ಸಿಸಿ ಕ್ಯಾಮೆರಾ ಮೂಲಕವೇ ಪ್ರವಾಸಿ ದಂಪತಿಗಳಿಗೆ ಸುರಕ್ಷತೆ ಪಾಠ: ಪೊಲೀಸರಿಗೆ ಸಾರ್ವಜನಿಕರ ಪ್ರಶಂಸೆ
ಬೆಂಗಳೂರು, ಜೂನ್ 02: ತಂತ್ರಜ್ಞಾನಗಳ ಸಹಾಯದಿಂದ ಏನಲ್ಲ ಮಾಡಬಹುದು ಎಂಬುದಕ್ಕೆ ಇಲ್ಲೊಂದು ಘಟನೆ ಸಾಕ್ಷಿಯಾಗಿದೆ. ತಂತ್ರಜ್ಞಾನ ಒಳಿತಿನ ಜೊತೆಗೆ ಹೆಚ್ಚು ದುರುಪಯೋಗ ಆಗುತ್ತಿದೆ ಎಂಬ ಆರೋಪ ಇದೆ. ಬರೀ ಆಡಿಯೋ ಸಹಿತ ಸಿಸಿ ಕ್ಯಾಮರಾ ಅಳವಡಿಕೆಯಿಂದಾಗಿ ಜನರಿಗೆ ಅಗತ್ಯ ಎಚ್ಚರಿಕೆ ನೀಡಲು, ಜೀವ ಉಳಿಸಲು ಇತರ ಕಾರಣಗಳಿಗೂ ಸಹಾಯವಾಗುತ್ತಿದೆ. ತುಂಬಿ ಹರಿಯುತ್ತಿರುವ ಗಂಗಾವತಿ ನದಿ ಸೇತುವೆ ಮೇಲೆ ಪಾಪುವಿನ ಜೊತೆ ಬಂದು ಸೆಲ್ಫಿಗೆ ಮುಂದಾಗಿದ್ದ ದಂಪತಿಗಳಿಗೆ ಗೋಕರ್ಣ ಪೊಲೀಸರು ಎಚ್ಚರಿಸಿ ಕಳುಹಿಸಿದ್ದಾರೆ.
ರಾಜ್ಯದ ನಾನಾ ಕಡೆಗಳಲ್ಲಿ ಮಳೆ ಸುರಿಯುತ್ತಿದೆ. ಈಗಾಗಲೇ ಬಂದ ಮಳೆಯಿಂದಾಗಿ ಗಂಗಾವತಿ ನದಿ ಒಳಹರಿವು ಹೆಚ್ಚಾಗಿದೆ. ಇಲ್ಲಿನ ಸೇತುವೆ ಮೇಲೆ ವಾಯು ವಿಹಾರಕ್ಕೆ ಬಂದ ದಂಪತಿಗಳಿಗೆ ಪೊಲೀಸರು ಸಿಸಿಟಿವಿ ಮೂಲಕವೇ ಎಚ್ಚರಿಕೆ ನೀಡಿ, ಸುರಕ್ಷಿತವಾಗಿರುವಂತೆ ಹೇಳಿ ಸೈರನ್ ಮೊಳಗಿಸಿದ್ದಾರೆ.

ಜೂನ್ 01ರ ಭಾನುವಾರ ರಜೆ ದಿನ ಹಿನ್ನೆಲೆಯಲ್ಲಿ ಕಾರಿನಲ್ಲಿ ಬಂದಿದ್ದ ತಮ್ಮ ಮಗು ಸಮೇತ ದಂಪತಿ ಕಾರಿನಲ್ಲಿ ಬಂದಿದ್ದರು. ಮಧ್ಯಾಹ್ನ 13:20 ಗಂಟೆಯ ಸುಮಾರಿಗೆ ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗಾವತಿ ನದಿ ಸೇತುವೆ ಕಟ್ಟೆಯ ಮೇಲೆ ಪ್ರವಾಸಿ ದಂಪತಿಗಳಿಬ್ಬರು ತಮ್ಮ ಪುಟ್ಟ ಮಗುವನ್ನು ಅಪಾಯಕಾರಿ ಸ್ಥಿತಿಯಲ್ಲಿ ನಿಲ್ಲಿಸಿಕೊಂಡಿದ್ದರು. ಇನ್ನೇನು ಫೋಟೋ ತೆಗೆದುಕೊಳ್ಳಬೇಕು ಅಷ್ಟರಲ್ಲಿ ಗೋಕರ್ಣ ಠಾಣೆಯ ಪೊಲೀಸರು ಸಿಸಿ ಕ್ಯಾಮರಾಗಳಲ್ಲಿ ಗಮನಿಸಿದ್ದಾರೆ.
ವಿಶೇಷವೆಂದರೆ ಈ ಸಿಸಿ ಕ್ಯಾಮೆರಾದಲ್ಲಿ ಆಡಿಯೋ ವ್ಯವಸ್ಥೆ ಇದೆ. ಇಲ್ಲಿಂದಲೇ ಸಿಸಿ ಕ್ಯಾಮರಾ ವ್ಯಾಪ್ತಿಯಲ್ಲಿರುವವರಿಗೆ ನಿರ್ದೇಶನ ನೀಡಲೂ ಬಹುದಾದ ವ್ಯವಸ್ಥೆ ಇದಾಗಿದೆ. ಕಳೆಗೆ ತುಂಬಿ ಹರಿಯುವ ನದಿ ಮೇಲೆ ಸೇತುವೆ ಅಂಚಿನಲ್ಲಿ ಮಗು ನಿಲ್ಲಿಸಿ ಫೋಟೋ ತೆಗೆದುಕೊಳ್ಳಲು ಮುಂದಾಗಿದ್ದನ್ನು ಸಿಸಿಟಿವಿಯಲ್ಲಿ ಪೊಲೀಸರು ಗಮನಿಸಿದ್ದಾರೆ.
ಪೊಲೀಸರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
ಕೂಡಲೇ ದಂಪತಿಗಳಿಗೆ ಪೊಲೀಸರು, ಪ್ರವಾಸಿಗರೇ ನೀವು ಗೋಕರ್ಣದ ಗಂಗಾ ನದಿ ಸೇತುವೆ ಮೇಲಿದ್ದೀರಿ. ಕೆಳಗೆ ನದಿ ರಭಸವಾಗಿ ಹರಿಯುತ್ತಿದೆ. ಆದ್ದರಿಂದ ತಮ್ಮ ಮಗುವನ್ನು ಸುರಕ್ಷಿತವಾಗಿಟ್ಟುಕೊಳ್ಳಲು ಸಿಸಿ ಕ್ಯಾಮರಾ ಮೂಲಕವೇ ಎಚ್ಚರಿಸಿದ್ದಾರೆ. ಕೂಡಲೇ ದಂಪತಿ ಅಲ್ಲಿಂದ ಸುರಕ್ಷಿತವಾಗಿ ಹೊರಟು ಹೋಗಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿರುತ್ತದೆ. ತಂತ್ರಜ್ಞಾನ ಸಹಾಯದಿಂದ ಅಗತ್ಯ ಎಚ್ಚರಿಕೆ ನೀಡುವ, ಜನರ ಸುರಕ್ಷತೆ ಕಾಳಜಿ ವಹಿಸಲು ಸಾಧ್ಯವಾಗುತ್ತಿದೆ ಎಂದು ತಿಳಿಸಿದ್ದಾರೆ.
ಇಂತಹ ಆಡಿಯೋ, ವಾಯ್ಸ್ ಸಹಿತ ಸಿಸಿ ಕ್ಯಾಮೆರಾಗಳ ಬಳಕೆ ಇತ್ತೀಚೆಗೆ ಹೆಚ್ಚಿನ ಪ್ರಮಾಣದಲ್ಲಿ ಆಗುತ್ತಿದೆ. ವ್ಯವಹಾರಿಕ ದೃಷ್ಟಿಯಿಂದ ದೊಡ್ಡ ದೊಡ್ಡ ಅಂಗಡಿ ಮುಂಗಟ್ಟುಗಳಲ್ಲಿ, ಮನೆ ಮುಂದೆ, ಅಪಾರ್ಟ್ಮೆಂಟ್ಗಳಲ್ಲಿ, ಸೇತುವೆ ಸೇರಿ ಇನ್ನಿತರ ಪ್ರವಾಸಿ ಸ್ಥಳಗಳಲ್ಲಿ ಇವುಗಳ ಬಳಕೆ ಹೆಚ್ಚಾಗುತ್ತಿದೆ. ಇದು ಮಾನವ ಕೆಲಸವನ್ನು ಮತ್ತಷ್ಟು ಸರಳಗೊಳಿಸಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications