Get Updates
Get notified of breaking news, exclusive insights, and must-see stories!

Good News: ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕಿಯರಿಗೆ ಸರ್ಕಾರ ಗುಡ್ ನ್ಯೂಸ್

Good News For School Teachers: ರಾಜ್ಯದ ಸರ್ಕಾರಿ ಶಾಲೆಗಳ ಶಿಕ್ಷಕಿಯರಿಗೆ ರಾಜ್ಯ ಸರ್ಕಾರ ಶುಭಸುದ್ದಿ ನೀಡಿದೆ. ಋುತುಚಕ್ರ ರಜೆ ಮಂಜೂರು ಮಾಡಿ ಮಹತ್ವದ ಆದೇಶ ಹೊರಡಿಸಿದೆ. ಹಾಗಾದ್ರೆ, ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಈ ಆದೇಶ ಹೊರಡಿಸಿದ್ದು, ಸರ್ಕಾರಿ ಶಾಲಾ ಶಿಕ್ಷಕಿಯರಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಋುತುಚಕ್ರ ರಜೆ ಮಂಜೂರು ಮಾಡಿದ್ದಾರೆ.

Good News for Government School Teachers Karnataka Approves Paid Menstrual Leave for Women Staff

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಶಿಕ್ಷಕಿಯರಿಗೆ ವೇತನ ಸಹಿತ ಋುತುಚಕ್ರ ರಜೆ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿತ್ತು. ಶಾಲಾ ಶಿಕ್ಷಕರ ಸಂಘದ ಮನವಿಯನ್ನು ಉಲ್ಲೇಖಿಸಿರುವ ಇಲಾಖೆ, ಸರ್ಕಾರದ ಸೂಚನೆಯಂತೆ ವೇತನ ಸಹಿತ ರಜೆ ಮಂಜೂರು ಮಾಡಲಾಗಿದೆ.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಶಿಕ್ಷಕಿಯರಿಗೆ ವೇತನ ಸಹಿತ ಋುತುಚಕ್ರ ರಜೆ ನೀಡುವಂತೆ ಸರಕಾರಕ್ಕೆ ಮನವಿ ಮಾಡಿತ್ತು. ಶಾಲಾ ಶಿಕ್ಷಕರ ಸಂಘದ ಮನವಿಯನ್ನು ಉಲ್ಲೇಖಿಸಿರುವ ಇಲಾಖೆ, ಸರ್ಕಾರಿ ಶಾಲೆ ಶಿಕ್ಷಕಿಯರಿಗೆ ಋತುಚಕ್ರದ ರಜೆ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೆಎಸ್‌ಆರ್‌ಟಿಸಿ ಮಹಿಳಾ ಸಿಬ್ಬಂದಿಗೆ ರಜೆ: ಕೆಎಸ್‌ಆರ್‌ಟಿಸಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗೆ ಋುತುಚಕ್ರ ರಜೆಗೆ ಅನುಮತಿ ನೀಡಿ ನಿಗಮ ಆದೇಶ ಹೊರಡಿಸಿದೆ. 18ರಿಂದ 52 ವರ್ಷ ವಯಸ್ಸಿನ ಮಹಿಳಾ ಸಿಬ್ಬಂದಿ ಋುತುಚಕ್ರ ರಜೆ ಪಡೆಯಬಹುದು ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂಪಾಷಾ ಆದೇಶ ಹೊರಡಿಸಿದ್ದಾರೆ.

ಮಹಿಳೆಯರು ಗಮನಿಸಬೇಕಾದ ಪ್ರಮುಖ ಅಂಶಗಳು: ಸಾಂದರ್ಭಿಕ ರಜೆ ನೀಡಲು ಸಕ್ಷಮದ ಪ್ರಾಧಿಕಾರಿಯೂ ಋುತುಚಕ್ರ ರಜೆ ಮಂಜೂರು ಮಾಡಬಹುದು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಈ ರಜೆಯನ್ನು ಪಡೆಯಲು ಯಾವುದೇ ವೈದೈಕೀಯ ಪ್ರಮಾಣಪತ್ರದ ಅಗತ್ಯ ಇಲ್ಲ ಎಂದು ತಿಳಿಸಿದ್ದಾರೆ.

ರಜೆಯನ್ನು ಪ್ರತ್ಯೇಕವಾಗಿ ಹಾಜರಾತಿ ಪುಸ್ತಕದಲ್ಲಿ ನಮೂದಿಸಬೇಕು ಎಂದು ಸೂಚನೆ ನೀಡಲಾಗಿದೆ. ಋುತುಚಕ್ರದ ರಜೆಯನ್ನು ಆಯಾ ತಿಂಗಳಿನಲ್ಲೇ ಬಳಕೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದ್ದು, ಮುಂದಿನ ತಿಂಗಳಿಗೆ ವಿಸ್ತರಣೆ ಮಾಡಲು ಅವಕಾಶ ಇಲ್ಲ ಎಂದು ನಿಗಮ ಸ್ಪಷ್ಟಪಡಿಸಲಾಗಿದೆ.ಹೀಗೆ ಸರ್ಕಾರ ಮಹಿಳೆಯರಿಗೆ ಅನುಕೂಲ ಆಗುವಂತೆ ಗುಡ್‌ ನ್ಯೂಸ್‌ ನೀಡುತ್ತಲಿರುತ್ತದೆ.

ಮಧ್ಯಾಹ್ನದ ಬಿಸಿಯೂಟ ವಿಸ್ತರಣೆ: ಮಧ್ಯಾಹ್ನದ ಬಿಸಿಯೂಟವನ್ನು ಇಷ್ಟು ದಿನ ಬರೀ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಮಾತ್ರ ನೀಡಲಾಗುತ್ತಿತ್ತು. ಆದರೆ, ಇದೀಗ ಇದನ್ನು ವಿಸ್ತರಣೆ ಮಾಡುವ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ. ಹಾಗಾದ್ರೆ, ಅದೇನು ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಎಲ್‌ಕೆಜಿ, ಪಿಯುಸಿ ವಿದ್ಯಾರ್ಥಿಗಳಿಗೆ ವಿಸ್ತರಿಸಲು ರಾಜ್ಯ ಸರ್ಕಾರ ಗಟ್ಟಿ ನಿರ್ಧಾರ ಮಾಡಿದೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ಈ ಘೋಷಣೆ ಮಾಡಿದ್ದಾರೆ.

ಈ ಮಹತ್ವದ ನಿರ್ಧಾರದಿಂದ ಅದೆಷ್ಟೋ ವಿದ್ಯಾರ್ಥಿಗಳ ಹಸಿವು ನೀಗಿಸಲು ಸಾಧ್ಯ ಆಗಲಿದೆ. ಹಳ್ಳಿಗಳಿಂದ ಕಾನ್ವೆಂಟ್‌ ಹಾಗೂ ಕಾಲೇಜುಗಳಿಗೆ ಪ್ರತಿನಿತ್ಯ ಏನೆಲ್ಲಾ ಅಂದರೂ ಲಕ್ಷಾಂತರ ವಿದ್ಯಾರ್ಥಿಗಳು ಬರುತ್ತಾರೆ. ಇದರಲ್ಲಿ ಬಹುತೇಕ ಮಂದಿ ಮಧ್ಯಾಹ್ನದ ಬಿಸಿಯೂಟ ಇಲ್ಲದೆ, ಹಸಿವಿನಿಂದ ಇರುತ್ತಾರೆ. ಇದೀಗ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಮಹತ್ವದ ನಿರ್ಧಾರದಿಂದ ಈ ಸಮಸ್ಯೆ ಬರೆಹರಿದಂತಾಗಲಿದೆ.

ಸಚಿವರು ಕೊಟ್ಟಿರುವ ಮಾಹಿತಿ ಪ್ರಕಾರ, ಈ ಮಹತ್ವದ ಯೋಜನೆಯು ಮುಂದಿನ ಶೈಕ್ಷಣಿಕ ವರ್ಷದಿಂದಲೇ ರಾಜ್ಯಾದ್ಯಂತ ಜಾರಿಗೆ ಬರಲಿದೆ. ಪ್ರಸ್ತುತ ಸರ್ಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡಲಾಗುತ್ತಿದೆ. ಆದರೆ, ಗ್ರಾಮೀಣ ಭಾಗದ ಮತ್ತು ಬಡ ಕುಟುಂಬದ ಪಿಯುಸಿ ವಿದ್ಯಾರ್ಥಿಗಳು ಮಧ್ಯಾಹ್ನದ ಊಟ ಇಲ್ಲದೆ ಹಸಿದುಕೊಂಡು ಪರದಾಡುವುದನ್ನ ಗಮನಿಸಿದ ಸರ್ಕಾರ ಇವರಿಗೂ ಇದನ್ನು ವಿಸ್ತರಿಸುವ ಮಹತ್ವದ ನಿರ್ಧಾರಕ್ಕೆ ಕೈಹಾಕಿದೆ ಎನ್ನಬಹುದು.

ಇದೀಗ ಸರ್ಕಾರಿ ಶಾಲೆಗಳಲ್ಲಿ ಹೊಸದಾಗಿ ಪೂರ್ವ ಪ್ರಾಥಮಿಕ ವಿಭಾಗಗಳಾಗಿರುವ ಎಲ್‌ಕೆಜಿ ಹಾಗೂ ಯುಕೆಜಿ ಮಕ್ಕಳಿಗೂ ಸಹ ಮಧ್ಯಾಹ್ನದ ಬಿಸಿಯೂಟ ನೀಡಲು ನಿರ್ಧರಿಸಿದೆ. ಅಪೌಷ್ಟಿಕತೆಯನ್ನು ಹೋಗಲಾಡಿಸಿ, ಮಕ್ಕಳ ದೈಹಿಕ ಮತ್ತು ಬೌದ್ಧಿಕ ಬೆಳವಣಿಗೆಗೆ ಪೂರಕ ವಾತಾವರಣ ನಿರ್ಮಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎನ್ನಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+