Get Updates
Get notified of breaking news, exclusive insights, and must-see stories!

Govt Employees: ಸರ್ಕಾರಿ ನೌಕರರಿಗೆ ಈ ಜಿಲ್ಲಾಡಳಿತದಿಂದ ಗುಡ್‌ನ್ಯೂಸ್!

Govt Employees: ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚನೆ ಹಾಗೂ ಡಿಜಿಟಲ್ ಅರೆಸ್ಟ್‌ನಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು. ಕೆಲವು ವಂಚಕರು ಸರ್ಕಾರಿ ನೌಕರರು ಹಾಗೂ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಸಹ ವಂಚನೆ ನಡೆಸುತ್ತಿದ್ದಾರೆ. ಇದೀಗ ಕೆಜಿಐಡಿ ಸೌಲಭ್ಯಗಳು ಹಾಗೂ ಆರ್ಥಿಕ ವಂಚನೆ, ಡಿಜಿಟಲ್ ಅರೆಸ್ಟ್, ಸೈಬರ್ ಅಪರಾಧಗಳ ಕುರಿತು ಡಿ.2 ರಂದು ಸರಕಾರಿ ನೌಕರರಿಗೆ ವಿಶೇಷ ಉಪನ್ಯಾಸ ಆಯೋಜನೆ ಮಾಡಲಾಗಿದೆ.

ಧಾರವಾಡ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಡಿಸೆಂಬರ್ 2, 2025 ರಂದು ಸಂಜೆ 4 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೆಜಿಐಡಿ ವಂತಿಗೆ, ಸಾಲ ಸೌಲಭ್ಯಗಳು ಮತ್ತು ಆರ್ಥಿಕ ವಂಚನೆ, ಡಿಜಿಟಲ್ ಅರೆಸ್ಟ್, ಸೈಬರ್ ಅಪರಾಧಗಳ ಕುರಿತು ಹಿರಿಯ ಪೊಲೀಸ ಅಧಿಕಾರಿಗಳಿಂದ ಸರಕಾರಿ ನೌಕರರಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.

Good News for Government Staff Major Update from District Administration

ಈ ಕುರಿತು ಸುತ್ತೋಲೆ ಹೊರಡಿಸಿ, ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಸರಕಾರಿ ನೌಕರರ ಕರ್ತವ್ಯದ ಸಾಮರ್ಥ್ಯ ಹೆಚ್ಚಿಸಲು ಮತ್ತು ಆರ್ಥಿಕ ವಂಚನೆ, ಮೋಸಗಳಿಂದ ಸುರಕ್ಷಿತವಾಗಿರಲು ಅವರಲ್ಲಿ ಜಾಗೃತಿ ಮೂಡಿಸಲು ವಿಶೇಷ ಉಪನ್ಯಾಸಗಳನ್ನು ಆಯೋಜಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಎಲ್ಲ ಸರಕಾರಿ ಅಧಿಕಾರಿಗಳು ಮತ್ತು ನೌಕರರು ಜಿಲ್ಲೆಯ ಸಾರ್ವಜನಿಕರಿಗೆ ಜನಸ್ನೇಹಿ ಆಡಳಿತ ನೀಡುವ ದೃಷ್ಟಿಯಿಂದ, ಸರಕಾರಿ ನೌಕರರನ್ನು ಕೌಶಲ್ಯಭರಿತರು ಮತ್ತು ಹೆಚ್ವು ಜ್ಞಾನಯುಕ್ತರು ಆಗಿ ಮಾಡಲು ಕ್ರಮವಹಿಸಲಾಗುತ್ತಿದೆ. ಅವರು ತಮ್ಮ ಕಚೇರಿ ಕೆಲಸ ಹಾಗೂ ಇಲಾಖೆ ಆಡಳಿತವನ್ನು ಸಮರ್ಪಕವಾಗಿ, ಸಮರ್ಥವಾಗಿ ನಿರ್ವಹಿಸಲು ಅವಕಾಶವಾಗುವಂತೆ ವೃತ್ತಿಕೌಶಲ್ಯ ಭರೀತರನ್ನಾಗಿ ಸಿದ್ದಗೊಳಿಸಲು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ಪ್ರತಿ ತಿಂಗಳು ವಿಶೇಷ ಉಪನ್ಯಾಸ, ಕಾರ್ಯಾಗಾರ ಹಮ್ಮಿಕೊಳ್ಳಲು ಜಿಲ್ಲಾಡಳಿತದಿಂದ ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

ಇನ್ನು ಡಿಸೆಂಬರ್ 2ರ ಮಂಗಳವಾರ ಸಂಜೆ 4 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸರ್ಕಾರಿ ನೌಕರರ ಕೆಜಿಐಡಿ ವಂತಿಗೆ ಕಡಿತ, ಸಾಲ ಸೌಲಭ್ಯ, ಕೆಜಿಐಡಿ ಆನ್ ಲೈನ್ ಸೇವೆ, ಸೌಲಭ್ಯಗಳ ಬಳಕೆ ಕುರಿತು ಜಿಲ್ಲಾ ವಿಮಾ ಅಧಿಕಾರಿ ಜೆ.ಸಿ.ಕಠಾರಿ ಮತ್ತು ಆರ್ಥಿಕ ವಂಚನೆ, ಡಿಜಿಟಲ್ ಅರೆಸ್ಟ್, ಬ್ಯಾಂಕ್ ಹೆಸರಿನ ಮೊಸದ ಕರೆಗಳು ಹಾಗೂ ಸೈಬರ್ ಅಪರಾಧಗಳ ಕುರಿತು ಧಾರವಾಡ ಸೇನ್ ಪೊಲೀಸ ಠಾಣೆಯ ಡಿವೈಎಸ್ ಪಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿ ಶಿವಾನಂದ ಕಟಗಿ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಈ ವಿಶೇಷ ಉಪನ್ಯಾಸ ಕಾರ್ಯಕ್ರಮಕ್ಕೆ ಎಲ್ಲ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಡಿಡಿಓಗಳು,ಇಎಸ್ ಟಿ ವಿಷಯ ನಿರ್ವಾಹಕರು ಹಾಗೂ ಇತರ ನೌಕರರು ಹಾಜರಾಗಲು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸೂಚಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+