Good News: ರಾಜ್ಯದ 1-10ನೇ ತರಗತಿ ವಿದ್ಯಾರ್ಥಿಗಳಿಗೆ ವಾರದಲ್ಲಿ 2 ದಿನ ಮೊಟ್ಟೆ ಅಥವಾ ಬಾಳೆಹಣ್ಣು ಭಾಗ್ಯ, ಅಧಿಕೃತ ಆದೇಶ
ಕರ್ನಾಟಕ, ಆಗಸ್ಟ್, 10: ರಾಜ್ಯದಲ್ಲಿನ 1-10ನೇ ತರಗತಿ ವಿದ್ಯಾರ್ಥಿಗಳಿಗೆ ವಾರದಲ್ಲಿ 2 ದಿನ ಮೊಟ್ಟೆ ಅಥವಾ ಬಾಳೆಹಣ್ಣು ವಿತರಣೆ ಮಾಡಲಾಗವುದು ಎಂದು ಇತ್ತೀಚೆಗಷ್ಟೇ ಆದೇಶ ಹೊರಡಿಸಲಾಗಿದ್ದು, ಇಂದು ಇದನ್ನು ಅಧಿಕೃತವಾಗಿ ಜಾರಿ ಮಾಡಲಾಗಿದೆ.
ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ಬಾರಿ ಮೊಟ್ಟೆ ಅಥವಾ ಶೇಂಗಾ ಚಿಕ್ಕಿ ಅಥವಾ ಬಾಳೆಹಣ್ಣನ್ನು ವಿತರಿಸಲಾಗುತ್ತಿದ್ದು, ಈಗ ವಾರದಲ್ಲಿ ಎರಡು ದಿವಸ ವಿತರಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಸಕ್ತ ಸಾಲಿನಿಂದ ಈ ಯೋಜನೆಯನ್ನು ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ವಿಸ್ತರಿಸಿ, 280 ಕೋಟಿ ರೂಪಾಯಿ ವೆಚ್ಚದಲ್ಲಿ 60 ಲಕ್ಷ ಮಕ್ಕಳಿಗೆ ಒದಗಿಸಲಾಗುವುದು ಎಂದು ತಿಳಿಸಲಾಗಿದೆ. ಕ (2)ರ 2023-24ನೇ ಸಾಲಿನ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಗೆ (ಮಧ್ಯಾಹ್ನ ಉಪಹಾರ ಯೋಜನೆ) ಸಂಬಂಧಿಸಿದ ವಾರ್ಷಿಕ ಕ್ರಿಯಾ ಯೋಜನೆ ಅನುಮೋದನೆ ನೀಡಲಾದ ದಿನಾಂಕ: 15.05.2023 ಕೇಂದ್ರ ಸರ್ಕಾರದ ಪಿ.ಎ.ಬಿ. ಸಭಾ ನಡವಳಿಯಲ್ಲಿ Flexibility for New Intervention ಚಟುವಟಿಕೆಗಳಡಿ ಇದನ್ನು ಜಾರಿ ಮಾಡಲಾಗಿದೆ.
ಕಲ್ಯಾಣ ಕರ್ನಾಟಕ ಭಾಗದ ಬೀದರ್, ಬಳ್ಳಾರಿ, ವಿಜಯನಗರ ಕಲಬುರಗಿ, ರಾಯಚೂರು, ಕೊಪ್ಪಳ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1-8ನೇ ತರಗತಿಯ ಫಲಾನುಭವಿ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕಾಂಶದ ರೂಪದಲ್ಲಿ 54 ದಿನಗಳಿಗೆ ಮೊಟ್ಟೆ ಅಥವಾ ಶೇಂಗಾ ಚಿಕ್ಕಿ ಅಥವಾ ಬಾಳೆ ಹಣ್ಣನ್ನು ವಿತರಿಸಲಾಗುವುದು. ಒಟ್ಟಾರೆ 4426.72 ಲಕ್ಷಗಳಿಗೆ (ಕೇಂದ್ರದ ಪಾಲಿನ ಅನುದಾನ ರೂ 2656.03 ಲಕ್ಷಗಳು ಮತ್ತು ರಾಜ್ಯದ ಪಾಲಿನ ಅನುದಾನ 1770.69 ಲಕ್ಷ ರೂಪಾಯಿ) ಅನುಮೋದನೆ ನೀಡಲಾಗಿರುತ್ತದೆ.
ಪ್ರಧಾನ ಮಂತ್ರಿ ಘೋಷಣ ಶಕ್ತಿ ನಿರ್ಮಾಣ ಯೋಜನೆ ಇವರ ಪ್ರಸ್ತಾವನೆಯಲ್ಲಿ 2023-24ನೇ ಸಾಲಿನ ಜುಲೈ ಆಯವ್ಯಯ ಭಾಷಣದ ಕಂಡಿಕೆ-91ರಲ್ಲಿ ಘೋಷಿಸಿರುವಂತೆ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1-10ನೇ ತರಗತಿಗಳವರೆಗೆ ವ್ಯಾಸಂಗ ಮಾಡುತ್ತಿರುವ 58,28,564 ವಿದ್ಯಾರ್ಥಿಗಳಿಗೆ, ಒಬ್ಬ ವಿದ್ಯಾರ್ಥಿಗೆ ಒಂದು ದಿನದ ಘಟಕ ವೆಚ್ಚ 6 ರೂ.ನಂತೆ, ವಾರದಲ್ಲಿ ಎರಡು ದಿವಸದಂತೆ ಒಟ್ಟು 80 ದಿನಗಳಿಗೆ ಪೂರಕ ಪೌಷ್ಟಿಕಾಂಶದ ರೂಪದಲ್ಲಿ ಅನುಮೋದನೆ ನೀಡಲು ಕೋರಲಾಗಿದೆ.
ಮೊಟ್ಟೆ/ಶೇಂಗಾ ಚಿಕ್ಕಿ/ಬಾಳೆಹಣ್ಣನ್ನು ವಿತರಿಸಲು ಅಗತ್ಯವಿರುವ 28000.00 ಲಕ್ಷ ರೂಪಾಯಿ ಅನುದಾನವನ್ನು ಭರಿಸಲು ಅನುಮೋದನೆ ನೀಡುವಂತೆ ಕೋರಲಾಗಿದೆ. ಕ್ರಮಾಂಕ(4)ರ ಆರ್ಥಿಕ ಇಲಾಖೆಯ ಟಿಪ್ಪಣಿಯಲ್ಲಿ ನೀಡಲಾಗಿರುವ Budget Adviceನಲ್ಲಿ 2023-24ನೇ ಸಾಲಿನ ಜುಲೈ ಆಯವ್ಯಯ ಭಾಷಣದ ಕಂಡಿಕೆ-91ರಲ್ಲಿನ ಘೋಷಣೆಯನ್ನು ಅನುಷ್ಠಾನ ಮಾಡಲು ಅಗತ್ಯವಿರುವ 28000.00 ಲಕ್ಷ ರೂ. ಅನುದಾನವನ್ನು ಒದಗಿಸಿಕೊಳ್ಳುವಂತೆ ತಿಳಿಸಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications