ಮುಜರಾಯಿ ದೇವಾಲಯಗಳ ಅರ್ಚಕರಿಗೆ ಸಿಹಿಸುದ್ದಿ
ಬೆಂಗಳೂರು, ಆಗಸ್ಟ್ 06; ಮುಜರಾಯಿ ಇಲಾಖೆಯ 'ಸಿ' ವರ್ಗದ ದೇವಾಲಯಗಳ ಅರ್ಚಕರು ಮತ್ತು ಕುಟುಂಬದವರು 'ಎ' ವರ್ಗದ ದೇವಾಲಯಗಳಲ್ಲಿ ವಿಶೇಷ ದರ್ಶನ, ವಸತಿ ವ್ಯವಸ್ಥೆ ಪಡೆಯಲು ಅನುಕೂಲವಾಗುವಂತೆ ಸುತ್ತೋಲೆ ಹೊರಡಿಸಲಾಗಿದೆ.
ಕರ್ನಾಟಕ ಸರ್ಕಾರದ ಆಯುಕ್ತರ ಕಾರ್ಯಾಲಯ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಈ ಕುರಿತು ಸುತ್ತೋಲೆ ಪ್ರಕಟಿಸಿದೆ. ಇದು ಕರ್ನಾಟಕ ರಾಜ್ಯದ 'ಸಿ' ವರ್ಗಗಳ ಮುಜರಾಯಿ ದೇವಾಲಯಗಳ ಅರ್ಚಕರು ಮತ್ತು ಕುಟುಂಬದವರು 'ಎ' ವರ್ಗದ ದೇವಾಲಯಗಳಲ್ಲಿ ದರ್ಶನಕ್ಕೆ ವ್ಯವಸ್ಥೆಯನ್ನು ಮಾಡುವ ಬಗ್ಗೆ ಎಂಬ ವಿಷಯ ಒಳಗೊಂಡಿದೆ.

ಈ ಸುತ್ತೋಲೆಗೆ ಶ್ರೀವತ್ಸ, ರಾಜ್ಯಾಧ್ಯಕರು, ಕರ್ನಾಟಕ ರಾಜ್ಯ ಮುಜರಾಯಿ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ನೌಕರರ ಸಂಘ (ರಿ), ಬೆಂಗಳೂರು ಇವರ ಪತ್ರವನ್ನು ಉಲ್ಲೇಖ ಮಾಡಲಾಗಿದೆ.
ಸುತ್ತೋಲೆಯ ವಿವರಗಳು; ಪ್ರವರ್ಗ 'ಸಿ' ವರ್ಗಗಳ ಅರ್ಚಕರು, ಕುಟುಂಬದವರು ದೇವಾಲಯಗಳಿಗೆ ಭೇಟಿ ನೀಡಿದಾಗ ಶೀಘ್ರ ದರ್ಶನಕ್ಕೆ ಹಾಗೂ ವಸತಿ ಸೌಲಭ್ಯ ಇದ್ದರೆ 'ಸಿ' ವರ್ಗಗಳ ಅರ್ಚಕರಿಗೆ ಅನುಕೂಲ ಕಲ್ಪಿಸಲು ಎಲ್ಲಾ ಪವರ್ಗ 'ಎ' ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸುತ್ತೋಲೆ ಮೂಲಕ ಆದೇಶ ಮಾಡಬೇಕೆಂದು ಅರ್ಚಕರ ಆಗಮಿಕರ ಮತ್ತು ನೌಕರರ ಸಂಘ ಕೋರಿತ್ತು.
ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಒಳಪಡುವ ಪವರ್ಗ 'ಸಿ' ಅಧಿಸೂಚಿತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ದೇವಾಲಯದ ಅರ್ಚಕರಿಗೆ ಏಕರೂಪದ ಗುರುತಿನ ಚೀಟಿಯನ್ನು ನೀಡುವ ಸಲುವಾಗಿ ಈ ಕೂಡಾ ಲಗತ್ತಿಸಿರುವ, ನಮೂನೆಯಂತೆ ಜಿಲ್ಲಾವಾರು, ತಾಲ್ಲೂಕುವಾರು ಕೋಡನ್ನು ನೀಡಲಾಗಿದೆ.
ಆಯಾ ಜಿಲ್ಲಾ ಮತ್ತು ತಾಲೂಕುಗಳಿಗೆ ನೀಡಲಾದ ಕೋಡನ್ನು ಬಳಸಿ, ಗುಲಾಬಿ ಬಣ್ಣದ ಗುರುತಿನ ಚೀಟಿಯನ್ನು ಸಂಬಂಧಪಟ್ಟ ಅಪರ ಜಿಲ್ಲಾಧಿಕಾರಿಯ ಸಹಿಯೊಂದಿಗೆ ತಾಲ್ಲೂಕುವಾರು ಪ್ರತಿಯೊಬ್ಬ ಅರ್ಚಕರಿಗೆ ಕೂಡಲೇ ವಿತರಿಸಲು ಹಾಗೂ ವಿತರಿಸಿದ ಬಗೆ, ಕಛೇರಿಗೆ ಮಾಹಿತಿ ನೀಡಲು ಸೂಚಿಸಲಾಗಿದೆ.
ಮಾದರಿ ಗುರುತಿನ ಚೀಟಿ; ಸುತ್ತೋಲೆಯಲ್ಲಿ ಗುರುತಿನ ಚೀಟಿಯಲ್ಲಿ ಇರಬೇಕಾದ ಅಂಶಗಳ ಕುರಿತು ಸಹ ಮಾಹಿತಿ ನೀಡಲಾಗಿದೆ.
ಗುರುತಿನ ಚೀಟಿ ಕರ್ನಾಟಕ ಸರ್ಕಾರ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಗುರುತಿನ ಚೀಟಿ ಎಂಬ ತಲೆ ಬರಹ ಹೊಂದಿರುತ್ತದೆ.
ನಂ. BN/SO....01, ಅರ್ಚಕರ ಹೆಸರು ಶ್ರೀ.... ದೇವಾಸ್ಥಾನದ ಹೆಸರು....
ಗ್ರಾಮ....... ಹೋಬಳಿ..... ತಾಲೂಕು.... ಜಿಲ್ಲೆ.... ರಕ್ತದ ಗುಂಪು... ಎಂಬ ವಿವರವನ್ನು ಒಳಗೊಂಡಿದ್ದು, ಅಪರ ಜಿಲ್ಲಾಧಿಕಾರಿಗಳ ಸಹಿ ಇರುತ್ತದೆ.
ಮುಜರಾಯಿ ಇಲಾಖೆಯು ತನ್ನ ದೇವಾಲಯಗಳಲ್ಲಿ ವಾರ್ಷಿಕ ಆದಾಯದ ಆಧಾರದ ಮೇಲೆ ಎ, ಬಿ ಮತ್ತು ಸಿ ಎಂದು ವಿಭಾಗ ಮಾಡಿದೆ. 'ಸಿ' ವರ್ಗದ ದೇವಾಲಯಗಳ ಅರ್ಚಕರು ಮತ್ತು ಕುಟುಂಬದವರು 'ಎ' ವರ್ಗದ ದೇವಾಲಯಗಳಲ್ಲಿ ವಿಶೇಷ ದರ್ಶನ, ವಸತಿ ವ್ಯವಸ್ಥೆ ಪಡೆಯಲು ಈ ಸುತ್ತೋಲೆ ಪ್ರಕಟಿಸಲಾಗಿದೆ.
ಕರ್ನಾಟಕದ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಸುಮಾರು 35 ಸಾವಿರಕ್ಕೂ ಅಧಿಕ ದೇವಾಲಯಗಳಿವೆ. ಕೆಲವು ದಿನಗಳ ಹಿಂದೆ ಇಲಾಖೆ ಇಲಾಖೆ ವ್ಯಾಪ್ತಿಯ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು.
ದೇವಾಲಯಗಳಿಗೆ ಬರುವ ಭಕ್ತರು ದೇವಾಲಯದ ಆವರಣದ ಒಳಗೆ ಮೊಬೈಲ್ ಬಳಕೆ ಮಾಡುವುದು, ಅದರ ಶಬ್ದದಿಂದ ದೇಗುಲದ ಸಿಬ್ಬಂದಿ ಹಾಗೂ ಭಕ್ತರಿಗೆ ತೊಂದರೆಯಾಗುತ್ತಿದೆ ಎಂಬ ಕಾರಣಕ್ಕೆ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿತ್ತು.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD











Click it and Unblock the Notifications