ರಾಘವೇಶ್ವರ ಶ್ರೀಗಳ ಅಭಿಲಾಷೆಗೆ ಗೋಕರ್ಣದಲ್ಲಿ ಮುನ್ನುಡಿ
ಗೋಕರ್ಣದ ಆತ್ಮಲಿಂಗಕ್ಕೆ ಪೂಜಾಭಿಷೇಕ ಸಲ್ಲಿಸಲು ನಾಡಿನ ಪ್ರತಿಯೊಬ್ಬ ಸಂತರಿಗೂ ಐತಿಹಾಸಿಕ ಅವಕಾಶ ಸಿಗಬೇಕು ಎನ್ನುವ ರಾಘವೇಶ್ವರ ಶ್ರೀಗಳ ಅಭಿಲಾಷೆಗೆ ಸೋಮವಾರ (ಜ 9) ಮುನ್ನುಡಿ ಬರೆಯಲಾಯಿತು.
ಗೋಕರ್ಣ, ಜ 9: ನಾಡಿನ ಪ್ರತಿಯೊಬ್ಬ ಸಂತರಿಗೂ ಐತಿಹಾಸಿಕ ಗೋಕರ್ಣದ ಆತ್ಮಲಿಂಗಕ್ಕೆ ಪೂಜಾಭಿಷೇಕ ಸಲ್ಲಿಸಲು ಅವಕಾಶ ಸಿಗಬೇಕು ಎನ್ನುವ ರಾಘವೇಶ್ವರ ಶ್ರೀಗಳ ಅಭಿಲಾಷೆಗೆ ಸೋಮವಾರ (ಜ 9) ಮುನ್ನುಡಿ ಬರೆಯಲಾಯಿತು.
ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ಮಾರ್ಗದರ್ಶನದಲ್ಲಿ ಶ್ರೀಕ್ಷೇತ್ರ ಗೋಕರ್ಣ ಮಹಾಬಲೇಶ್ವರ ದೇವಾಲಯದಲ್ಲಿ , ನಾಡಿನ ವಿವಿಧ ಸಂತರುಗಳಿಂದ ಲೋಕ ಕಲ್ಯಾಣಾರ್ಥ ಆತ್ಮಲಿಂಗ ಪೂಜೆ ಮತ್ತು ಸಂತರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ 'ಗೋಕರ್ಣ ಗೌರವ' ಸೋಮವಾರ ಶುಭಾರಂಭಗೊಂಡಿತು. (ಎಲ್ಲಾ ತೀರ್ಥಯಾತ್ರೆಗಿಂತ ಗೋಯಾತ್ರೆ ಶ್ರೇಷ್ಠ)
ಆಂಧ್ರಪ್ರದೇಶ ಶ್ರೀಶೈಲ ಸೂರ್ಯ ಸಿಂಹಾಸನ ಮಠಾಧೀಶ, ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು, ಆತ್ಮಲಿಂಗ ಪೂಜೆ ಮಾಡುವುದರೊಂದಿಗೆ ಕಾರ್ಯಕ್ರಮ ಶುಭಾರಂಭಗೊಂಡಿತು.

ಈ ಸಂದರ್ಭದಲ್ಲಿ ಪ್ರಧಾನ ಅರ್ಚಕ ಶಿತಿಕಂಠ ಹಿರೇ ಭಟ್ ಮತ್ತು ಉಪಾಧಿವಂತ ಮಂಡಳಿಯ ಸದಸ್ಯರು ಪೂಜಾ ಕೈಂಕರ್ಯ ನೆರವೇರಿಸಿದರು. ಆಡಳಿತಾಧಿಕಾರಿ ಜಿ ಕೆ ಹೆಗಡೆ ಫಲ ಸಮರ್ಪಿಸಿ ಗೌರವ ಸಮರ್ಪಣೆ ಮಾಡಿದರು.
ಗದಗದಲ್ಲಿ (ಜ 9) ಮಂಗಲ ಗೋಯಾತ್ರೆಯ ಅಂಗವಾಗಿ ನೆಡೆದ ಸುರಭಿ ಸಂತ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರಾಘವೇಶ್ವರ ಶ್ರೀಗಳು, ಸಾಕು ಎನ್ನುವ ಪದ ಹಿಂದೆ ಗೋವನ್ನು "ಸಾಕು" ಎನ್ನುವದಕ್ಕಾಗಿ ಬಳಸಲಾಗುತ್ತಿತ್ತು. ಇಂದು ಗೋವೇ "ಸಾಕು" ಎನ್ನುವ ಹೀನ ಸ್ಥಿತಿ ಬಂದುಬಿಟ್ಟಿದೆ ಎಂದು ಶ್ರೀಗಳು ವಿಷಾದ ವ್ಯಕ್ತಪಡಿಸಿದ್ದಾರೆ.
ಸಹಜ ಹೋಗಿ ಕೃತಕವೇ ಬದುಕಾಗಿದೆ. ಸಹಜ ಸೃಷ್ಟಿಯಾದ ಗೋವು ಹೋಗಿ ಕೃತಕ ಸೃಷ್ಟಿಯಾದ ಜರ್ಸಿ ಆಕಳು ಬಂದುಬಿಟ್ಟಿದೆ. ಗೋವಧೆಯಿಂದ ಬಂದ ಪದಾರ್ಥಗಳನ್ನು ನಮ್ಮ ಆಹಾರ ವಸ್ತುಗಳಲ್ಲಿ ಬಳಸಲಾಗುತ್ತಿದೆ.
ಮಂಗಲಪಾಂಡೆಯ ಸಂತಾನವಾದ ನಾವು ನಮಗರಿವಿಲ್ಲದೇ ಇಂತಹ ಆಹಾರವನ್ನು ಸೇವಿಸಿ ಗೋವಧೆಗೆ ಪರೋಕ್ಷ ಕಾರಣರಾಗುತ್ತಿದ್ದೇವೆ ಎಂದು ರಾಘವೇಶ್ವರ ಶ್ರೀಗಳು ಬೇಸರ ವ್ಯಕ್ತ ಪಡಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications