ಸೋಂದಾ ವಾದಿರಾಜ ಗುರುಗಳಿಗೆ ಸಾಲಿಗ್ರಾಮ ಹಾರ ಸಮರ್ಪಣೆ
ಶಿರಸಿ, ಮಾ 7: ಉತ್ತರಕನ್ನಡ ಜಿಲ್ಲೆ ಶಿರಸಿ ಬಳಿಯ ಪುಣ್ಯಕ್ಷೇತ್ರ ಸೋಂದಾ (ಸೋದೆ) ದಲ್ಲಿರುವ ಶ್ರೀವಾದಿರಾಜ ಗುರುಗಳ ಮೂಲ ವೃಂದಾವನಕ್ಕೆ 108 ಸಾಲಿಗ್ರಾಮಗಳನ್ನು ಹೊಂದಿರುವ ಚಿನ್ನದ ಹಾರ ಸಮರ್ಪಣೆಯಾಗಲಿದೆ,
ಸುಮಾರು 60 ಲಕ್ಷ ರೂಪಾಯಿ ವೆಚ್ಚದಲ್ಲಿ ತಯಾರಾಗಿರುವ ಈ ಹಾರವನ್ನು ಇದೇ ಭಾನುವಾರ (ಮಾ 8) ವಾದಿರಾಜ ಗುರುಗಳ ಆರಾಧನ ಮಹೋತ್ಸವದ ಸಂದರ್ಭದಲ್ಲಿ ಗುರುಗಳಿಗೆ ಸಮರ್ಪಿಸಲಾಗುತ್ತದೆ.

ಉಡುಪಿ ಪೇಜಾವರ ಮಠದ ಹಿರಿಯ ಮತ್ತು ಕಿರಿಯ ಶ್ರೀಗಳು, ಪಲಿಮಾರು ಮತ್ತು ಅದಮಾರು ಕಿರಿಯ ಶ್ರೀಗಳ ಸಮ್ಮುಖದಲ್ಲಿ ಸೋದೆ ಮಠದ ಶ್ರೀಗಳಾದ ಶ್ರೀವಿಶ್ವವಲ್ಲಭತೀರ್ಥರು ಗುರುಗಳ ವೃಂದಾವನಕ್ಕೆ ಸಮರ್ಪಣೆ ಮಾಡಲಿದ್ದಾರೆ.
ನೆಲ್ಲಿಕಾಯಿಯಿಂದ ಲಿಂಬೆಹಣ್ಣಿನ ಗಾತ್ರದ ವರೆಗಿನ ಸಾಲಿಗ್ರಾಮಗಳ ಮೂಲಕ ಈ ಹಾರ ಸಿದ್ದಪಡಿಸಲಾಗಿದೆ. ಮಂಗಳೂರಿನ ಎಸ್ ಎಲ್ ಶೇಟ್ ಮತ್ತು ತಂಡದವರ ಮಾರ್ಗದರ್ಶನದಲ್ಲಿ, ಎರಡು ತಿಂಗಳ ಸತತ ಪರಿಶ್ರಮದಿಂದ ಈ ಹಾರ ಸಿದ್ದಗೊಂಡಿದೆ.
ಬೆಂಗಳೂರಿನ ಉದ್ಯಮಿ ಸೂರ್ಯನಾರಾಯಣ ಅಡಿಗ ಅವರು ಹಾರದ ಖರ್ಚನ್ನು ಭರಿಸಿದ್ದು, ಇದಕ್ಕೆ ಸುಮಾರು ಎರಡು ಕೆಜಿಯಷ್ಟು ಚಿನ್ನವನ್ನು ಬಳಸಲಾಗಿದೆ. ಸೋದೆ ವಿಶ್ವವಲ್ಲಭ ಶ್ರೀಗಳು ನೇಪಾಳದ ಗಂಡಕಿ ನದಿ ತಟದಿಂದ ಈ ಸಾಲಿಗ್ರಾಮಗಳನ್ನು ತಂದಿದ್ದಾರೆ.
ರಮಾ ತ್ರಿವಿಕ್ರಮ ದೇವರ ಉತ್ಸವ ಮತ್ತು ಗುರುಗಳ ಆರಾಧನೆಯ ಈ ಸಮಯದಲ್ಲಿ ಚೆನ್ನೈನ ಹೋಟೆಲ್ ಉದ್ಯಮಿ ಬಾಲೂ ಭಟ್ ಶ್ವೇತವರ್ಣದ ಕುದುರೆಯನ್ನು ಮಠಕ್ಕೆ ದಾನವಾಗಿ ನೀಡಿದ್ದಾರೆ.

ಬುಧವಾರದಂದು (ಮಾ 4) ಶ್ರೀ ಸೋದೆ ಮಠದ ಶ್ರೀ ವಿಶ್ವವಲ್ಲಭ ತೀರ್ಥರ ದಿವ್ಯ ಉಪಸ್ಥಿತಿಯಲ್ಲಿ ದಿವಾನರಾದ ಶ್ರೀನಿವಾಸ ತಂತ್ರಿಗಳ ನೇತೃತ್ವದಲ್ಲಿ, ಹೆರ್ಗ ವೇದವ್ಯಾಸ ಭಟ್ ಅವರಿಂದ, ಶ್ರೀ ವಾದಿರಾಜ ಗುರುಸಾರ್ವಭೌಮರಿಗೆ ಪ್ರಿಯರಾದ ಮತ್ತು ಕ್ಷೇತ್ರದ ಕ್ಷೇತ್ರಪಾಲ ಶ್ರೀ ಭೂತರಾಜರ ವಿಶೇಷ ಪೂಜೆ ಹಾಗು ದಂಡೆಬಲಿ ಉತ್ಸವ ವೈಭವದಿಂದ ಸಂಪನ್ನಗೊಂಡಿದೆ.
ಉತ್ಸವದ ಪರ್ವಕಾಲದಲ್ಲಿ ಮಂತ್ರಾಲಯ ಮಠಾಧೀಶರಾದ ಶ್ರೀಸುಬುಧೇಂದ್ರ ತೀರ್ಥರು, ರಮಾತ್ರಿವಿಕ್ರಮ ದೇವರ, ವಾದಿರಾಜ ಗುರುಗಳ ಮತ್ತು ಭೂತರಾಜರ ದರ್ಶನವನ್ನು ಪಡೆದರು. (ಚಿತ್ರಕೃಪೆ: ಮಧ್ವೇಶ್ ತಂತ್ರಿ)
-
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications