ಅಭಿವೃದ್ಧಿಯನ್ನು ಮಾಡೋಣ ಎಂದು ಡಿಕೆ.ಶಿವಕುಮಾರ್ ಕರೆ ನೀಡಿದ್ದಾರೆ.
ರಾಜ್ಯ ಕರಾವಳಿಗೆ ಏನೆಲ್ಲ ಅನುಕೂಲ?
ಗೋವಾ ಮಾದರಿಯಲ್ಲಿ ಕರ್ನಾಟಕದ ಕರಾವಳಿ ಪ್ರದೇಶವನ್ನು ಅಭಿವೃದ್ಧಿಪಡಿಸುವ ನಿರ್ಧಾರದಿಂದ ಹೋಟೆಲ್, ರೆಸಾರ್ಟ್, ಹೋಮ್ಸ್ಟೇ, ರೆಸ್ಟೋರೆಂಟ್, ಸಾರಿಗೆ ಸೇರಿದಂತೆ ಅನೇಕ ಸೇವಾ ಕ್ಷೇತ್ರಗಳಿಗೆ ಉತ್ತೇಜನ ಸಿಗಲಿದೆ. ಇದರಿಂದ ಸ್ಥಳೀಯ ಉದ್ಯಮಿಗಳಿಗೆ ಆದಾಯ ಹೆಚ್ಚುವ ಜೊತೆಗ ಕರಾವಳಿ ಆರ್ಥಿಕತೆ ಬಲಿಷ್ಠವಾಗಲಿದೆ.
ಪ್ರವಾಸೋದ್ಯಮ ವಿಸ್ತಾರದಿಂದ ಯುವಕರಿಗೆ ನೇರ ಹಾಗೂ ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ಗೈಡ್ಗಳು, ಚಾಲಕರು, ಹೋಟೆಲ್ ಸಿಬ್ಬಂದಿ, ಕರಕುಶಲ ವಸ್ತು ಮಾರಾಟಗಾರರು ಸೇರಿದಂತೆ ಸಾವಿರಾರು ಜನರಿಗೆ ಕೆಲಸ ಸಿಗಲಿದೆ. ರಸ್ತೆ, ವಿದ್ಯುತ್, ಕುಡಿಯುವ ನೀರು, ಸ್ವಚ್ಛತೆ, ಸಮುದ್ರ ತೀರ ಸೌಂದರ್ಯೀಕರಣ ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ಧಿಗೆ ವೇಗ ಸಿಗಲಿದೆ. ಪ್ರವಾಸಿಗರಷ್ಟೇ ಅಲ್ಲ, ಸ್ಥಳೀಯರ ಜೀವನಮಟ್ಟವೂ ಉತ್ತಮವಾಗುತ್ತದೆ.
ಕರಾವಳಿಯ ದೈವ ಆರಾಧನೆ, ದೇವಾಲಯಗಳು, ಶಕ್ತಿ ದೇವತೆಗಳ ಕ್ಷೇತ್ರಗಳು ರಾಷ್ಟ್ರಮಟ್ಟದಲ್ಲಿ ಹಾಗೂ ಜಾಗತಿಕವಾಗಿ ಪ್ರಸಿದ್ಧಿ ಪಡೆಯಲಿವೆ. ಧಾರ್ಮಿಕ ಪ್ರವಾಸೋದ್ಯಮ ಹೆಚ್ಚಿದರೆ ವರ್ಷಪೂರ್ತಿ ಪ್ರವಾಸಿಗರ ಹರಿವು ಸಾಧ್ಯವಾಗುತ್ತದೆ. ಯಕ್ಷಗಾನ, ಭೂತಕೋಲ, ಕರಾವಳಿ ಸಂಸ್ಕೃತಿ, ಆಹಾರ ಪದ್ಧತಿ ಇವೆಲ್ಲವೂ ಪ್ರವಾಸೋದ್ಯಮದ ಮೂಲಕ ಮತ್ತಷ್ಟು ಬೆಳಕಿಗೆ ಬರಲಿವೆ.
ಮೀನುಗಾರರು, ರೈತರು, ಸಣ್ಣ ವ್ಯಾಪಾರಿಗಳು, ಮಹಿಳಾ ಸ್ವಸಹಾಯ ಸಂಘಗಳು ಪ್ರವಾಸೋದ್ಯಮದೊಂದಿಗೆ ನೇರವಾಗಿ ಸಂಪರ್ಕ ಹೊಂದಿ ತಮ್ಮ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಪಡೆಯಬಹುದು. ರಾಜ್ಯದ 300 ಕಿ.ಮೀ ಉದ್ದದ ಕರಾವಳಿ ಪ್ರದೇಶ ಸಮಗ್ರವಾಗಿ ಅಭಿವೃದ್ಧಿಯಾದರೆ, ಕರ್ನಾಟಕವೂ ಗೋವಾದಂತೆ ಪ್ರಮುಖ ಪ್ರವಾಸಿ ತಾಣವಾಗಿ ದೇಶ-ವಿದೇಶಗಳಲ್ಲಿ ಗುರುತಿಸಿಕೊಳ್ಳಲಿದೆ.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ












Click it and Unblock the Notifications